AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vetrimaaran: ‘ರಾಜ ರಾಜ ಚೋಳ ಹಿಂದೂ ಅಲ್ಲ’; ಖ್ಯಾತ ಡೈರೆಕ್ಟರ್​ ಹೇಳಿಕೆಯಿಂದ ವಿವಾದ; ಕಮಲ್​ ಹಾಸನ್​ ಬೆಂಬಲ

Raja Raja Cholan: ವೆಟ್ರಿಮಾರನ್​ ಅವರು ಹೀಗೆ ಹೇಳಿಕೆ ನೀಡಿದ್ದು, ಪರ-ವಿರೋಧದ ಚರ್ಚೆಗೆ ಕಾರಣ ಆಗಿದೆ. ಅವರ​ ಮಾತಿಗೆ ಎಚ್​. ರಾಜಾ ಹಾಗೂ ಕಮಲ್​ ಹಾಸನ್​ ಪ್ರತಿಕ್ರಿಯೆ ನೀಡಿದ್ದಾರೆ.

Vetrimaaran: ‘ರಾಜ ರಾಜ ಚೋಳ ಹಿಂದೂ ಅಲ್ಲ’; ಖ್ಯಾತ ಡೈರೆಕ್ಟರ್​ ಹೇಳಿಕೆಯಿಂದ ವಿವಾದ; ಕಮಲ್​ ಹಾಸನ್​ ಬೆಂಬಲ
ವೆಟ್ರಿಮಾರನ್, ಕಮಲ್ ಹಾಸನ್
TV9 Web
| Edited By: |

Updated on: Oct 06, 2022 | 1:59 PM

Share

ತಮಿಳುನಾಡಿನ ಮೂಲ ಜನರ ಧಾರ್ಮಿಕ ಅಸ್ಮಿತೆಯ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. Tamils Are Not Hindu ಎಂಬ ವಾಕ್ಯ ಸೋಶಿಯಲ್​ ಮೀಡಿಯಾದಲ್ಲಿ ಟ್ರೆಂಡ್​ ಆಗಿದೆ. ಈ ಸಮಯದಲ್ಲಿ ಖ್ಯಾತ ನಿರ್ದೇಶಕ ವೆಟ್ರಿಮಾರನ್​ (Vetrimaaran) ಅವರು ನೀಡಿರುವ ಒಂದು ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ರಾಜ ರಾಜ ಚೋಳ ಹಿಂದೂ ಆಗಿರಲಿಲ್ಲ’ ಎಂದು ಅವರು ಹೇಳಿದ್ದಾರೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆ ಆದ ಬೆನ್ನಲ್ಲೇ ವೆಟ್ರಿಮಾರನ್​ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮುಖಂಡ ಎಚ್​​. ರಾಜಾ (H Raja) ಅವರು ಇದನ್ನು ಖಂಡಿಸಿದ್ದಾರೆ. ಆದರೆ ಕಮಲ್​ ಹಾಸನ್​ (Kamal Haasan) ಅವರು ವೆಟ್ರಿಮಾರನ್​ ಹೇಳಿಕೆಗೆ ಬೆಂಬಲ ನೀಡಿದ್ದಾರೆ.

‘ವಿಸಾರಣೈ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡುವ ಮೂಲಕ ವೆಟ್ರಿಮಾರನ್​ ಅವರು ಗುರುತಿಸಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ, ಫಿಲ್ಮ್​ ಫೇರ್​ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಸಂದಿವೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಪ್ರತಿ ಸಿನಿಮಾದಲ್ಲೂ ಅವರು ವಿಶೇಷವಾದ ಕಥಾವಸ್ತುವನ್ನು ತೆರೆಗೆ ತರುತ್ತಾರೆ. ಈಗ ಅವರು ತಮ್ಮ ಹೇಳಿಕೆಯ ಕಾರಣದಿಂದ ಸುದ್ದಿ ಆಗುತ್ತಿದ್ದಾರೆ.

‘ನಿರಂತರವಾಗಿ ನಮ್ಮ ಗುರುತುಗಳನ್ನು ನಮ್ಮಿಂದ ಕಸಿದುಕೊಳ್ಳಲಾಗಿದೆ. ವಳ್ಳುವರ್​ ಅವರನ್ನು ಕೇಸರಿಕರಣ ಮಾಡುವುದು ಹಾಗೂ ರಾಜ ರಾಜ ಚೋಳನನ್ನು ಹಿಂದೂ ಅಂತ ಕರೆಯುವುದು ನಡೆದೇ ಇದೆ’ ಎಂದು ವೆಟ್ರಿಮಾರನ್​ ಹೇಳಿದ್ದಾರೆ.

ಇದನ್ನೂ ಓದಿ
Image
Ponniyin Selvan: ಘಟಾನುಘಟಿಗಳ ‘ಪೊನ್ನಿಯಿನ್​ ಸೆಲ್ವನ್​’ ರಿಲೀಸ್​; ಹೇಗಿದೆ ಪ್ರೇಕ್ಷಕರ ಟ್ವಿಟರ್​ ವಿಮರ್ಶೆ?
Image
Aishwarya Rai: ವೇದಿಕೆ ಮೇಲೆ ಗುರು ಮಣಿರತ್ನಂ ಕಾಲಿಗೆ ನಮಸ್ಕಾರ ಮಾಡಿದ ಐಶ್ವರ್ಯಾ ರೈ​; ವಿಡಿಯೋ ವೈರಲ್​
Image
Ponniyin Selvan: 125 ಕೋಟಿ ರೂಪಾಯಿಗೆ ‘ಪೊನ್ನಿಯಿನ್​ ಸೆಲ್ವನ್​’ ಒಟಿಟಿ ಹಕ್ಕು ಮಾರಾಟ; ಮಣಿರತ್ನಂ ಚಿತ್ರಕ್ಕೆ ಭಾರಿ ಬಿಸ್ನೆಸ್​
Image
Ponniyin Selvan: ಮಣಿರತ್ನಂ ಚಿತ್ರದ ಆಫರ್​ ರಿಜೆಕ್ಟ್​ ಮಾಡಿದ್ದೇಕೆ ‘ಹೆಬ್ಬುಲಿ’ ನಟಿ ಅಮಲಾ ಪೌಲ್​?

ಸೆಪ್ಟೆಂಬರ್​ 30ರಂದು ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡಿದ್ದಾರೆ. ಚಿಯಾನ್​ ವಿಕ್ರಮ್​, ಐಶ್ವರ್ಯಾ ರೈ ಬಚ್ಚನ್​, ಜಯಂ ರವಿ, ಕಾರ್ತಿ ಮುಂತಾದವರು ನಟಿಸಿದ್ದಾರೆ. ಚೋಳರ ಇತಿಹಾಸವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಆ ಚಿತ್ರ ಬಿಡುಗಡೆ ಆದ ಬಳಿಕ ವೆಟ್ರಿಮಾರನ್​ ಅವರು ಹೀಗೆ ಹೇಳಿಕೆ ನೀಡಿದ್ದು, ಪರ-ವಿರೋಧದ ಚರ್ಚೆಗೆ ಕಾರಣ ಆಗಿದೆ.

ವೆಟ್ರಿಮಾರನ್​ ಮಾತಿಗೆ ಬಿಜೆಪಿಯ ಎಚ್​. ರಾಜಾ ಪ್ರತಿಕ್ರಿಯೆ ನೀಡಿದ್ದಾರೆ ‘ವೆಟ್ರಿಮಾರನ್​ ರೀತಿ ನಾನು ಇತಿಹಾಸವನ್ನು ಚೆನ್ನಾಗಿ ಬಲ್ಲವನಲ್ಲ. ಆದರೆ ರಾಜ ರಾಜ ಚೋಳ ನಿರ್ಮಿಸಿದ ಎರಡು ಮಸೀದಿ ಅಥವಾ ಚರ್ಚ್​ಗಳನ್ನು ಅವರು ತೋರಿಸಲಿ’ ಎಂದು ಎಚ್​. ರಾಜಾ ಹೇಳಿದ್ದಾರೆ.

ಈ ಚರ್ಚೆಯಲ್ಲಿ ನಟ ಕಮಲ್​ ಹಾಸನ್​ ಅವರ ಎಂಟ್ರಿ ಕೂಡ ಆಗಿದೆ. ವೆಟ್ರಿಮಾರನ್​ ಹೇಳಿಕೆಯನ್ನು ಕಮಲ್​ ಬೆಂಬಲಿಸಿದ್ದಾರೆ. ‘ರಾಜ ರಾಜ ಚೋಳನ ಕಾಲದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ. ಹಿಂದೂ ಅಂತ ಕರೆದಿದ್ದು ಬ್ರಿಟಿಷರು’ ಎಂದಿರುವ ಕಮಲ್​ ಹಾಸನ್​ ಅವರು, ‘8ನೇ ಶತಮಾನದಲ್ಲಿ ಹಲವು ಧರ್ಮಗಳು ಇದ್ದವು’ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್