AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ.

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?
ವಿಜಯ್​ ದೇವರಕೊಂಡ
TV9 Web
| Edited By: |

Updated on: Sep 24, 2021 | 3:14 PM

Share

ಅರ್ಜುನ್​ ರೆಡ್ಡಿ ನಟನೆ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಇದೆ. ‘ಲೈಗರ್​’ ಮೂಲಕ ಅವರು ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ಈ ಮಧ್ಯೆ ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಉದ್ಯಮವೊಂದಕ್ಕೆ ಕೈ ಹಾಕಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ. ರೌಡಿ ವಿಯರ್​ ಅನ್ನೋದು ಅವರ ಬಟ್ಟೆ ಬ್ರ್ಯಾಂಡ್​ ಹೆಸರು. ಈಗ ವಿಜಯ್​ ತಮ್ಮದೇ ಮಲ್ಟಿಪ್ಲೆಕ್ಸ್​ ಆರಂಭಿಸಿದ್ದಾರೆ. ಈ ಮೂಲಕ ಅವರು ತಮ್ಮ ಹಳೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ

ಟ್ವಿಟರ್​ನಲ್ಲಿ ಈ ಬಗ್ಗೆ ವಿಜಯ್​ ದೇವರಕೊಂಡ ಬರೆದುಕೊಂಡಿದ್ದಾರೆ. ‘ನಟನಾಗುವ ಕನಸಿನಿಂದ ಈಗ ನನ್ನ ಸ್ವಂತ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಹೊಂದುವ ಕನಸನ್ನೂ ನನಸು ಮಾಡಿಕೊಂಡಿದ್ದೇನೆ. ಏಷಿಯನ್ ವಿಜಯ್ ದೇವರಕೊಂಡ (ಎವಿಡಿ) ಚಿತ್ರಮಂದಿರವನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ಮೊದಲ ಎವಿಡಿ ಚಿತ್ರಮಂದಿರ ಮಹಬೂಬ್ ನಗರದಲ್ಲಿ, ಸೆಪ್ಟೆಂಬರ್ 24, 2021ರಿಂದ ಪ್ರಾರಂಭವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇಂದು ವಿಜಯ್​ ಅವರ ತಾಯಿಯ ಜನ್ಮದಿನ. ಈ ವಿಶೇಷ ದಿನದಂದು ಚಿತ್ರಮಂದಿರ ಆರಂಭಗೊಂಡಿದೆ ಅನ್ನೋದು ವಿಶೇಷ.

ವಿಜಯ್​ ದೇವರಕೊಂಡ ಅವರು ದೇಶಾದ್ಯಂತ ತಮ್ಮ ಉದ್ಯಮವನ್ನು ವಿಸ್ತರಿಸುವ ಆಲೋಚನೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅವರು ಬೇರೆ ಬೇರೆ ನಗರಗಳಲ್ಲಿ ಮಲ್ಟಿಫ್ಲೆಕ್ಸ್​ ಮಾಡಲಿದ್ದಾರೆ. ಬೆಂಗಳೂರಿನ ಜತೆಗೂ ವಿಜಯ್​ ದೇವರಕೊಂಡ ಒಳ್ಳೆಯ ನಂಟು ಹೊಂದಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರು ಬೆಂಗಳೂರಲ್ಲೂ ಹೊಸ ಚಿತ್ರಮಂದಿರ ಆರಂಭಿಸಿದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: Nikhil Kumaraswamy: ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್; ಪುತ್ರ ಹೇಗಿದ್ದಾನೆ?

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ