AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಜೊತೆಗಿನ ನಿಶ್ಚಿತಾರ್ಥ ವದಂತಿ; ಸ್ಪಷ್ಟನೆ ನೀಡಿದ ವಿಜಯ್ ದೇವರಕೊಂಡ ಟೀಂ

ಆಗಾಗ ಈ ಜೋಡಿ ಪಾರ್ಟಿ, ಡಿನ್ನರ್ ಹಾಗೂ ವೆಕೇಶನ್​ಗೆ ಒಟ್ಟಿಗೆ ತೆರಳಿ ಸುದ್ದಿ ಆಗುತ್ತದೆ. ಈಗ ಇವರು ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಇದನ್ನು ವಿಜಯ್ ದೇವರಕೊಂಡ ಟೀಂ ಅಲ್ಲಗಳೆದಿದೆ.  

ರಶ್ಮಿಕಾ ಜೊತೆಗಿನ ನಿಶ್ಚಿತಾರ್ಥ ವದಂತಿ; ಸ್ಪಷ್ಟನೆ ನೀಡಿದ ವಿಜಯ್ ದೇವರಕೊಂಡ ಟೀಂ
ವಿಜಯ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jan 09, 2024 | 2:34 PM

Share

ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ ಎರಡನೇ ವಾರದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಜೋರಾಗಿದೆ. ಇವರಿಬ್ಬರ ಪ್ರೀತಿಗೆ ಹಿರಿಯರ ಆಶೀರ್ವಾದ ಸಿಕ್ಕಿದ್ದು, ಶೀಘ್ರವೇ ಹೊಸ ಸುದ್ದಿ ಸಿಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವದಂತಿಗಳಿಗೆ ವಿಜಯ್ ದೇವರಕೊಂಡ ತಂಡ ಪ್ರತಿಕ್ರಿಯಿಸಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮದುವೆ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದೆ.

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಎರಡೂ ಸಿನಿಮಾಗಳಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟ ಆಗಿತ್ತು. ಹಲವು ಸಮಯದಿಂದ ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಆಗಾಗ ಈ ಜೋಡಿ ಪಾರ್ಟಿ, ಡಿನ್ನರ್ ಹಾಗೂ ವೆಕೇಶನ್​ಗೆ ಒಟ್ಟಿಗೆ ತೆರಳಿ ಸುದ್ದಿ ಆಗುತ್ತದೆ. ಈಗ ಇವರು ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಇದನ್ನು ವಿಜಯ್ ದೇವರಕೊಂಡ ಟೀಂ ಅಲ್ಲಗಳೆದಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲಿನಿಂದಲೂ ತಾವು ಬೆಸ್ಟ್ ಫ್ರೆಂಡ್ಸ್ ಎಂದು ಹೇಳುತ್ತಲೇ ಬರುತ್ತಿದ್ದಾರೆ. ಕಳೆದ ವರ್ಷ ಇಬ್ಬರಿಗೂ ಚಿತ್ರರಂಗದಲ್ಲಿ ಗೆಲುವು ಸಿಕ್ಕಿದೆ. ‘ಖುಷಿ’ ಚಿತ್ರದ ಮೂಲಕ ವಿಜಯ್ ದೇವರಕೊಂಡ ದೊಡ್ಡ ಗೆಲುವು ಕಂಡಿದ್ದಾರೆ. ಕಳೆದ ವರ್ಷ ತೆರೆಕಂಡ ಈ ಸಿನಿಮಾ ಹಿಟ್ ಆಯಿತು. ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಮೃಣಾಲ್ ಠಾಕೂರ್ ಇದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಖ್ಯಾತಿಯ ಪರಶುರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 2ನೇ ವಾರದಲ್ಲಿ ರಶ್ಮಿಕಾ-ವಿಜಯ್​ ದೇವರಕೊಂಡ ನಿಶ್ಚಿತಾರ್ಥ? ಕೇಳಿಬರ್ತಿದೆ ಗುಸುಗುಸು

ರಶ್ಮಿಕಾ ಅವರು ‘ಅನಿಮಲ್’ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಪಡೆದುಕೊಂಡಿದ್ದಾರೆ. ರಣಬೀರ್ ಕಪೂರ್ ಅಭಿನಯದ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ನಟಿಸುತ್ತಿರುವ ‘ಪುಷ್ಪ 2’ ಚಿತ್ರದ ಮೇಲೆ ಎಲ್ಲರ ದೃಷ್ಟಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ