AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದ ನಟನಾಗಿ ವಿಜಯ್​ ದೇವರಕೊಂಡ ಲೈಫ್​ನಲ್ಲಿ ಹೊಸ ಮೈಲಿಗಲ್ಲು

Dabboo Ratnani's Calendar 2021: ಡಬ್ಬೂ ರತ್ನಾನಿ ಕ್ಯಾಲೆಂಡರ್​ನಲ್ಲಿ ಇಲ್ಲಿವರೆಗೆ ಕೇವಲ ಬಾಲಿವುಡ್​ ಸ್ಟಾರ್ಸ್​ಗಳಿಗೆ ಮಾತ್ರ ಮನ್ನಣೆ ಸಿಗುತ್ತಿತ್ತು. ಅಭಿಷೇಕ್​ ಬಚ್ಚನ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​, ಸನ್ನಿ ಲಿಯೋನ್​ ಸೇರಿ ಹಿಂದಿ ಚಿತ್ರರಂಗದ ಸಾಕಷ್ಟು ಕಲಾವಿದರು ಇದರ ಭಾಗವಾಗಿದ್ದಾರೆ.

ದಕ್ಷಿಣ ಭಾರತದ ನಟನಾಗಿ ವಿಜಯ್​ ದೇವರಕೊಂಡ ಲೈಫ್​ನಲ್ಲಿ ಹೊಸ ಮೈಲಿಗಲ್ಲು
ವಿಜಯ್ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on: Jun 14, 2021 | 8:20 PM

Share

ದಕ್ಷಿಣ ಭಾರತ ಚಿತ್ರರಂಗ ಈಗ ಬಾಲಿವುಡ್​ಗೆ ಸರಿಸಾಟಿಯಾಗಿ ನಿಂತಿದೆ. ದೊಡ್ಡ ಬಜೆಟ್​ಗಳ ಸಿನಿಮಾಗಳ ಜತೆಗೆ ಮೇಕಿಂಗ್​ನಲ್ಲೂ ಇಡೀ ಭಾರತದ ಗಮನ ಸೆಳೆಯುವ ಪ್ರಯತ್ನವನ್ನು ಮಾಡುವಲ್ಲಿ ದಕ್ಷಿಣದ ಚಿತ್ರರಂಗ ಯಶಸ್ವಿಯಾಗಿದೆ. ‘ಬಾಹುಬಲಿ’, ‘ಕೆಜಿಎಫ್’ ಸರಣಿಯ ಚಿತ್ರಗಳು ಇದಕ್ಕೆ ಜೀವಂತ ಉದಾಹರಣೆ. ಹೀಗಾಗಿ, ದಕ್ಷಿಣ ಭಾರತದ ನಟರಿಗೆ ಹೆಚ್ಚು ಮನ್ನಣೆ ಸಿಗುತ್ತಿದೆ. ಈಗ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್​ ಫೋಟೋಗ್ರಾಫರ್​ ಡಬ್ಬೂ ರತ್ನಾನಿ ಕ್ಯಾಲೆಂಡರ್​ನ ಭಾಗವಾಗೋಕೆ ದಕ್ಷಿಣ ಭಾರತದ ನಟನಿಗೆ ಅವಕಾಶ ಸಿಕ್ಕಿದೆ.

ಹೌದು, ಡಬ್ಬೂ ರತ್ನಾನಿ ಕ್ಯಾಲೆಂಡರ್​ನಲ್ಲಿ ಇಲ್ಲಿವರೆಗೆ ಕೇವಲ ಬಾಲಿವುಡ್​ ಸ್ಟಾರ್ಸ್​ಗಳಿಗೆ ಮಾತ್ರ ಮನ್ನಣೆ ಸಿಗುತ್ತಿತ್ತು. ಅಭಿಷೇಕ್​ ಬಚ್ಚನ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​, ಸನ್ನಿ ಲಿಯೋನ್​ ಸೇರಿ ಹಿಂದಿ ಚಿತ್ರರಂಗದ ಸಾಕಷ್ಟು ಕಲಾವಿದರು ಇದರ ಭಾಗವಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ದಕ್ಷಿಣದ ಸ್ಟಾರ್​ಗೆ ಇದರಲ್ಲಿ ಪಾಲ್ಗೊಳ್ಳೋಕೆ ಅವಕಾಶ ಸಿಕ್ಕಿದೆ. ವಿಜಯ್​ ದೇವರಕೊಂಡ ಈಗ ‘ಡಬ್ಬೂ ರತ್ನಾನಿ 2021’ ಕ್ಯಾಲೆಂಡರ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ದುಬಾರಿ ಬೆಲೆಯ ಟ್ರಂಫ್ ಕಂಪೆನಿಯ​ ಬೈಕ್​ ಮೇಲೆ ವಿಜಯ್ ಕುಳಿತಿದ್ದಾರೆ. ಬ್ಲ್ಯಾಕ್​-ಆ್ಯಂಡ್​ ವೈಟ್​ನಲ್ಲಿ ಈ ಚಿತ್ರ ಮೂಡಿ ಬಂದಿದೆ. ಈ ಫೋಟೋದಲ್ಲಿ ಸಖತ್​ ಹಾಟ್​ ಆಗಿ ಅವರು ಕಾಣಿಸಿಕೊಂಡಿದ್ದಾರೆ. ವಿಜಯ್​ ಅವರ ಕೈನಲ್ಲಿರುವ ಮಸಲ್​ ಕೂಡ ಅದ್ಭುತವಾಗಿ ಕಾಣಿಸಿದೆ.

‘ಲೈಗರ್’​ ಚಿತ್ರದಲ್ಲಿ ವಿಜಯ್​ ನಟಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 9ರಂದು ಸಿನಿಮಾ ತೆರೆಗೆ ಬರುತ್ತಿದೆ. ಸಿಂಹ ಹಾಗೂ ಹುಲಿಯಿಂದ ಹುಟ್ಟಿದ ತಳಿಗೆ LIGER ಎಂದು ಕರೆಯಲಾಗುತ್ತದೆ. ಲಾಕ್​ಡೌನ್​ಗೂ ಮೊದಲು ‘ಲೈಗರ್’​ ಚಿತ್ರದ ಶೂಟಿಂಗ್​ಗಾಗಿ ವಿಜಯ್​ ಸಾಕಷ್ಟು ಬಾರಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಅವರು ರಶ್ಮಿಕಾ ಜತೆ ಕಾಣಿಸಿಕೊಂಡಿದ್ದ ಫೋಟೋಗಳು ವೈರಲ್​ ಆಗಿದ್ದವು. ಈಗ ಲಾಕ್​ಡೌನ್​ ಪೂರ್ಣಗೊಂಡಿದ್ದರಿಂದ ವಿಜಯ್​ ಮತ್ತೆ ಮುಂಬೈಗೆ ತೆರಳಿದ್ದಾರೆ.

ಇದನ್ನೂ ಓದಿ: Vijay Devarakonda: ಮನೆಯಲ್ಲೇ ಕುಳಿತು ಓಟಿಟಿಗಾಗಿ ಮಾಸ್ಟರ್​ ಪ್ಲ್ಯಾನ್​ ಮಾಡಿದ್ರಾ ವಿಜಯ್​ ದೇವರಕೊಂಡ?

ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್​ ಮಗು ಯಥರ್ವ್​ ಯಶ್​ ಮುದ್ದಾದ ನಗು; ಇಲ್ಲಿದೆ ವಿಡಿಯೋ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ