AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandhya Mukherjee Death: ಪದ್ಮ ಪ್ರಶಸ್ತಿ ನಿರಾಕರಿಸಿದ್ದ ಖ್ಯಾತ ಗಾಯಕಿ ಹೃದಯಾಘಾತದಿಂದ ನಿಧನ

ಕೊರೊನಾ ವೈರಸ್ ಪ್ರಕರಣಗಳು ನಿಧಾನವಾಗಿ ಕಡಿಮೆ ಆಗುತ್ತಿವೆ. ಆದಾಗ್ಯೂ ಅನೇಕರಿಗೆ ಕೊವಿಡ್​ ಅಂಟುತ್ತಿದೆ. ಸಂಧ್ಯಾ ಮುಖರ್ಜಿ ಅವರಿಗೂ ಕೊವಿಡ್​ ಅಂಟಿತ್ತು. ಜನವರಿ ಅಂತ್ಯದ ವೇಳೆಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Sandhya Mukherjee Death: ಪದ್ಮ ಪ್ರಶಸ್ತಿ ನಿರಾಕರಿಸಿದ್ದ ಖ್ಯಾತ ಗಾಯಕಿ ಹೃದಯಾಘಾತದಿಂದ ನಿಧನ
ಸಂಧ್ಯಾ ಮುಖರ್ಜಿ
TV9 Web
| Edited By: |

Updated on: Feb 15, 2022 | 10:00 PM

Share

ಖ್ಯಾತ ಬೆಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ (Sandhya Mukherjee) ಅವರು ಮಂಗಳವಾರ (ಫೆಬ್ರವರಿ 15) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಸಂಧ್ಯಾ ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಏಕಾಏಕಿ ಹೃದಯಾಘಾತ ಸಂಭವಿಸಿದೆ. ಇತ್ತೀಚೆಗೆ ಪದ್ಮಶ್ರೀ (Padma Shre) ಪ್ರಶಸ್ತಿ ನಿರಾಕರಿಸಿದ ಕಾರಣಕ್ಕೆ ಅವರು ಸುದ್ದಿಯಾಗಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು.

ಕೊರೊನಾ ವೈರಸ್ ಪ್ರಕರಣಗಳು ನಿಧಾನವಾಗಿ ಕಡಿಮೆ ಆಗುತ್ತಿವೆ. ಆದಾಗ್ಯೂ ಅನೇಕರಿಗೆ ಕೊವಿಡ್​ ಅಂಟುತ್ತಿದೆ. ಸಂಧ್ಯಾ ಮುಖರ್ಜಿ ಅವರಿಗೂ ಕೊವಿಡ್​ ಅಂಟಿತ್ತು. ಜನವರಿ ಅಂತ್ಯದ ವೇಳೆಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಹಲವು ವಾರಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಲೇ ಇತ್ತು. ಆದರೆ, ಇಂದು ಏಕಾಏಕಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಸಂಧ್ಯಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿ ಸುದ್ದಿಯಾಗಿದ್ದರು. ಜನವರಿ 26ರಂದು ಈ ಬಗ್ಗೆ ಮಾಹಿತಿ ನೀಡಿದ್ದ ಸಂಧ್ಯಾ ಮಗಳು ಸೌಮಿ, ‘ನನ್ನ ತಾಯಿಗೆ ಸರ್ಕಾರ ಪದ್ಮಶ್ರೀ ನೀಡಲು ಬಂದಿದೆ. 90ನೇ ವಯಸ್ಸಿಗೆ ಪದ್ಮಶ್ರೀ ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಅವರು ರಾಜಕೀಯದ ಜತೆ ನಂಟು ಇಟ್ಟುಕೊಂಡಿಲ್ಲ. ಅವರು ಪದ್ಮಶ್ರೀ ನಿರಾಕರಿಸಿದ ವಿಚಾರದಲ್ಲಿ ಯಾವುದೇ ರಾಜಕೀಯ ಕಾರಣವನ್ನು ಹುಡುಕಬೇಡಿ. ಇದು ಅವಮಾನದ ರೀತಿ ಅನಿಸುತ್ತಿದೆ’ ಎಂದು ಸೌಮಿ ಹೇಳಿದ್ದರು.

60 ಮತ್ತು 70ರ ದಶಕದಲ್ಲಿ ಸಂಧ್ಯಾ ಮುಖರ್ಜಿ ಅವರು ಬೆಂಗಾಳಿ ಭಾಷೆಯಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಹನ್ನೆರಡು ಇತರ ಭಾಷೆಗಳಲ್ಲೂ ಅವರು ಹಾಡಿದ್ದಾರೆ. ಹೇಮಂತ್​ ಮುಖರ್ಜಿ ಅವರ ಜತೆ ಸೇರಿ ಸಾಕಷ್ಟು ರೊಮ್ಯಾಂಟಿಕ್​​ ಹಾಡುಗಳನ್ನು ಹಾಡಿದ್ದಾರೆ. ಪಶ್ಚಿಮ ಬಂಗಾಳ ನೀಡುವ ‘ಬಂಗಾ ಬಿಭೂಷಣ’ ಪ್ರಶಸ್ತಿಯನ್ನು ಸಂಧ್ಯಾ ಅವರಿಗೆ ನೀಡಿ ಗೌರವಿಸಲಾಗಿದೆ. ಇದು ಪಶ್ಚಿಮ ಬಂಗಾಳ ಸರ್ಕಾರ ನೀಡುವ ಅತ್ಯುತ್ತಮ ಗೌರವ ಆಗಿದೆ. 1970ರಲ್ಲಿ ತೆರೆಗೆ ಬಂದ ‘ಜಯ್ ಜಯಂತಿ’ ಸಿನಿಮಾದ ಹಾಡಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ: Sandhya Mukherjee: ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸಿದ್ದ ಗಾಯಕಿ ಸಂಧ್ಯಾ ಮುಖರ್ಜಿ ಆಸ್ಪತ್ರೆಗೆ ದಾಖಲು

ಪದ್ಮಶ್ರೀಗೆ ಕಿರಿಯ ಕಲಾವಿದರು ಹೆಚ್ಚು ಅರ್ಹರು: ಪ್ರಶಸ್ತಿ ತಿರಸ್ಕರಿಸಿದ 90ರ ಹರೆಯದ ಗಾಯಕಿ ಸಂಧ್ಯಾ ಮುಖರ್ಜಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?