AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.  

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ
ವಿಜಯ್-ಸಮಂತಾ
ರಾಜೇಶ್ ದುಗ್ಗುಮನೆ
|

Updated on:Aug 30, 2023 | 6:31 AM

Share

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ (Kushi Movie) ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಆದರೆ, ಚಿತ್ರತಂಡ ಅಂದುಕೊಂಡ ಮಟ್ಟಿಗೆ ಸಿನಿಮಾ ಸದ್ದು ಮಾಡುತ್ತಿಲ್ಲ. ಇದರ ಜೊತೆಗೆ ಸಿನಿಮಾ ತಂಡ ಮಾಡುತ್ತಿರುವ ಪ್ಲ್ಯಾನ್​ಗಳು ಕೂಡ ಚಿತ್ರಕ್ಕೆ ಹಿನ್ನಡೆ ಉಂಟು ಮಾಡುತ್ತಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಸಿನಿಮಾಗೆ ಗೆಲುವು ಸಿಗೋದು ಮತ್ತಷ್ಟು ಕಷ್ಟ ಎಂದು ಹೇಳಲಾಗುತ್ತಿದೆ.

ಯಾವುದೇ ಸಿನಿಮಾ ರಿಲೀಸ್​ಗೂ ಮೊದಲೇ ಭರ್ಜರಿ ಪ್ರಚಾರ ನೀಡಲಾಗುತ್ತದೆ. ವಾರದ ಮೊದಲೇ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗುತ್ತದೆ. ಇವೆರಡಕ್ಕೂ ಲಿಂಕ್ ಇದೆ. ಸಿನಿಮಾಗೆ ಭರ್ಜರಿ ಪ್ರಚಾರ ಕೊಟ್ಟರೆ ಅಡ್ವಾನ್ಸ್ ಬುಕಿಂಗ್​ ಓಪನ್ ಆದಾಗ ಭರ್ಜರಿ ರೆಸ್ಪಾನ್ಸ್ ಸಿಗುತ್ತದೆ. ಆದರೆ, ಇವೆರಡೂ ಕೆಲಸವನ್ನು ‘ಖುಷಿ’ ತಂಡದವರು ಸರಿಯಾಗಿ ಮಾಡಿಲ್ಲ.

‘ಖುಷಿ’ ಸಿನಿಮಾಗೆ ಸರಿಯಾದ ರೀತಿಯಲ್ಲಿ ಪ್ರಚಾರ ನೀಡೋಕೆ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಸಮಂತಾ ಅಮೆರಿಕದಲ್ಲಿರೋದು. ಹೀಗಾಗಿ ಪ್ರಚಾರದ  ಎಲ್ಲಾ ಜವಾಬ್ದಾರಿ ವಿಜಯ್ ದೇವರಕೊಂಡ ಅವರ ಹೆಗಲೇರಿದೆ. ಅವರು ಎಲ್ಲ ಕಡೆಗಳಿಗೆ ತೆರಳಿ ತಮ್ಮ ಕೈಲಾದಷ್ಟು ಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು, ಅಡ್ವಾನ್ಸ್ ಬುಕಿಂಗ್ ಕೂಡ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ಚಿತ್ರತಂಡದವರೇ ಘೋಷಿಸಿದಂತೆ ಇಂದು (ಆಗಸ್ಟ್ 30) ಬೆಳಗ್ಗೆ 10 ಗಂಟೆಗೆ ‘ಖುಷಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಶುರುವಾಗುತ್ತದೆ. ಅಂದರೆ ಸಿನಿಮಾ ರಿಲೀಸ್ ಆಗುವ 48 ಗಂಟೆ ಮೊದಲು ಅಡ್ವಾನ್ಸ್ ಟಿಕೆಟ್ ಬುಕಿಂಗ್​ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ಆಗಿದೆ. ಹೀಗಾದರೆ ಚಿತ್ರಕ್ಕೆ ಹೈಪ್ ಸಿಗೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Wed, 30 August 23

Follow Us
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ