ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ

‘ಖುಷಿ’ ಸಿನಿಮಾದಲ್ಲಿ ಕಾರು ಚೇಸಿಂಗ್ ದೃಶ್ಯವೊಂದಿದೆ. ಇದರ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಈ ವೇಳೆ ದೊಡ್ಡ ಕೆರೆಯಲ್ಲಿ ಬಿದ್ದಿದೆ. ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ

ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ
ಸಮಂತಾ-ವಿಜಯ್ ದೇವರಕೊಂಡ
Follow us
| Updated By: ರಾಜೇಶ್ ದುಗ್ಗುಮನೆ

Updated on: May 23, 2022 | 7:59 PM

ನಟಿ ಸಮಂತಾ (Samantha) ಹಾಗೂ ವಿಜಯ್ ದೇವರಕೊಂಡ ‘ಖುಷಿ’ ಚಿತ್ರಕ್ಕಾಗಿ (Kushi Movie) ಒಂದಾಗಿದ್ದಾರೆ. ಈ ಸಿನಿಮಾದ ಬಹುತೇಕ ಕಥೆ ಕಾಶ್ಮೀರದಲ್ಲಿ ನಡೆಯಲಿದೆ. ಹೀಗಾಗಿ, ಕಾಶ್ಮೀರದಲ್ಲಿ ಶೂಟಿಂಗ್​ ಭರದಿಂದ ಸಾಗುತ್ತಿದೆ. ಈ ಮಧ್ಯೆ ಅವಘಡವೊಂದು ಸಂಭವಿಸಿದೆ. ಶೂಟಿಂಗ್ ವೇಳೆ ಕಾರು ಪಲ್ಟಿ ಆಗಿದೆ. ಇದರಿಂದ ಕಾರಿನಲ್ಲಿದ್ದ ಸಮಂತಾ ಹಾಗೂ ವಿಜಯ್ ದೇವರಕೊಂಡ (Vijay Devarakonda) ಅವರಿಗೆ ಗಾಯವಾಗಿದೆ. ಆದರೆ, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ, ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

ಸಮಂತಾ ಅವರು ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸೋಕೆ ಹಿಂಜರಿಕೆ ಮಾಡುವುದಿಲ್ಲ. ವಿಜಯ್ ದೇವರಕೊಂಡ ಕೂಡ ಇದೇ ಸಾಲಿಗೆ ಸೇರುತ್ತಾರೆ. ‘ಖುಷಿ’ ಸಿನಿಮಾದಲ್ಲಿ ಕಾರು ಚೇಸಿಂಗ್ ದೃಶ್ಯವೊಂದಿದೆ. ಇದರ ಶೂಟಿಂಗ್ ಕಾಶ್ಮೀರದ ಪಹಲ್​​ಗಮ್​ನಲ್ಲಿ ನಡೆಯುತ್ತಿತ್ತು. ಈ ವೇಳೆ ಕಾರು ದೊಡ್ಡ ಕೆರೆಯಲ್ಲಿ ಬಿದ್ದಿದೆ. ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರಿಂದ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ ಎಂದು ವರದಿ ಆಗಿದೆ.

ಕಾರು ನೀರಿಗೆ ಬೀಳುತ್ತಿದ್ದಂತೆ ಇಬ್ಬರನ್ನೂ ಹೊರ ತೆಗೆಯಲಾಗಿದೆ. ಹತ್ತಿರದ ಹೋಟೆಲ್ ಒಂದಕ್ಕೆ ಸಮಂತಾ ಹಾಗೂ ವಿಜಯ್ ದೇವರಕೊಂಡ ಅವರನ್ನು ಕರೆದುಕೊಂಡು ಹೋಗಲಾಗಿದೆ. ವೈದ್ಯರನ್ನು ಕರೆಸಿ ಅವರಿಗೆ ಚಿಕತ್ಸೆ ನೀಡುವ ಕಾರ್ಯ ಆಗುತ್ತಿದೆ. ಶೂಟಿಂಗ್ ಶೀಘ್ರವೇ ಆರಂಭವಾಗಲಿದೆಯೇ ಅಥವಾ ಇಬ್ಬರೂ ವಿಶ್ರಾಂತಿ ಪಡೆಯುತ್ತಾರೋ ಎಂಬುದು ಇನ್ನೂ ಅಧಿಕೃತವಾಗಿಲ್ಲ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
‘ಹೂ ಅಂತಿಯಾ ಮಾವ’ ಹಾಡಿಗೆ ವಿರಾಟ್ ಕೊಹ್ಲಿ ಡ್ಯಾನ್ಸ್ ನೋಡಿ ಸಮಂತಾ ಹೇಳಿದ್ದೇನು?  
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಸಮಂತಾ ಚಿತ್ರರಂಗದಲ್ಲಿದ್ದು ಹಲವು ವರ್ಷಗಳು ಕಳೆದಿವೆ. ವಿಜಯ್ ದೇವರಕೊಂಡ ಇತ್ತೀಚೆಗೆ ಖ್ಯಾತಿ ಹೆಚ್ಚಿಸಿಕೊಂಡವರು. ಸೂಪರ್ ಹಿಟ್ ಸಿನಿಮಾ ‘ಮಹಾನಟಿ’ಯಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈ ಕಾರಣಕ್ಕೆ ಇಬ್ಬರನ್ನು ಒಟ್ಟಾಗಿ ತರುವ ಪ್ರಯತ್ನ ನಡೆದಿದೆ.  ಈ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿತ್ತು. ವಿಜಯ್ ದೇವರಕೊಂಡ ಮತ್ತು ಸಮಂತಾ ಕಾಂಬಿನೇಷನ್ ಫ್ಯಾನ್ಸ್​ಗೆ ಇಷ್ಟವಾಗಿತ್ತು.

ಸದ್ಯ ಪ್ಯಾನ್ ಇಂಡಿಯಾ ಟ್ರೆಂಡ್ ಜೋರಾಗಿದೆ. ಈ ಸಿನಿಮಾ ಕೂಡ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರ ರಿಲೀಸ್ ಆಗಲಿದೆ. ಹಿಂದಿಯಲ್ಲಿ ಈ ಸಿನಿಮಾವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಅನ್ನೋದನ್ನು ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ಮಾತ್ರವಲ್ಲದೆ, ಜಯರಾಮ್, ಮುರಳಿ ಶರ್ಮಾ, ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ಯ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ್ರಕ್ಕಿದೆ. ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ನಿರ್ವಾಣ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ