AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ಸೀತಾರಾಮ್​ ನಿರ್ದೇಶನದ ಹೊಸ ಧಾರಾವಾಹಿ ಶೀಘ್ರದಲ್ಲೇ ಸೆಟ್ಟೇರಲಿದೆ. ಇದಕ್ಕೆ 'ಮತ್ತೆ ಮನ್ವಂತರ' ಶೀರ್ಷಿಕೆ ಅಂತಿಮವಾಗಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರವನ್ನು ಮೇಧಾ ವಿದ್ಯಾಭೂಷಣ​ ನಿರ್ವಹಿಸುತ್ತಿದ್ದಾರೆ.

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!
‘ಮತ್ತೆ ಮನ್ವಂತರದ’ದ ನಾಯಕಿ ಮೇಧಾ- ನಿರ್ದೇಶಕ ಟಿ.ಎನ್​.ಸೀತಾರಾಮ್​
ರಾಜೇಶ್ ದುಗ್ಗುಮನೆ
| Edited By: |

Updated on:Apr 12, 2021 | 8:55 AM

Share

ಖ್ಯಾತ ನಿರ್ದೇಶಕ ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಈ ಧಾರಾವಾಹಿಗೆ ಟೈಟಲ್​ ಇಡುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಲಾಗಿತ್ತು. ಈಗ ಸಿನಿಮಾಗೆ ಟೈಟಲ್​ ಅಂತಿಮವಾಗಿದೆ. ‘ಮತ್ತೆ ಮನ್ವಂತರ’ ಎನ್ನುವ ಟೈಟಲ್​ ಮೂಲಕ ಟಿ.ಎನ್​ ಸೀತಾರಾಮ್​ ಮತ್ತೆ ಕಿರುತೆರೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

1990ರ ದಶಕದಿಂದಲೂ ಕಿರುತೆರೆಯಲ್ಲಿ ಸೀತಾರಾಮ್​ ಸಕ್ರಿಯರಾಗಿದ್ದಾರೆ. ಮುಕ್ತ, ಮಾಯಾಮೃಗ ಮುಂತಾದ ಸೀರಿಯಲ್​ಗಳು ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟವು. ಇತ್ತೀಚೆಗೆ ಅವರು ನಿರ್ದೇಶಿಸಿದ ‘ಮಗಳು ಜಾನಕಿ’ ಸೀರಿಯಲ್​ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಆ ಧಾರಾವಾಹಿ ಕಾರಣಾಂತರಗಳಿಂದ ಅರ್ಧಕ್ಕೆ ನಿಂತುಹೋಯಿತು. ಅದೇ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಈಗ ಸೀತಾರಾಮ್​ ಗುಡ್​ ನ್ಯೂಸ್​ ನೀಡಿದ್ದಾರೆ.

ಸೀತಾರಾಮ್​ ನಿರ್ದೇಶನದ ಹೊಸ ಧಾರಾವಾಹಿ ಶೀಘ್ರದಲ್ಲೇ ಸೆಟ್ಟೇರಲಿದೆ. ಇದಕ್ಕೆ ‘ಮತ್ತೆ ಮನ್ವಂತರ’ ಶೀರ್ಷಿಕೆ ಅಂತಿಮವಾಗಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರವನ್ನು ಮೇಧಾ ವಿದ್ಯಾಭೂಷಣ​ ನಿರ್ವಹಿಸುತ್ತಿದ್ದಾರೆ.

ಮೇಧಾ ವಿದ್ಯಾಭೂಷಣ್​

ಮೇಧಾ ವಿದ್ಯಾಭೂಷಣ​ ಖ್ಯಾತ ಗಾಯಕ ವಿದ್ಯಾಭೂಷಣ​ ಅವರ ಮಗಳು. ಮೇಧಾ ಕೂಡ ಗಾಯಕಿ. ಪಿ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್​ ಓದುತ್ತಿದ್ದಾರೆ. ಈಗ ಈ ಧಾರಾವಾಹಿ ಮೂಲಕ ಮೇಧಾ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮೇಧಾ ವಯಸ್ಸಿಗೂ ಮೀರಿದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಅವರ ಪಾತ್ರ ಹೇಗಿರಲಿದೆ ಎನ್ನುವ ಬಗ್ಗೆ ಈಗ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿದೆ.

ಲಾಕ್​ಡೌನ್​ ಪರಿಣಾಮವಾಗಿ ಮಗಳು ಜಾನಕಿ ಧಾರಾವಾಹಿ ಪ್ರಸಾರ ನಿಲ್ಲಿಸಬೇಕಾಯಿತು. ಅದು ಪ್ರೇಕ್ಷಕರಿಗೆ ಸಖತ್​ ಬೇಸರ ತರಿಸಿತ್ತು. ಮತ್ತೆ ಆ ಧಾರಾವಾಹಿಯನ್ನು ಶುರು ಮಾಡಿ ಎಂಬ ಕೋರಿಕೆ ಈಗಲೂ ಬರುತ್ತಲೇ ಇದೆ. ಆದರೆ ಆ ಕೋರಿಕೆ ಈಡೇರುವುದು ಅನುಮಾನ. ಅದರ ಬದಲು ಹೊಸ ಧಾರವಾಹಿಯನ್ನೇ ಸೀತಾರಾಮ್​ ನಿರ್ದೇಶಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಪಾತ್ರವರ್ಗ, ಪ್ರಸಾರ ದಿನಾಂಕದ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಒದಿ: ಮಗಳು ಜಾನಕಿ ಬಳಿಕ ಟಿಎನ್​​ ಸೀತಾರಾಮ್​ ಹೊಸ ಸೀರಿಯಲ್​! ಟೈಟಲ್​ ಇಡುವ ಅವಕಾಶ ಪ್ರೇಕ್ಷಕರಿಗೆ

Published On - 8:35 pm, Sun, 11 April 21

Follow Us
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ