AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಅಭಿಮಾನಿಗಳಿಗೆ ಶುರುವಾಗಿದೆ ಹೊಸ ಚಿಂತೆ; ‘ರಾಧೆ ಶ್ಯಾಮ್​’ ಚಿತ್ರಕ್ಕೆ ಕೈ ಕೊಡಬಹುದಾ ಗ್ರಾಫಿಕ್ಸ್​?

ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. 2022ರ ಜ.14ರಂದು ಅದ್ದೂರಿಯಾಗಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಪ್ರಭಾಸ್​ ಅಭಿಮಾನಿಗಳಿಗೆ ಶುರುವಾಗಿದೆ ಹೊಸ ಚಿಂತೆ; ‘ರಾಧೆ ಶ್ಯಾಮ್​’ ಚಿತ್ರಕ್ಕೆ ಕೈ ಕೊಡಬಹುದಾ ಗ್ರಾಫಿಕ್ಸ್​?
ಪ್ರಭಾಸ್​
TV9 Web
| Edited By: |

Updated on: Dec 25, 2021 | 9:24 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅಭಿನಯದ ‘ರಾಧೆ ಶ್ಯಾಮ್​’ ಸಿನಿಮಾ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ನಿಂದಾಗಿ ಜನರಲ್ಲಿ ಕೌತುಕ ಸೃಷ್ಟಿ ಆಗಿದೆ. ಹಲವು ಅಂಶಗಳನ್ನು ಈ ಸಿನಿಮಾ ಒಳಗೊಂಡಿದೆ ಎಂಬುದಕ್ಕೆ ಈ ಟ್ರೇಲರ್​ ಸಾಕ್ಷಿ ಒದಗಿಸಿದೆ. ‘ರಾಧೆ ಶ್ಯಾಮ್​’ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ಈಗಾಗಲೇ ಹೊರಬಂದಿರುವ ಹಾಡುಗಳಿಗೂ ಜನಮೆಚ್ಚುಗೆ ಸಿಕ್ಕಿದೆ. ಆದರೆ ಟ್ರೇಲರ್​ ಬಿಡುಗಡೆ ಆದ ಬಳಿಕ ಪ್ರಭಾಸ್​ ಅಭಿಮಾನಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಗ್ರಾಫಿಕ್ಸ್ ಕಾರಣದಿಂದ ​ಈ ಸಿನಿಮಾದ ಚಾರ್ಮ್​ ಹಾಳಾಗಬಹುದು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡಿದ್ದಾರೆ.

‘ರಾಧೆ ಶ್ಯಾಮ್​’ ಟ್ರೇಲರ್​ನಲ್ಲಿ ಕೆಲವು ದೃಶ್ಯಗಳನ್ನು ನೋಡಿ ಅಭಿಮಾನಿಗಳು ಇಂಪ್ರೆಸ್​ ಆಗಿದ್ದಾರೆ. ಆದರೆ ವಿಎಫ್​ಎಕ್ಸ್​ ಬಳಸಿರುವ ದೃಶ್ಯಗಳು ಯಾಕೋ ಜನರಿಗೆ ಇಷ್ಟ ಆದಂತಿಲ್ಲ. ಹಡಗು ಮುಳುಗುವ ದೃಶ್ಯ ಅಷ್ಟೇನೂ ಚೆನ್ನಾಗಿ ಮೂಡಿಬಂದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಇಡೀ ಸಿನಿಮಾ ಅಂದ ಕೆಡಬಹುದು ಎಂದು ಫ್ಯಾನ್ಸ್​ ಚಿಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‘ಬಾಹುಬಲಿ’ ಸಿನಿಮಾದ ಯಶಸ್ಸಿನ ನಂತರ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಸಿನಿಮಾಗಳು ಬೇರೆ ಬೇರೆ ಭಾಷೆಗೆ ಡಬ್​ ಆಗಿ ದೇಶಾದ್ಯಂತ ಬಿಡುಗಡೆ ಆಗುತ್ತವೆ. ‘ರಾಧೆ ಶ್ಯಾಮ್​’ ಕೂಡ ಅದೇ ಹಾದಿ ಹಿಡಿದಿದೆ. ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಗೆ ಈ ಚಿತ್ರ ಡಬ್​ ಆಗಿದೆ. ಎಲ್ಲ ಭಾಷೆಯಲ್ಲೂ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ರಾಧಾಕೃಷ್ಣ ಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 2022ರ ಜ.14ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಆ ಮೂಲಕ ಸಂಕ್ರಾಂತಿ ಹಬ್ಬಕ್ಕೆ ಪ್ರಭಾಸ್​ ಅಭಿಮಾನಿಗಳಿಗೆ ‘ರಾಧೆ ಶ್ಯಾಮ್​’ ಸಿನಿಮಾ ಮನರಂಜನೆ ನೀಡಲಿದೆ. ಈ ಚಿತ್ರದ ಕಥೆಯ ಬಗ್ಗೆ ಸಿನಿಪ್ರಿಯರಿಗೆ ಸಾಕಷ್ಟು ನಿರೀಕ್ಷೆ ಇದೆ. ಬಾಹುಬಲಿ ಬಳಿಕ ಆ್ಯಕ್ಷನ್​-ಹೀರೋ ಇಮೇಜ್​ಗೆ ಹೆಚ್ಚು ಒತ್ತುಕೊಟ್ಟಿದ್ದ ಪ್ರಭಾಸ್​ ಅವರು ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಸಂಪೂರ್ಣ ಲವರ್​ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ಬೇರೆಯದೇ ಫ್ಲೇವರ್​ನಲ್ಲಿ ಮೂಡಿಬಂದಿದೆ ಎಂಬ ಮಾತು ಕೇಳಿಬಂದಿದೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಇದಲ್ಲದೇ, ‘ಆದಿಪುರುಷ್​’ ಮತ್ತು ‘ಸಲಾರ್​’ ಸಿನಿಮಾ ಕೆಲಸಗಳಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:

150 ಕೋಟಿ ರೂ. ಸಂಭಾವನೆ ಪಡೆದ ಪ್ರಭಾಸ್​; ಇಷ್ಟು ಹಣಕ್ಕೆ ಅವರು ಕೆಲಸ ಮಾಡೋದು ಎಷ್ಟು ದಿನ?

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?