AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.  

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ
ವಿಜಯ್-ಸಮಂತಾ
ರಾಜೇಶ್ ದುಗ್ಗುಮನೆ
|

Updated on:Aug 30, 2023 | 6:31 AM

Share

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ (Kushi Movie) ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಆದರೆ, ಚಿತ್ರತಂಡ ಅಂದುಕೊಂಡ ಮಟ್ಟಿಗೆ ಸಿನಿಮಾ ಸದ್ದು ಮಾಡುತ್ತಿಲ್ಲ. ಇದರ ಜೊತೆಗೆ ಸಿನಿಮಾ ತಂಡ ಮಾಡುತ್ತಿರುವ ಪ್ಲ್ಯಾನ್​ಗಳು ಕೂಡ ಚಿತ್ರಕ್ಕೆ ಹಿನ್ನಡೆ ಉಂಟು ಮಾಡುತ್ತಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಸಿನಿಮಾಗೆ ಗೆಲುವು ಸಿಗೋದು ಮತ್ತಷ್ಟು ಕಷ್ಟ ಎಂದು ಹೇಳಲಾಗುತ್ತಿದೆ.

ಯಾವುದೇ ಸಿನಿಮಾ ರಿಲೀಸ್​ಗೂ ಮೊದಲೇ ಭರ್ಜರಿ ಪ್ರಚಾರ ನೀಡಲಾಗುತ್ತದೆ. ವಾರದ ಮೊದಲೇ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗುತ್ತದೆ. ಇವೆರಡಕ್ಕೂ ಲಿಂಕ್ ಇದೆ. ಸಿನಿಮಾಗೆ ಭರ್ಜರಿ ಪ್ರಚಾರ ಕೊಟ್ಟರೆ ಅಡ್ವಾನ್ಸ್ ಬುಕಿಂಗ್​ ಓಪನ್ ಆದಾಗ ಭರ್ಜರಿ ರೆಸ್ಪಾನ್ಸ್ ಸಿಗುತ್ತದೆ. ಆದರೆ, ಇವೆರಡೂ ಕೆಲಸವನ್ನು ‘ಖುಷಿ’ ತಂಡದವರು ಸರಿಯಾಗಿ ಮಾಡಿಲ್ಲ.

‘ಖುಷಿ’ ಸಿನಿಮಾಗೆ ಸರಿಯಾದ ರೀತಿಯಲ್ಲಿ ಪ್ರಚಾರ ನೀಡೋಕೆ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಸಮಂತಾ ಅಮೆರಿಕದಲ್ಲಿರೋದು. ಹೀಗಾಗಿ ಪ್ರಚಾರದ  ಎಲ್ಲಾ ಜವಾಬ್ದಾರಿ ವಿಜಯ್ ದೇವರಕೊಂಡ ಅವರ ಹೆಗಲೇರಿದೆ. ಅವರು ಎಲ್ಲ ಕಡೆಗಳಿಗೆ ತೆರಳಿ ತಮ್ಮ ಕೈಲಾದಷ್ಟು ಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು, ಅಡ್ವಾನ್ಸ್ ಬುಕಿಂಗ್ ಕೂಡ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ಚಿತ್ರತಂಡದವರೇ ಘೋಷಿಸಿದಂತೆ ಇಂದು (ಆಗಸ್ಟ್ 30) ಬೆಳಗ್ಗೆ 10 ಗಂಟೆಗೆ ‘ಖುಷಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಶುರುವಾಗುತ್ತದೆ. ಅಂದರೆ ಸಿನಿಮಾ ರಿಲೀಸ್ ಆಗುವ 48 ಗಂಟೆ ಮೊದಲು ಅಡ್ವಾನ್ಸ್ ಟಿಕೆಟ್ ಬುಕಿಂಗ್​ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ಆಗಿದೆ. ಹೀಗಾದರೆ ಚಿತ್ರಕ್ಕೆ ಹೈಪ್ ಸಿಗೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Wed, 30 August 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್