AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೆಟ್ರಿಮಾರನ್​ಗೆ ಒದಗಿದೆ ಸಂಕಷ್ಟ

ತಮಿಳು ನಿರ್ದೇಶಕ ವೆಟ್ರಿಮಾರನ್ ಅವರ ಇತ್ತೀಚಿನ ವಿಡಿಯೋ ವೈರಲ್ ಆಗಿತ್ತು. ಇದನ್ನು ಮೀಮ್​ಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗ ಅವರ ಸಿನಿಮಾ ಯೋಜನೆಗಳು ಸಂಕಷ್ಟಕ್ಕೆ ಸಿಲುಕಿವೆ. 'ವಡಿವಾಸಲ್', 'ವಾಡಾ ಚೆನ್ನೈ 2', 'ಅರಸನ್' ನಂತಹ ಬಹುನಿರೀಕ್ಷಿತ ಚಿತ್ರಗಳು ನಿರ್ಮಾಣ ಹಂತದಲ್ಲಿ ವಿಳಂಬವಾಗಿವೆ ಅಥವಾ ಸ್ಥಗಿತಗೊಂಡಿವೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೆಟ್ರಿಮಾರನ್​ಗೆ ಒದಗಿದೆ ಸಂಕಷ್ಟ
ವೆಟ್ರಿಮಾರನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 25, 2025 | 11:11 AM

Share

ತಮಿಳು ಸಿನಿಮಾ ನಿರ್ದೇಶಕ ವೆಟ್ರಿಮಾರನ್ ಹೆಸರನ್ನು ಅನೇಕರು ಕೇಳಿರುತ್ತೀರಿ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಅವರ ಆ್ಯಕ್ಷನ್ ವೈರಲ್ ಆಗಿತ್ತು. ಯಾವುದೋ ಸಿನಿಮಾ ಈವೆಂಟ್​ನಲ್ಲಿ ಅವರು ಭಾಗಿ ಆಗಿದ್ದರು. ಆರಂಭದಲ್ಲಿ ಸಿಟ್ಟಾಗೋ ಅವರು ನಂತರ ಏಕಾಕಿ ಮುಖಭಾವ ಬದಲಿಸಿಕೊಂಡು ನಗುವಿನಿಂದ ಮಾತನಾಡುವುದನ್ನು ಕಾಣಬಹುದು. ಈ ವಿಡಿಯೋನ ಮೀಮ್​ಗಳಿಗೆ ಬಳಕೆ ಮಾಡಲಾಗಿತ್ತು. ಈಗ ಅವರ ಸಿನಿಮಾಗಳಿಗೆ ತೊಂದರೆ ಉಂಟಾಗಿದೆ. ಹಾಗಂತ ಅವರ ಆ್ಯಕ್ಷನ್​ಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ.

ವೆಟ್ರಿಮಾರನ್ ಅವರು 2007ರಲ್ಲಿ ನಿರ್ದೇಶನಕ್ಕೆ ಬಂದರು. ಆ ಬಳಿಕ ಸಾಲು ಸಾಲು ಹಿಟ್ ಸಿನಿಮಾ ನೀಡಿದರು. ‘ವಿಡುದಲೈ ಪಾರ್ಟ್ 1’ ಹಾಗೂ ‘ವಿಡುದಲೈ ಪಾರ್ಟ್ 2’ ಅವರ ನಿರ್ದೇಶನದ ಕೊನೆಯ ಸಿನಿಮಾಗಳು. ಅವರ ಬಳಿ ಇರೋ ಸಿನಿಮಾಗಳೆಲ್ಲ ನಿಂತು ಹೋಗುತ್ತಿವೆ ಎಂದು ಹೇಳಲಾಗುತ್ತಿದೆ.

ಈ ಮೊದಲು ಅವರು ಸೂರ್ಯ ಜೊತೆ ಸಿನಿಮಾ ಮಾಡಬೇಕಿತ್ತು. ಇದಕ್ಕೆ ‘ವಡಿವಾಸಲ್’ ಎಂದು ಟೈಟಲ್ ಇಡಲಾಗಿತ್ತು. ಆದರೆ ಸಿನಿಮಾ ನಿಂತು ಹೋಯಿತು. ಆ ಬಳಿಕ ಅವರು ಧನುಷ್ ಜೊತೆ ‘ವಾಡಾ ಚೆನ್ನೈ 2’ ಮಾಡಬೇಕಿತ್ತು. ಆದರೆ, ಇದು ವಿಳಂಬ ಆಗಿದೆ. ಹೀಗಾಗಿ, ಸಿಂಬು ಜೊತೆ ಸಿನಿಮಾ ಮಾಡಲು ಅವರು ಮುಂದಾದರು.

‘ಅರಸನ್’ ಎಂಬುದು ಈ ಚಿತ್ರದ ಟೈಟಲ್. ಈ ಸಿನಿಮಾ ಇನ್ನೂ ಸೆಟ್ಟೇರಿಲ್ಲ. ಆಗಲೇ ಚಿತ್ರಕ್ಕೆ ಸಾಕಷ್ಟು ತೊಂದರೆ ಎದುರಾಗಿದೆ ಎನ್ನಲಾಗಿದೆ. ಸಿಂಬು ಹಾಗೂ ನಿರ್ಮಾಣ ಸಂಸ್ಥೆ ಮಧ್ಯೆ ಕಿರಿಕ್ ಆಗಿದೆಯಂತೆ. ಹೀಗಾಗಿ ಅಂದುಕೊಂಡಂತೆ ಸಿನಿಮಾ ಸೆಟ್ಟೇರುತ್ತಿಲ್ಲ. ಸದ್ಯಕ್ಕೆ ಈ ಸಿನಿಮಾ ನಿಲ್ಲಿಸಲಾಗಿದೆಯಂತೆ. ಈ ಚಿತ್ರದ ಕೆಲಸ ಆರಂಭ ಆಗಲು ನಿರ್ಮಾಪಕರೇ ಮನಸ್ಸು ಮಾಡಬೇಕಿದೆ.

ಇದನ್ನೂ ಓದಿ: ಉತ್ತರ ಚೆನ್ನೈನಿಂದ ಮತ್ತೊಂದು ರಕ್ತ ಸಿಕ್ತ ಕತೆ ಹೊತ್ತು ತಂದ ವೆಟ್ರಿಮಾರನ್

ವೆಟ್ರಿಮಾರನ್ ಅವರು ಪ್ರತಿಭಾನ್ವಿತ ನಿರ್ದೇಶಕ. ಅವರ ಬಳಿ ಸಾಕಷ್ಟು ಟ್ಯಾಲೆಂಟ್ ಇದೆ. ಆದರೆ, ಈ ರೀತಿ ಸಿನಿಮಾ ಅರ್ಧಕ್ಕೆ ನಿಲ್ಲುವುದರಿಂದ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಹಿನ್ನಡೆ ಉಂಟಾಗುತ್ತಿದೆ ಎಂದೇ ಹೇಳಬಹುದು. ಅಲ್ಲದೆ, ಸ್ಕ್ರಿಪ್ಟ್​ಗಳಿಗೆ ಅವರು ಹಾಕಿದ ಶ್ರಮ ಕೂಡ ಸಾಕಷ್ಟು ವ್ಯರ್ಥವಾಗುತ್ತಿದೆ. ಈ ಬಗ್ಗೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:08 am, Tue, 25 November 25

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು