AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟ ದಿಲೀಪ್​ ಕುಮಾರ್​ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ

Dilip Kumar Hospitalized: ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ವ್ಯತ್ಯಯ ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

ಖ್ಯಾತ ನಟ ದಿಲೀಪ್​ ಕುಮಾರ್​ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ
ದಿಲೀಪ್​ ಕುಮಾರ್​-ಸೈರಾ ಬಾನು
ಮದನ್​ ಕುಮಾರ್​
|

Updated on: Jun 06, 2021 | 11:23 AM

Share

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್​ ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಅವರಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಭಾನುವಾರ (ಜೂ.6) ಬೆಳಗ್ಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಲೀಪ್​ ಕುಮಾರ್​ ಅವರಿಗೆ ಈಗ 98 ವರ್ಷ ವಯಸ್ಸು. ಹಾಗಾಗಿ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಸದ್ಯ ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ದಿಲೀಪ್​ ಕುಮಾರ್​ ಆರೋಗ್ಯ ಪರಿಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಕಳೆದ ತಿಂಗಳು ಕೂಡ ಇದೇ ಆಸ್ಪತ್ರೆಗೆ ದಿಲೀಪ್​ ಕುಮಾರ್​ ದಾಖಲಾಗಿದ್ದರು. ಸಾಮಾನ್ಯ​ ಆರೋಗ್ಯ ತಪಾಸಣೆಗಾಗಿ ಅವರು ತೆರಳಿದ್ದರು ಎನ್ನಲಾಗಿತ್ತು. ಎರಡು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್​ ಮಾಡಲಾಗಿತ್ತು. ಈಗ ಅವರು ಮತ್ತೆ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಕೊರೊನಾ ವೈರಸ್​ನಿಂದಾಗಿ ಲಾಕ್​ಡೌನ್​ ಆರಂಭ ಆಗುತ್ತಿದ್ದಂತೆಯೇ ದಿಲೀಪ್​ ಕುಮಾರ್​ ಆರೋಗ್ಯದ ಬಗ್ಗೆ ಕುಟುಂಬದವರು ಹೆಚ್ಚಿನ ಕಾಳಜಿ ವಹಿಸಲು ಆರಂಭಿದ್ದರು.

ದಿಲೀಪ್​ ಕುಮಾರ್​ ಮತ್ತು ಅವರ ಪತ್ನಿ ಸೈರಾ ಬಾಬು ಅವರು ಲಾಕ್​ಡೌನ್​ ಆರಂಭ ಆಗುವುದಕ್ಕೂ ಮುನ್ನವೇ ಐಸೊಲೇಟ್ ಆಗಿದ್ದರು. ಡಿ.11ರಂದು ದಿಲೀಪ್​ ಕುಮಾರ್​ ಜನ್ಮದಿನ. ಆದರೆ, 2020ರಲ್ಲಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ಅದೇ ವರ್ಷ ದಿಲೀಪ್ ಸಹೋದರರಾದ ಅಸ್ಲಮ್​ ಖಾನ್​ ಮತ್ತು ಎಹಸಾನ್​ ಖಾನ್​ ಅವರು ಕೊವಿಡ್​ನಿಂದ ನಿಧರಾದರು. ಹಾಗಾಗಿ ಇಡೀ ಕುಟುಂಬ ನೋವಿನಲ್ಲಿ ಇದ್ದಿದ್ದರಿಂದ ಬರ್ತ್​ಡೇ ಆಚರಣೆಗೆ ಬ್ರೇಕ್​ ಹಾಕಲಾಗಿತ್ತು.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’ 1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಿಲ್ಲ.

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ