AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು 16 ವರ್ಷ ಮಾತ್ರ ಬದುಕೋದು ಅಂತ ಮೊದಲೇ ತಿಳಿದಿದ್ದರೆ..’: ಮೀರಾ ಸಾವಿಗೆ ತಾಯಿಯ ಭಾವುಕ ಪತ್ರ

‘ಇಂಥ ಸ್ಥಿತಿಯಲ್ಲಿ ನಿಮ್ಮನ್ನು ನೋಡಲು ಕಷ್ಟ ಆಗುತ್ತಿದೆ. ಈ ಸಂದರ್ಭದಲ್ಲಿ ನೀವು ಗಟ್ಟಿಯಾಗಿ ಇರಿ. ನಿಮ್ಮ ಮಗಳ ನೆನಪು ನಿಮಗೆ ಶಕ್ತಿ ನೀಡುತ್ತದೆ. ವಿಜಯ್ ಆ್ಯಂಟನಿ ಅವರಿಂದ ಪಾಸಿಟಿವಿಟಿ ಪಡೆಯಿರಿ. ನೆನಪಿನ ಮೂಲಕ ಮೀರಾ ನಿಮ್ಮ ಜೊತೆಯಲ್ಲೇ ಇರುತ್ತಾಳೆ’ ಎಂದು ಅಭಿಮಾನಿಗಳು ಸಾಂತ್ವನ ತಿಳಿಸಿದ್ದಾರೆ.

‘ನೀನು 16 ವರ್ಷ ಮಾತ್ರ ಬದುಕೋದು ಅಂತ ಮೊದಲೇ ತಿಳಿದಿದ್ದರೆ..’: ಮೀರಾ ಸಾವಿಗೆ ತಾಯಿಯ ಭಾವುಕ ಪತ್ರ
ಮೀರಾ
ಮದನ್​ ಕುಮಾರ್​
|

Updated on: Oct 10, 2023 | 1:05 PM

Share

ತಮಿಳಿನ ಖ್ಯಾತ ನಟ, ಸಂಗೀತ ನಿರ್ದೇಶಕ ವಿಜಯ್​ ಆ್ಯಂಟನಿ (Vijay Antony) ಅವರ ಮಗಳು ಮೀರಾ ಆತ್ಮಹತ್ಯೆ ಮಾಡಿಕೊಂಡಿದ್ದು ಇಡೀ ಚಿತ್ರರಂಗಕ್ಕೆ ಆಘಾತ ಉಂಟುಮಾಡಿತು. ಆ ಘಟನೆ ನಡೆದು 20 ದಿನ ಕಳೆದಿದೆ. ಆದರೂ ಅವರ ಕುಟುಂಬದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಮೀರಾ (Meera) ಈ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಈ ನಡುವೆ ವಿಜಯ್ ಆ್ಯಂಟನಿ ಅವರ ಪತ್ನಿ ಫಾತಿಮಾ (Fatima) ಭಾವುಕವಾದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಮಗಳ ಸಾವಿನ ನೋವನ್ನು ಈ ಮೂಲಕ ಅವರು ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್​ ವೈರಲ್​ ಆಗಿದ್ದು, ಜನರು ಕಮೆಂಟ್​ ಮೂಲಕ ಸಾಂತ್ವನ ತಿಳಿಸುತ್ತಿದ್ದಾರೆ.

ಮೀರಾ ಅವರಿಗೆ 16 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಹಾಗೂ ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾತಿದೆ. ಆದರೆ ಅವರು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಮಗಳಿಗೆ ಉತ್ತಮವಾದ ಭವಿಷ್ಯ ರೂಪಿಸಿಕೊಡಬೇಕು ಎಂದುಕೊಂಡಿದ್ದ ವಿಜಯ್​ ಆ್ಯಂಟನಿ ಮತ್ತು ಫಾತಿಮಾ ದಂಪತಿಗೆ ತೀವ್ರ ಆಘಾತ ಆಗಿದೆ. ಈಗ ಮಗಳನ್ನು ಮಿಸ್​ ಮಾಡಿಕೊಂಡು ಫಾತಿಮಾ ಅವರು ಈ ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಿಜಯ್​ ಆ್ಯಂಟನಿ ಪುತ್ರಿ ಮೀರಾ ಮೃತದೇಹ ಪತ್ತೆ ಆದಾಗಿಂದ ಡೆತ್​ ನೋಟ್​ ಸಿಗುವವರೆಗೆ ಏನೆಲ್ಲ ಆಯ್ತು? ಇಲ್ಲಿದೆ ವಿವರ..

‘ನೀನು ಕೇವಲ 16 ವರ್ಷ ಮಾತ್ರ ಬದುಕುವುದು ಎಂಬುದು ನನಗೆ ಮೊದಲೇ ತಿಳಿದಿದ್ದರೆ ನಾನು ನಿನ್ನನ್ನು ನನ್ನ ಸನಿಹದಲ್ಲೇ ಇಟ್ಟುಕೊಳ್ಳುತ್ತಿದ್ದೆ. ಸೂರ್ಯ, ಚಂದ್ರರಿಗೂ ನಿನ್ನನ್ನು ತೋರಿಸುತ್ತಿರಲಿಲ್ಲ. ನಾನು ನಿನ್ನ ಯೋಚನೆಯಲ್ಲೇ ಮುಳುಗಿ ಸಾಯುತ್ತಿದ್ದೇನೆ. ನೀನನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಅಪ್ಪ-ಅಮ್ಮನ ಬಳಿಗೆ ಮರಳಿ ಬಾ. ಲಾರಾ ನಿನಗಾಗಿ ಕಾಯುತ್ತಿದ್ದಾಳೆ’ ಎಂದು ಬರೆದುಕೊಂಡಿರುವ ಫಾತಿಮಾ ಅವರು ಇದರ ಜೊತೆ ಒಂದು ಫೋಟೋವನ್ನು ಪೋಸ್ಟ್​ ಮಾಡಿದ್ದಾರೆ.

‘ಇಂಥ ಸ್ಥಿತಿಯಲ್ಲಿ ನಿಮ್ಮನ್ನು ನೋಡಲು ಕಷ್ಟ ಆಗುತ್ತಿದೆ. ಈ ಸಂದರ್ಭದಲ್ಲಿ ನೀವು ಗಟ್ಟಿಯಾಗಿ ಇರಿ. ನಿಮ್ಮ ಮಗಳ ನೆನಪು ನಿಮಗೆ ಶಕ್ತಿ ನೀಡುತ್ತದೆ. ವಿಜಯ್ ಆ್ಯಂಟನಿ ಅವರಿಂದ ಪಾಸಿಟಿವಿಟಿ ಪಡೆಯಿರಿ. ತಾಯಿಯ ಪ್ರೀತಿ ಎಂಬುದು ಸಮುದ್ರಕ್ಕಿಂತಲೂ ಆಳ. ನೆನಪಿನ ಮೂಲಕ ಮೀರಾ ನಿಮ್ಮ ಜೊತೆಯಲ್ಲೇ ಇರುತ್ತಾಳೆ. ನಿಮಗಾಗಿ ನಾವು ಪ್ರಾರ್ಥಿಸುತ್ತೇವೆ’ ಎಂಬಿತ್ಯಾದಿ ಕಮೆಂಟ್​ಗಳ ಮೂಲಕ ಅಭಿಮಾನಿಗಳು ಸಮಾಧಾನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?