AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Passes Away: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್

Lata Mangeshkar: ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

Lata Mangeshkar Passes Away: ಗಾಯನ ನಿಲ್ಲಿಸಿದ ಭಾರತ ರತ್ನ ಲತಾ ಮಂಗೇಶ್ಕರ್
ಗಾಯಕಿ ಲತಾ ಮಂಗೇಶ್ಕರ್
TV9 Web
| Edited By: |

Updated on:Feb 06, 2022 | 9:50 AM

Share

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ತಿಳಿಸಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಎಎನ್​ಐ ಹಂಚಿಕೊಂಡಿರುವ ಟ್ವೀಟ್:

ಲತಾ ಅವರು 1929ರ ಸೆಪ್ಟೆಂಬರ್ 28ರಂದು ಜನಿಸಿದ್ದರು. ಅವರ ಮೊದಲ ಹೆಸರು ಹೇಮಾ ಮಂಗೇಶ್ಕರ್ ಎಂದಾಗಿತ್ತು. 36 ಕ್ಕೂ ಅಧಿಕ ಭಾಷೆಗಳಲ್ಲಿ ಹಾಡಿದ ಕೀರ್ತಿ ಲತಾ ಅವರದ್ದು. ಸಾವಿರಕ್ಕೂ ಅಧಿಕ ಹಿಂದಿ ಚಿತ್ರಗಳಿಗೆ ಅವರು ಹಿನ್ನೆಲೆ ಗಾಯನ ಮಾಡಿದ್ದರು. ಸಂಗೀತ ನಿರ್ದೇಶಕರಾಗಿಯೂ ಲತಾ ಅವರು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು.

ಲತಾ ಮಂಗೇಶ್ಕರ್ ಅವರ ಸಾಧನೆಗೆ ಭಾರತ ಸರ್ಕಾರ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು 2001ರಲ್ಲಿ ಪ್ರದಾನ ಮಾಡಿತ್ತು. ಚಿತ್ರರಂಗದಲ್ಲಿನ ಸೇವೆಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು 1989ರಲ್ಲಿ ಲತಾ ಅವರು ಪಡೆದಿದ್ದರು. ಇವುಗಳಲ್ಲದೇ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಲತಾ ಮಂಗೇಶ್ಕರ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ.

Published On - 9:40 am, Sun, 6 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ