AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಚಿತ್ರಕ್ಕೆ ವಿಜಯ್​ ದೇವರಕೊಂಡ-ಸಮಂತಾ ಪಡೆದ ಸಂಭಾವನೆ ಎಷ್ಟು? ಇಬ್ಬರ ಸಂಬಳದ ನಡುವೆ ಇದೆ ದೊಡ್ಡ ಅಂತರ

ಚಿತ್ರರಂಗದಲ್ಲಿ ಹೀರೋ ಮತ್ತು ಹೀರೋಯಿನ್​ ಸಂಭಾವನೆ ನಡುವೆ ದೊಡ್ಡ ಅಂತರ ಇರುವುದು ಗೊತ್ತೇ ಇದೆ. ಈ ಬಗ್ಗೆ ಮೊದಲಿನಿಂದಲೂ ಚರ್ಚೆ ಆಗುತ್ತಿದೆ. ‘ಖುಷಿ’ ಸಿನಿಮಾ ವಿಚಾರದಲ್ಲೂ ಅದು ಮುಂದುವರಿದಿದೆ. ಸಮಂತಾ ರುತ್​ ಪ್ರಭು ಮತ್ತು ವಿಜಯ್​ ದೇವರಕೊಂಡ ಪಡೆದುಕೊಂಡ ಸಂಭಾವನೆ ಎಷ್ಟು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಖುಷಿ’ ಚಿತ್ರಕ್ಕೆ ವಿಜಯ್​ ದೇವರಕೊಂಡ-ಸಮಂತಾ ಪಡೆದ ಸಂಭಾವನೆ ಎಷ್ಟು? ಇಬ್ಬರ ಸಂಬಳದ ನಡುವೆ ಇದೆ ದೊಡ್ಡ ಅಂತರ
ವಿಜಯ್​ ದೇವರಕೊಂಡ, ಸಮಂತಾ ರುತ್​ ಪ್ರಭು
ಮದನ್​ ಕುಮಾರ್​
|

Updated on: Sep 03, 2023 | 12:34 PM

Share

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿರುವ ‘ಖುಷಿ’ ಸಿನಿಮಾ (Kushi Movie) ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಶಿವ ನಿರ್ವಾಣ ನಿರ್ದೇಶನದ ಈ ಸಿನಿಮಾದಲ್ಲಿ ಒಂದು ಡಿಫರೆಂಟ್​ ಆದ ಲವ್​ ಸ್ಟೋರಿ ಇದೆ. ಫ್ಯಾಮಿಲಿ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗುತ್ತಿದೆ. ಇಂಥ ಕೌಟುಂಬಿಕ ಕಥಾಹಂದರದ ಸಿನಿಮಾವನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಿಸಿ, ರಿಲೀಸ್​ ಮಾಡಿರುವುದು ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಹೆಚ್ಚುಗಾರಿಕೆ. ಅದ್ದೂರಿ ಬಜೆಟ್​ನಲ್ಲಿ ‘ಖುಷಿ’ ಚಿತ್ರ ಸಿದ್ಧವಾಗಿದೆ. ಕಲಾವಿದರ ಸಂಭಾವನೆಗೆ ಬಹುಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈ ಸಿನಿಮಾದಲ್ಲಿ ನಟಿಸಲು ವಿಜಯ್​ ದೇವರಕೊಂಡ (Vijay Devarakonda) ಅವರು ಬರೋಬ್ಬರಿ 21ರಿಂದ 23 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಸಮಂತಾ ಪಡೆದ ಸಂಭಾವನೆ ಎಷ್ಟು? ಆ ಬಗ್ಗೆ ಇಲ್ಲಿದೆ ಮಾಹಿತಿ..

ಚಿತ್ರರಂಗದಲ್ಲಿ ಹೀರೋ ಮತ್ತು ಹೀರೋಯಿನ್​ ಸಂಭಾವನೆ ನಡುವೆ ದೊಡ್ಡ ಅಂತರ ಇರುವುದು ಗೊತ್ತೇ ಇದೆ. ಈ ಬಗ್ಗೆ ಮೊದಲಿನಿಂದಲೂ ಚರ್ಚೆ ಆಗುತ್ತಿದೆ. ‘ಖುಷಿ’ ಸಿನಿಮಾ ವಿಚಾರದಲ್ಲೂ ಅದು ಮುಂದುವರಿದಿದೆ. ಸಮಂತಾ ರುತ್​ ಪ್ರಭು ಮತ್ತು ವಿಜಯ್​ ದೇವರಕೊಂಡ ಪಡೆದುಕೊಂಡ ಸಂಭಾವನೆಯಲ್ಲಿ ಅಜಗಜಾಂತರ ವ್ಯತ್ಯಾಸ ಇದೆ. ಮೂಲಗಳ ಪ್ರಕಾರ ಸಮಂತಾ ಅವರು ಈ ಸಿನಿಮಾದಲ್ಲಿ ನಟಿಸಲು 4.5 ಕೋಟಿ ರೂಪಾಯಿ ಪಡೆದಿದ್ದಾರೆ. ಅವರು ಬಹುಬೇಡಿಕೆಯ ನಟಿ ಆಗಿದ್ದರೂ ಕೂಡ ಹೀರೋಗಳ ಸಂಭಾವನೆಗೆ ಹೋಲಿಕೆ ಮಾಡಿದರೆ ಅವರ ಸಂಭಾವನೆ ಕಡಿಮೆ ಇದೆ.

ಇದನ್ನೂ ಓದಿ: ಖುಷಿ; ಸಿನಿಮಾ ಹಿಟ್: ಮದುವೆ​ಗೂ ವಿಜಯ್ ದೇವರಕೊಂಡಗೂ ಲಿಂಕ್ ಏನು?

ಸಮಂತಾ ಅವರು ‘ಖುಷಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಹೆಚ್ಚಾಗಿ ಭಾಗಿ ಆಗಿಲ್ಲ. ಈ ಸಿನಿಮಾದ ಮ್ಯೂಸಿಕಲ್​ ನೈಟ್​ ಕಾರ್ಯಕ್ರಮಕ್ಕೆ ಅವರು ಹಾಜರಿ ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಇವೆಂಟ್​ನಲ್ಲೂ ಅವರು ಭಾಗಿ ಆಗಿಲ್ಲ. ಈ ಚಿತ್ರ ಬಿಡುಗಡೆ ಆಗುವಾಗ ಅವರು ಅಮೆರಿಕಕ್ಕೆ ತೆರಳಿದರು. ಈಗಲೂ ಅಲ್ಲಿಯೇ ಇದ್ದಾರೆ. ಪ್ರಚಾರದ ಸಂಪೂರ್ಣ ಜವಾಬ್ದಾರಿಯನ್ನು ವಿಜಯ್​ ದೇವರಕೊಂಡ ಅವರು ನಿಭಾಯಿಸಿದ್ದಾರೆ. ಹಲವು ಕಾರಣಗಳಿಂದಾಗಿ ಈ ಚಿತ್ರ ಗಮನ ಸೆಳೆದಿದೆ. ‘ಖುಷಿ’ ಚಿತ್ರದ ಹಾಡುಗಳು ಸೂಪರ್​ ಹಿಟ್​ ಆಗಿವೆ. ಹೇಷಮ್​ ಅಬ್ದುಲ್​ ವಹಾಬ್​ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಖುಷಿ; ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ವಿಜಯ್ ದೇವರಕೊಂಡಗೆ ಸಿಕ್ಕಿತಾ ಯಶಸ್ಸು?

ವಿಜಯ್​ ದೇವರಕೊಂಡ ಅವರಿಗೆ ‘ಅರ್ಜುನ್​ ರೆಡ್ಡಿ’ ಸಿನಿಮಾದಿಂದ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತ್ತು. ಅವರು ನಟಿಸಿದ ‘ಲೈಗರ್​’ ಚಿತ್ರವನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಮಾಡಲಾಗಿತ್ತು. ಆದರೆ ಆ ಸಿನಿಮಾ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಹಾಗಿದ್ದರೂ ಕೂಡ ವಿಜಯ್​ ದೇವರಕೊಂಡ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ‘ಖುಷಿ’ ಸಿನಿಮಾಗೆ ಅವರು 21 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಪಡೆದಿರುವುದೇ ಅವರ ಬೇಡಿಕೆಗೆ ಸಾಕ್ಷಿ. ತೆಲುಗಿನ ಈ ಸಿನಿಮಾ ಕನ್ನಡ, ಮಲಯಾಳಂ, ಹಿಂದಿ ಮತ್ತು ತಮಿಳು ಭಾಷೆಗೆ ಡಬ್​ ಆಗಿ ತೆರೆಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?