AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Viswanath Passes Away: ಖ್ಯಾತ ನಿರ್ದೇಶಕ, ನಟ ಕೆ. ವಿಶ್ವನಾಥ್ ನಿಧನ

ತೆಲುಗಿನಲ್ಲಿ ‘ಸ್ವಾತಿ ಮುತ್ಯಂ’, ‘ಶಂಕರಾಭರಣಂ, ‘ಸಾಗರ ಸಂಗಮಮ್​’ ಸೇರಿದಂತೆ ಹಲವು ಸೂಪರ್ ಹಿಟ್​ ಚಿತ್ರಗಳನ್ನು ವಿಶ್ವನಾಥ್ ನೀಡಿದ್ದಾರೆ.

K Viswanath Passes Away: ಖ್ಯಾತ ನಿರ್ದೇಶಕ, ನಟ ಕೆ. ವಿಶ್ವನಾಥ್ ನಿಧನ
ಕೆ. ವಿಶ್ವನಾಥ್
ರಾಜೇಶ್ ದುಗ್ಗುಮನೆ
|

Updated on:Feb 03, 2023 | 7:09 AM

Share

ಚಿತ್ರರಂಗಕ್ಕೆ ಇತ್ತೀಚೆಗೆ ಸಾಲು ಸಾಲು ಶಾಕಿಂಗ್ ಸುದ್ದಿಗಳು ಎದುರಾಗುತ್ತಿವೆ. ಹಲವು ಖ್ಯಾತ ನಾಮರನ್ನು ಚಿತ್ರರಂಗ ಕಳೆದುಕೊಳ್ಳುತ್ತಿದೆ. ಈಗ ತೆಲುಗಿನ ಖ್ಯಾತ ನಿರ್ದೇಶಕ, ನಟ ಕೆ. ವಿಶ್ವನಾಥ್ (K. Vishwanath Death) ಅವರು ಹೈದರಾಬಾದ್​ನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಿಶ್ವನಾಥ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ತೆಲುಗು, ತಮಿಳು ಮಾತ್ರವಲ್ಲದೆ ವಿಶ್ವನಾಥ್ ಅವರು ಕನ್ನಡದಲ್ಲೂ ನಟಿಸಿದ್ದರು.

ತೆಲುಗಿನಲ್ಲಿ ‘ಸ್ವಾತಿ ಮುತ್ಯಂ’, ‘ಶಂಕರಾಭರಣಂ, ‘ಸಾಗರ ಸಂಗಮಮ್​’ ಸೇರಿದಂತೆ ಹಲವು ಸೂಪರ್ ಹಿಟ್​ ಚಿತ್ರಗಳನ್ನು ವಿಶ್ವನಾಥ್ ನೀಡಿದ್ದಾರೆ. ‘ಸ್ವಾತಿ ಮುತ್ಯಂ’ ಸಿನಿಮಾ ಕನ್ನಡಕ್ಕೆ ‘ಸ್ವಾತಿ ಮುತ್ತು’ ಆಗಿ ರಿಮೇಕ್ ಆಗಿತ್ತು. ‘ಸ್ವಾತಿ ಮುತ್ಯಂ’ ಮಾತ್ರವಲ್ಲದೆ ಅವರ ನಿರ್ದೇಶನದ ಇನ್ನೂ ಹಲವು ಸಿನಿಮಾಗಳು ಕನ್ನಡಕ್ಕೆ ರಿಮೇಕ್ ಆಗಿವೆ.

ವಿಶ್ವನಾಥ್ ಅವರ ಸಾಧನೆ ಅಂತಿಂಥದ್ದಲ್ಲ. ಅವರ ಕೆಲಸಕ್ಕೆ ಅನೇಕ ಪ್ರಶಸ್ತಿಗಳು ಲಭಿಸಿದ್ದವು. ದಾದಾಸಾಹೇಬ್ ಫಾಲ್ಕೆ ಸೇರಿ ಐದು ರಾಷ್ಟ್ರಪ್ರಶಸ್ತಿಗಳು ಅವರಿಗೆ ಲಭಿಸಿದ್ದವು. ತೆಲುಗಿನ ಪ್ರತಿಷ್ಠಿತ ನಂದಿ ಅವಾರ್ಡ್​ನ ಅವರು ಎಂಟು ಬಾರಿ ಪಡೆದುಕೊಂಡಿದ್ದರು.

ವಿಶ್ವನಾಥ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ನಿರ್ದೇಶಕನಾಗಿ. 1965ರಲ್ಲಿ ಅವರ ನಿರ್ದೇಶನದ ಮೊದಲ ಸಿನಿಮಾ ‘ಆತ್ಮ ಗೌರವಮ್’ ರಿಲೀಸ್ ಆಯಿತು. ಈ ಚಿತ್ರಕ್ಕೆ ನಂದಿ ಪ್ರಶಸ್ತಿ ಲಭಿಸಿತು. ನಂತರ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಅವರು ನಿರ್ದೇಶನ ಮಾಡಿದರು. ನಿರ್ದೇಶನಕ್ಕೆ ಕಾಲಿಟ್ಟು 30 ವರ್ಷಗಳ ಬಳಿಕ ಅಂದರೆ 1995ರಲ್ಲಿ ಮೊದಲ ಬಾರಿಗೆ ಅವರು ಬಣ್ಣ ಹಚ್ಚಿದರು. 2018ರಲ್ಲಿ ತೆರೆಗೆ ಬಂದ ಕನ್ನಡದ ‘ಪ್ರೇಮ ಬರಹ’ ಹಾಗೂ 2022ರ ‘ಒಪ್ಪಂದ’ ಸಿನಿಮಾದಲ್ಲಿ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:54 am, Fri, 3 February 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ