AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ.

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?
ವಿಜಯ್​ ದೇವರಕೊಂಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 24, 2021 | 3:14 PM

Share

ಅರ್ಜುನ್​ ರೆಡ್ಡಿ ನಟನೆ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗ ಇದೆ. ‘ಲೈಗರ್​’ ಮೂಲಕ ಅವರು ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ಈ ಮಧ್ಯೆ ಅವರು ಹಲವು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಉದ್ಯಮವೊಂದಕ್ಕೆ ಕೈ ಹಾಕಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಅರ್ಜುನ್​ ರೆಡ್ಡಿ’, ‘ಗೀತ ಗೋವಿಂದಂ’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ವಿಜಯ್​ ದೇವರಕೊಂಡ ಅವರಿಗಿದೆ. ಇದರ ಜತೆಗೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ತಮ್ಮದೇ ಬಟ್ಟೆ ಬ್ರ್ಯಾಂಡ್​ ಕೂಡ ಹೊಂದಿದ್ದಾರೆ. ರೌಡಿ ವಿಯರ್​ ಅನ್ನೋದು ಅವರ ಬಟ್ಟೆ ಬ್ರ್ಯಾಂಡ್​ ಹೆಸರು. ಈಗ ವಿಜಯ್​ ತಮ್ಮದೇ ಮಲ್ಟಿಪ್ಲೆಕ್ಸ್​ ಆರಂಭಿಸಿದ್ದಾರೆ. ಈ ಮೂಲಕ ಅವರು ತಮ್ಮ ಹಳೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ

ಟ್ವಿಟರ್​ನಲ್ಲಿ ಈ ಬಗ್ಗೆ ವಿಜಯ್​ ದೇವರಕೊಂಡ ಬರೆದುಕೊಂಡಿದ್ದಾರೆ. ‘ನಟನಾಗುವ ಕನಸಿನಿಂದ ಈಗ ನನ್ನ ಸ್ವಂತ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಹೊಂದುವ ಕನಸನ್ನೂ ನನಸು ಮಾಡಿಕೊಂಡಿದ್ದೇನೆ. ಏಷಿಯನ್ ವಿಜಯ್ ದೇವರಕೊಂಡ (ಎವಿಡಿ) ಚಿತ್ರಮಂದಿರವನ್ನು ನಿಮಗೆ ಪರಿಚಯಿಸುತ್ತಿದ್ದೇನೆ. ಮೊದಲ ಎವಿಡಿ ಚಿತ್ರಮಂದಿರ ಮಹಬೂಬ್ ನಗರದಲ್ಲಿ, ಸೆಪ್ಟೆಂಬರ್ 24, 2021ರಿಂದ ಪ್ರಾರಂಭವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಇಂದು ವಿಜಯ್​ ಅವರ ತಾಯಿಯ ಜನ್ಮದಿನ. ಈ ವಿಶೇಷ ದಿನದಂದು ಚಿತ್ರಮಂದಿರ ಆರಂಭಗೊಂಡಿದೆ ಅನ್ನೋದು ವಿಶೇಷ.

ವಿಜಯ್​ ದೇವರಕೊಂಡ ಅವರು ದೇಶಾದ್ಯಂತ ತಮ್ಮ ಉದ್ಯಮವನ್ನು ವಿಸ್ತರಿಸುವ ಆಲೋಚನೆ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅವರು ಬೇರೆ ಬೇರೆ ನಗರಗಳಲ್ಲಿ ಮಲ್ಟಿಫ್ಲೆಕ್ಸ್​ ಮಾಡಲಿದ್ದಾರೆ. ಬೆಂಗಳೂರಿನ ಜತೆಗೂ ವಿಜಯ್​ ದೇವರಕೊಂಡ ಒಳ್ಳೆಯ ನಂಟು ಹೊಂದಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅವರು ಬೆಂಗಳೂರಲ್ಲೂ ಹೊಸ ಚಿತ್ರಮಂದಿರ ಆರಂಭಿಸಿದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: Nikhil Kumaraswamy: ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್; ಪುತ್ರ ಹೇಗಿದ್ದಾನೆ?

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ