AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೆಟ್ರಿಮಾರನ್​ಗೆ ಒದಗಿದೆ ಸಂಕಷ್ಟ

ತಮಿಳು ನಿರ್ದೇಶಕ ವೆಟ್ರಿಮಾರನ್ ಅವರ ಇತ್ತೀಚಿನ ವಿಡಿಯೋ ವೈರಲ್ ಆಗಿತ್ತು. ಇದನ್ನು ಮೀಮ್​ಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈಗ ಅವರ ಸಿನಿಮಾ ಯೋಜನೆಗಳು ಸಂಕಷ್ಟಕ್ಕೆ ಸಿಲುಕಿವೆ. 'ವಡಿವಾಸಲ್', 'ವಾಡಾ ಚೆನ್ನೈ 2', 'ಅರಸನ್' ನಂತಹ ಬಹುನಿರೀಕ್ಷಿತ ಚಿತ್ರಗಳು ನಿರ್ಮಾಣ ಹಂತದಲ್ಲಿ ವಿಳಂಬವಾಗಿವೆ ಅಥವಾ ಸ್ಥಗಿತಗೊಂಡಿವೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೆಟ್ರಿಮಾರನ್​ಗೆ ಒದಗಿದೆ ಸಂಕಷ್ಟ
ವೆಟ್ರಿಮಾರನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 25, 2025 | 11:11 AM

Share

ತಮಿಳು ಸಿನಿಮಾ ನಿರ್ದೇಶಕ ವೆಟ್ರಿಮಾರನ್ ಹೆಸರನ್ನು ಅನೇಕರು ಕೇಳಿರುತ್ತೀರಿ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಅವರ ಆ್ಯಕ್ಷನ್ ವೈರಲ್ ಆಗಿತ್ತು. ಯಾವುದೋ ಸಿನಿಮಾ ಈವೆಂಟ್​ನಲ್ಲಿ ಅವರು ಭಾಗಿ ಆಗಿದ್ದರು. ಆರಂಭದಲ್ಲಿ ಸಿಟ್ಟಾಗೋ ಅವರು ನಂತರ ಏಕಾಕಿ ಮುಖಭಾವ ಬದಲಿಸಿಕೊಂಡು ನಗುವಿನಿಂದ ಮಾತನಾಡುವುದನ್ನು ಕಾಣಬಹುದು. ಈ ವಿಡಿಯೋನ ಮೀಮ್​ಗಳಿಗೆ ಬಳಕೆ ಮಾಡಲಾಗಿತ್ತು. ಈಗ ಅವರ ಸಿನಿಮಾಗಳಿಗೆ ತೊಂದರೆ ಉಂಟಾಗಿದೆ. ಹಾಗಂತ ಅವರ ಆ್ಯಕ್ಷನ್​ಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ.

ವೆಟ್ರಿಮಾರನ್ ಅವರು 2007ರಲ್ಲಿ ನಿರ್ದೇಶನಕ್ಕೆ ಬಂದರು. ಆ ಬಳಿಕ ಸಾಲು ಸಾಲು ಹಿಟ್ ಸಿನಿಮಾ ನೀಡಿದರು. ‘ವಿಡುದಲೈ ಪಾರ್ಟ್ 1’ ಹಾಗೂ ‘ವಿಡುದಲೈ ಪಾರ್ಟ್ 2’ ಅವರ ನಿರ್ದೇಶನದ ಕೊನೆಯ ಸಿನಿಮಾಗಳು. ಅವರ ಬಳಿ ಇರೋ ಸಿನಿಮಾಗಳೆಲ್ಲ ನಿಂತು ಹೋಗುತ್ತಿವೆ ಎಂದು ಹೇಳಲಾಗುತ್ತಿದೆ.

ಈ ಮೊದಲು ಅವರು ಸೂರ್ಯ ಜೊತೆ ಸಿನಿಮಾ ಮಾಡಬೇಕಿತ್ತು. ಇದಕ್ಕೆ ‘ವಡಿವಾಸಲ್’ ಎಂದು ಟೈಟಲ್ ಇಡಲಾಗಿತ್ತು. ಆದರೆ ಸಿನಿಮಾ ನಿಂತು ಹೋಯಿತು. ಆ ಬಳಿಕ ಅವರು ಧನುಷ್ ಜೊತೆ ‘ವಾಡಾ ಚೆನ್ನೈ 2’ ಮಾಡಬೇಕಿತ್ತು. ಆದರೆ, ಇದು ವಿಳಂಬ ಆಗಿದೆ. ಹೀಗಾಗಿ, ಸಿಂಬು ಜೊತೆ ಸಿನಿಮಾ ಮಾಡಲು ಅವರು ಮುಂದಾದರು.

‘ಅರಸನ್’ ಎಂಬುದು ಈ ಚಿತ್ರದ ಟೈಟಲ್. ಈ ಸಿನಿಮಾ ಇನ್ನೂ ಸೆಟ್ಟೇರಿಲ್ಲ. ಆಗಲೇ ಚಿತ್ರಕ್ಕೆ ಸಾಕಷ್ಟು ತೊಂದರೆ ಎದುರಾಗಿದೆ ಎನ್ನಲಾಗಿದೆ. ಸಿಂಬು ಹಾಗೂ ನಿರ್ಮಾಣ ಸಂಸ್ಥೆ ಮಧ್ಯೆ ಕಿರಿಕ್ ಆಗಿದೆಯಂತೆ. ಹೀಗಾಗಿ ಅಂದುಕೊಂಡಂತೆ ಸಿನಿಮಾ ಸೆಟ್ಟೇರುತ್ತಿಲ್ಲ. ಸದ್ಯಕ್ಕೆ ಈ ಸಿನಿಮಾ ನಿಲ್ಲಿಸಲಾಗಿದೆಯಂತೆ. ಈ ಚಿತ್ರದ ಕೆಲಸ ಆರಂಭ ಆಗಲು ನಿರ್ಮಾಪಕರೇ ಮನಸ್ಸು ಮಾಡಬೇಕಿದೆ.

ಇದನ್ನೂ ಓದಿ: ಉತ್ತರ ಚೆನ್ನೈನಿಂದ ಮತ್ತೊಂದು ರಕ್ತ ಸಿಕ್ತ ಕತೆ ಹೊತ್ತು ತಂದ ವೆಟ್ರಿಮಾರನ್

ವೆಟ್ರಿಮಾರನ್ ಅವರು ಪ್ರತಿಭಾನ್ವಿತ ನಿರ್ದೇಶಕ. ಅವರ ಬಳಿ ಸಾಕಷ್ಟು ಟ್ಯಾಲೆಂಟ್ ಇದೆ. ಆದರೆ, ಈ ರೀತಿ ಸಿನಿಮಾ ಅರ್ಧಕ್ಕೆ ನಿಲ್ಲುವುದರಿಂದ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಹಿನ್ನಡೆ ಉಂಟಾಗುತ್ತಿದೆ ಎಂದೇ ಹೇಳಬಹುದು. ಅಲ್ಲದೆ, ಸ್ಕ್ರಿಪ್ಟ್​ಗಳಿಗೆ ಅವರು ಹಾಕಿದ ಶ್ರಮ ಕೂಡ ಸಾಕಷ್ಟು ವ್ಯರ್ಥವಾಗುತ್ತಿದೆ. ಈ ಬಗ್ಗೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:08 am, Tue, 25 November 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ