ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ

|

Updated on: Sep 26, 2023 | 8:05 AM

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡರು. ಆ ಬಳಿಕ ಅವರು ಮತ್ತೆ ಒಂದಾಗಿದ್ದು ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮೊದಲ ಸಿನಿಮಾ ಹಿಟ್ ಆದರೆ, ಎರಡನೇ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಈಗ ಈ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿದೆ.

ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ
ರಶ್ಮಿಕಾ-ವಿಜಯ್
Follow us on

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಅವರದ್ದು ಹಿಟ್ ಜೋಡಿ ಎಂದು ಕರೆಸಿಕೊಂಡಿದೆ. ಎರಡು ಸಿನಿಮಾಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದಾರೆ. ಈಗ ಮೂರನೇ ಸಿನಿಮಾದಲ್ಲಿ ಜೊತೆಗೆ ನಟಿಸಲು ಇವರು ರೆಡಿ ಆಗಿದ್ದಾರೆ. ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡರು. ಆ ಬಳಿಕ ಅವರು ಮತ್ತೆ ಒಂದಾಗಿದ್ದು ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮೊದಲ ಸಿನಿಮಾ ಹಿಟ್ ಆದರೆ, ಎರಡನೇ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಈಗ ಈ ಜೋಡಿ ಮೂರನೇ ಬಾರಿಗೆ ಒಂದಾಗುತ್ತಿದೆ.

ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಸಿನಿಮಾದ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ನಟನೆಯ 12ನೇ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ. ಈ ಚಿತ್ರಕ್ಕೆ ಗೌತಮ್ ನಾಯ್ಡು ತಿಣ್ಣನುರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಅವರು ‘ಜೆರ್ಸಿ’ ಚಿತ್ರದ ಮೂಲಕ ಗೆದ್ದು ಬೀಗಿದ್ದರು. ಈಗ ಅವರು ವಿಜಯ್ ದೇವರಕೊಂಡ ಜೊತೆ ಕಮಾಲ್ ಮಾಡಲು ರೆಡಿ ಆಗಿದ್ದಾರೆ.


ಇದನ್ನೂ ಓದಿ: ಏಕಕಾಲಕ್ಕೆ ಮೂರು ಸಿನಿಮಾಗಳಲ್ಲಿ ಬ್ಯುಸಿ ಆದ ಟಾಲಿವುಡ್​ ನಟ ವಿಜಯ್​ ದೇವರಕೊಂಡ

ಈ ಮೊದಲು ಶ್ರೀಲೀಲಾ ಅವರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಸದ್ಯ ಶ್ರೀಲೀಲಾ ಅವರು ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅದರ ಮಧ್ಯೆ ಈ ಚಿತ್ರಕ್ಕೂ ಅವರು ಗ್ರೀನ್ ಸಿಗ್ನಲ್ ನೀಡಿದ್ದರು. ಆದರೆ, ಡೇಟ್​ ಹೊಂದಿಸಲು ಆಗದ ಕಾರಣ ಶ್ರೀಲೀಲಾ ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ