‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.  

‘ಖುಷಿ’ ಸಿನಿಮಾಗೆ ಸಾಲು ಸಾಲು ಹಿನ್ನಡೆ; ಚಿತ್ರತಂಡ ಲೆಕ್ಕಾಚಾರವೆಲ್ಲ ಉಲ್ಟಾ-ಪಲ್ಟಾ
ವಿಜಯ್-ಸಮಂತಾ

Updated on: Aug 30, 2023 | 6:31 AM

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ (Kushi Movie) ಟ್ರೇಲರ್ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಆದರೆ, ಚಿತ್ರತಂಡ ಅಂದುಕೊಂಡ ಮಟ್ಟಿಗೆ ಸಿನಿಮಾ ಸದ್ದು ಮಾಡುತ್ತಿಲ್ಲ. ಇದರ ಜೊತೆಗೆ ಸಿನಿಮಾ ತಂಡ ಮಾಡುತ್ತಿರುವ ಪ್ಲ್ಯಾನ್​ಗಳು ಕೂಡ ಚಿತ್ರಕ್ಕೆ ಹಿನ್ನಡೆ ಉಂಟು ಮಾಡುತ್ತಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. ಸಿನಿಮಾಗೆ ಗೆಲುವು ಸಿಗೋದು ಮತ್ತಷ್ಟು ಕಷ್ಟ ಎಂದು ಹೇಳಲಾಗುತ್ತಿದೆ.

ಯಾವುದೇ ಸಿನಿಮಾ ರಿಲೀಸ್​ಗೂ ಮೊದಲೇ ಭರ್ಜರಿ ಪ್ರಚಾರ ನೀಡಲಾಗುತ್ತದೆ. ವಾರದ ಮೊದಲೇ ಅಡ್ವಾನ್ಸ್ ಬುಕಿಂಗ್ ಓಪನ್ ಮಾಡಲಾಗುತ್ತದೆ. ಇವೆರಡಕ್ಕೂ ಲಿಂಕ್ ಇದೆ. ಸಿನಿಮಾಗೆ ಭರ್ಜರಿ ಪ್ರಚಾರ ಕೊಟ್ಟರೆ ಅಡ್ವಾನ್ಸ್ ಬುಕಿಂಗ್​ ಓಪನ್ ಆದಾಗ ಭರ್ಜರಿ ರೆಸ್ಪಾನ್ಸ್ ಸಿಗುತ್ತದೆ. ಆದರೆ, ಇವೆರಡೂ ಕೆಲಸವನ್ನು ‘ಖುಷಿ’ ತಂಡದವರು ಸರಿಯಾಗಿ ಮಾಡಿಲ್ಲ.

‘ಖುಷಿ’ ಸಿನಿಮಾಗೆ ಸರಿಯಾದ ರೀತಿಯಲ್ಲಿ ಪ್ರಚಾರ ನೀಡೋಕೆ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಸಮಂತಾ ಅಮೆರಿಕದಲ್ಲಿರೋದು. ಹೀಗಾಗಿ ಪ್ರಚಾರದ  ಎಲ್ಲಾ ಜವಾಬ್ದಾರಿ ವಿಜಯ್ ದೇವರಕೊಂಡ ಅವರ ಹೆಗಲೇರಿದೆ. ಅವರು ಎಲ್ಲ ಕಡೆಗಳಿಗೆ ತೆರಳಿ ತಮ್ಮ ಕೈಲಾದಷ್ಟು ಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು, ಅಡ್ವಾನ್ಸ್ ಬುಕಿಂಗ್ ಕೂಡ ವಿಳಂಬ ಆಗುತ್ತಿದೆ.

ಇದನ್ನೂ ಓದಿ: ಸಮಂತಾಗೆ ವಿಡಿಯೋ ಕಾಲ್ ಮಾಡಿದ ವಿಜಯ್ ದೇವರಕೊಂಡ, ಹೇಳಿದ ಜೋಕ್ ಯಾವುದು?

ಚಿತ್ರತಂಡದವರೇ ಘೋಷಿಸಿದಂತೆ ಇಂದು (ಆಗಸ್ಟ್ 30) ಬೆಳಗ್ಗೆ 10 ಗಂಟೆಗೆ ‘ಖುಷಿ’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಶುರುವಾಗುತ್ತದೆ. ಅಂದರೆ ಸಿನಿಮಾ ರಿಲೀಸ್ ಆಗುವ 48 ಗಂಟೆ ಮೊದಲು ಅಡ್ವಾನ್ಸ್ ಟಿಕೆಟ್ ಬುಕಿಂಗ್​ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ಆಗಿದೆ. ಹೀಗಾದರೆ ಚಿತ್ರಕ್ಕೆ ಹೈಪ್ ಸಿಗೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.

ಸೆಪ್ಟೆಂಬರ್ 1ರಂದು ಕನ್ನಡದಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ರೀತಿ ಸೆಪ್ಟೆಂಬರ್ 7ರಂದು ತೆಲುಗಿನಲ್ಲಿ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಹಾಗೂ ಹಿಂದಿಯಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ರಿಲೀಸ್ ಆಗುತ್ತಿದೆ. ಈ ಸ್ಪರ್ಧೆಯನ್ನು ‘ಖುಷಿ’ ಸಮರ್ಥವಾಗಿ ಎದುರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:25 am, Wed, 30 August 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us