AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಧಾರಣ ಓಪನಿಂಗ್ ಪಡೆದ ‘ಫ್ಯಾಮಿಲಿ ಸ್ಟಾರ್’; ಮುಂದೆ ಮತ್ತಷ್ಟು ಸಂಕಷ್ಟ?

ವಿಜಯ್ ದೇವರಕೊಂಡ ಅವರ ಮ್ಯಾನರಿಸಂ ಪ್ರತೀ ಸಿನಿಮಾದಲ್ಲೂ ಒಂದೇ ರೀತಿ ಇದೆ ಎನ್ನುವ ಭಾವನೆ ಅಭಿಮಾನಿಗಳಿಗೆ ಕಾಡುತ್ತಿದೆ. ಅವರ ಡೈಲಾಗ್ ಡೆಲಿವರಿ ಕೂಡ ಒಂದೇ ರೀತಿ ಇದೆ. ಈ ಕಾರಣಕ್ಕೆ ಕೆಲವರಿಗೆ ಅವರ ಸಿನಿಮಾ ಇಷ್ಟ ಆಗುತ್ತಿಲ್ಲ.

ಸಾಧಾರಣ ಓಪನಿಂಗ್ ಪಡೆದ ‘ಫ್ಯಾಮಿಲಿ ಸ್ಟಾರ್’; ಮುಂದೆ ಮತ್ತಷ್ಟು ಸಂಕಷ್ಟ?
ವಿಜಯ್ ದೇವರಕೊಂಡ-ಮೃಣಾಲ್
Follow us
ರಾಜೇಶ್ ದುಗ್ಗುಮನೆ
|

Updated on: Apr 06, 2024 | 9:59 AM

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಈ ನಿರೀಕ್ಷೆಯನ್ನು ಸಂಪೂರ್ಣವಾಗಿ ತಲುಪಲು ಚಿತ್ರದ ಬಳಿ ಸಾಧ್ಯವಾಗಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಈ ಸಿನಿಮಾ ಮೊದಲ ದಿನ ಕೇವಲ 5.75 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಗಳಿಕೆ ಹೆಚ್ಚಿದರೆ ಮಾತ್ರ ನಿರ್ಮಾಪಕರು ಲಾಭ ಕಾಣಲಿದ್ದಾರೆ.

ವಿಜಯ್ ದೇವರಕೊಂಡ ಅವರಿಗೆ ಟಾಲಿವುಡ್​ನಲ್ಲಿ ಭರ್ಜರಿ ಬೇಡಿಕೆ ಇದೆ. ‘ಅರ್ಜುನ್ ರೆಡ್ಡಿ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಿಲೀಸ್ ಆದ ‘ಗೀತ ಗೋವಿಂದಂ’ ಕೂಡ ಯಶಸ್ಸು ಕಂಡಿತ್ತು. ಇದಾದ ಬಳಿಕ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿಲ್ಲ. ಕಳೆದ ವರ್ಷ ರಿಲೀಸ್ ಆದ ಸಿನಿಮಾ ‘ಖುಷಿ’ ಗೆದ್ದಿದೆಯಾದರೂ ದೊಡ್ಡ ಹಿಟ್ ಎಂದೇನು ಅನಿಸಿಕೊಂಡಿಲ್ಲ. ಈಗ ‘ಫ್ಯಾಮಿಲಿ ಸ್ಟಾರ್’ ಕೂಡ ಸಾಮಾನ್ಯ ಹಿಟ್ ಎನಿಸಿಕೊಳ್ಳಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ವಿಜಯ್ ದೇವರಕೊಂಡ ಅವರ ಮ್ಯಾನರಿಸಂ ಪ್ರತೀ ಸಿನಿಮಾದಲ್ಲೂ ಒಂದೇ ರೀತಿ ಇದೆ ಎನ್ನುವ ಭಾವನೆ ಅಭಿಮಾನಿಗಳಿಗೆ ಕಾಡುತ್ತಿದೆ. ಅವರ ಡೈಲಾಗ್ ಡೆಲಿವರಿ ಕೂಡ ಒಂದೇ ರೀತಿ ಇದೆ. ಈ ಕಾರಣಕ್ಕೆ ಕೆಲವರಿಗೆ ಅವರ ಸಿನಿಮಾ ಇಷ್ಟ ಆಗುತ್ತಿಲ್ಲ. ಬುಕ್ ಮೈ ಶೋನಲ್ಲಿ ‘ಫ್ಯಾಮಿಲಿ ಸ್ಟಾರ್’ ಸಿನಿಮಾ 7.3 ರೇಟಿಂಗ್ ಪಡೆದಿದೆ. ಮುಂದಿನ ದಿನಗಳಲ್ಲಿ ಇದರಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ.

ಇದನ್ನೂ ಓದಿ: ದೊಡ್ಡ ಹಿಟ್ ಕೊಟ್ಟರೂ ದೇವರಕೊಂಡಗೆ ಸಿಕ್ಕಿದ್ದು ಮಾತ್ರ ಅತೀ ಕಡಿಮೆ ಸಂಭಾವನೆ; ಒಪ್ಪಿಕೊಂಡ ನಟ

‘ಫ್ಯಾಮಿಲಿ ಸ್ಟಾರ್’ ನೋಡಿ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದರು. ಸಿನಿಮಾ ಚೆನ್ನಾಗಿಲ್ಲ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದ್ದರು. ‘ಕಥೆ ತುಂಬಾನೇ ಹಳೆಯದು ಎಲ್ಲಾ ಸನ್ನಿವೇಶಗಳು ಸಿಕ್ಕಾಪಟ್ಟೆ ಬೋರಿಂಗ್. ಕೆಲವೇ ಕೆಲವು ಹಾಸ್ಯ ಸನ್ನಿವೇಶ ಚೆನ್ನಾಗಿವೆ. ಭಾವನಾತ್ಮಕವಾಗಿ ಸಿನಿಮಾ ಕಿಂಚಿತ್ತೂ ಕನೆಕ್ಟ್​ ಆಗುವುದಿಲ್ಲ’ ಎಂದು ಪ್ರೇಕ್ಷಕರೊಬ್ಬರು ಖಾರವಾಗಿ ‘ಫ್ಯಾಮಿಲಿ ಸ್ಟಾರ್​’ ಚಿತ್ರದ ಬಗ್ಗೆ ವಿಮರ್ಶೆ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು