AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ನಟನಾಗಿ ವಿಜಯ್​ ದೇವರಕೊಂಡ ಲೈಫ್​ನಲ್ಲಿ ಹೊಸ ಮೈಲಿಗಲ್ಲು

Dabboo Ratnani's Calendar 2021: ಡಬ್ಬೂ ರತ್ನಾನಿ ಕ್ಯಾಲೆಂಡರ್​ನಲ್ಲಿ ಇಲ್ಲಿವರೆಗೆ ಕೇವಲ ಬಾಲಿವುಡ್​ ಸ್ಟಾರ್ಸ್​ಗಳಿಗೆ ಮಾತ್ರ ಮನ್ನಣೆ ಸಿಗುತ್ತಿತ್ತು. ಅಭಿಷೇಕ್​ ಬಚ್ಚನ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​, ಸನ್ನಿ ಲಿಯೋನ್​ ಸೇರಿ ಹಿಂದಿ ಚಿತ್ರರಂಗದ ಸಾಕಷ್ಟು ಕಲಾವಿದರು ಇದರ ಭಾಗವಾಗಿದ್ದಾರೆ.

ದಕ್ಷಿಣ ಭಾರತದ ನಟನಾಗಿ ವಿಜಯ್​ ದೇವರಕೊಂಡ ಲೈಫ್​ನಲ್ಲಿ ಹೊಸ ಮೈಲಿಗಲ್ಲು
ವಿಜಯ್ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on: Jun 14, 2021 | 8:20 PM

Share

ದಕ್ಷಿಣ ಭಾರತ ಚಿತ್ರರಂಗ ಈಗ ಬಾಲಿವುಡ್​ಗೆ ಸರಿಸಾಟಿಯಾಗಿ ನಿಂತಿದೆ. ದೊಡ್ಡ ಬಜೆಟ್​ಗಳ ಸಿನಿಮಾಗಳ ಜತೆಗೆ ಮೇಕಿಂಗ್​ನಲ್ಲೂ ಇಡೀ ಭಾರತದ ಗಮನ ಸೆಳೆಯುವ ಪ್ರಯತ್ನವನ್ನು ಮಾಡುವಲ್ಲಿ ದಕ್ಷಿಣದ ಚಿತ್ರರಂಗ ಯಶಸ್ವಿಯಾಗಿದೆ. ‘ಬಾಹುಬಲಿ’, ‘ಕೆಜಿಎಫ್’ ಸರಣಿಯ ಚಿತ್ರಗಳು ಇದಕ್ಕೆ ಜೀವಂತ ಉದಾಹರಣೆ. ಹೀಗಾಗಿ, ದಕ್ಷಿಣ ಭಾರತದ ನಟರಿಗೆ ಹೆಚ್ಚು ಮನ್ನಣೆ ಸಿಗುತ್ತಿದೆ. ಈಗ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್​ ಫೋಟೋಗ್ರಾಫರ್​ ಡಬ್ಬೂ ರತ್ನಾನಿ ಕ್ಯಾಲೆಂಡರ್​ನ ಭಾಗವಾಗೋಕೆ ದಕ್ಷಿಣ ಭಾರತದ ನಟನಿಗೆ ಅವಕಾಶ ಸಿಕ್ಕಿದೆ.

ಹೌದು, ಡಬ್ಬೂ ರತ್ನಾನಿ ಕ್ಯಾಲೆಂಡರ್​ನಲ್ಲಿ ಇಲ್ಲಿವರೆಗೆ ಕೇವಲ ಬಾಲಿವುಡ್​ ಸ್ಟಾರ್ಸ್​ಗಳಿಗೆ ಮಾತ್ರ ಮನ್ನಣೆ ಸಿಗುತ್ತಿತ್ತು. ಅಭಿಷೇಕ್​ ಬಚ್ಚನ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​, ಸನ್ನಿ ಲಿಯೋನ್​ ಸೇರಿ ಹಿಂದಿ ಚಿತ್ರರಂಗದ ಸಾಕಷ್ಟು ಕಲಾವಿದರು ಇದರ ಭಾಗವಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ದಕ್ಷಿಣದ ಸ್ಟಾರ್​ಗೆ ಇದರಲ್ಲಿ ಪಾಲ್ಗೊಳ್ಳೋಕೆ ಅವಕಾಶ ಸಿಕ್ಕಿದೆ. ವಿಜಯ್​ ದೇವರಕೊಂಡ ಈಗ ‘ಡಬ್ಬೂ ರತ್ನಾನಿ 2021’ ಕ್ಯಾಲೆಂಡರ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ದುಬಾರಿ ಬೆಲೆಯ ಟ್ರಂಫ್ ಕಂಪೆನಿಯ​ ಬೈಕ್​ ಮೇಲೆ ವಿಜಯ್ ಕುಳಿತಿದ್ದಾರೆ. ಬ್ಲ್ಯಾಕ್​-ಆ್ಯಂಡ್​ ವೈಟ್​ನಲ್ಲಿ ಈ ಚಿತ್ರ ಮೂಡಿ ಬಂದಿದೆ. ಈ ಫೋಟೋದಲ್ಲಿ ಸಖತ್​ ಹಾಟ್​ ಆಗಿ ಅವರು ಕಾಣಿಸಿಕೊಂಡಿದ್ದಾರೆ. ವಿಜಯ್​ ಅವರ ಕೈನಲ್ಲಿರುವ ಮಸಲ್​ ಕೂಡ ಅದ್ಭುತವಾಗಿ ಕಾಣಿಸಿದೆ.

‘ಲೈಗರ್’​ ಚಿತ್ರದಲ್ಲಿ ವಿಜಯ್​ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 9ರಂದು ಸಿನಿಮಾ ತೆರೆಗೆ ಬರುತ್ತಿದೆ. ಸಿಂಹ ಹಾಗೂ ಹುಲಿಯಿಂದ ಹುಟ್ಟಿದ ತಳಿಗೆ LIGER ಎಂದು ಕರೆಯಲಾಗುತ್ತದೆ. ಲಾಕ್​ಡೌನ್​ಗೂ ಮೊದಲು ‘ಲೈಗರ್’​ ಚಿತ್ರದ ಶೂಟಿಂಗ್​ಗಾಗಿ ವಿಜಯ್​ ಸಾಕಷ್ಟು ಬಾರಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಅವರು ರಶ್ಮಿಕಾ ಜತೆ ಕಾಣಿಸಿಕೊಂಡಿದ್ದ ಫೋಟೋಗಳು ವೈರಲ್​ ಆಗಿದ್ದವು. ಈಗ ಲಾಕ್​ಡೌನ್​ ಪೂರ್ಣಗೊಂಡಿದ್ದರಿಂದ ವಿಜಯ್​ ಮತ್ತೆ ಮುಂಬೈಗೆ ತೆರಳಿದ್ದಾರೆ.

ಇದನ್ನೂ ಓದಿ: Vijay Devarakonda: ಮನೆಯಲ್ಲೇ ಕುಳಿತು ಓಟಿಟಿಗಾಗಿ ಮಾಸ್ಟರ್​ ಪ್ಲ್ಯಾನ್​ ಮಾಡಿದ್ರಾ ವಿಜಯ್​ ದೇವರಕೊಂಡ?

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ