AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಪ್ಲ್ಯಾನ್​ ಬಗ್ಗೆ ಮಾತನಾಡಿದ ನಟ ವಿಜಯ್​ ದೇವರಕೊಂಡ; ಅಚ್ಚರಿ ಮೂಡಿಸಿದ ಹೇಳಿಕೆ

‘ನನಗಿಂತಲೂ ಮೊದಲು ಇವನೇ ಮದುವೆ ಆಗುತ್ತಾನೆ’ ಎಂದು ಸಹೋದರನ ಮ್ಯಾರೇಜ್​ ಪ್ಲ್ಯಾನ್​ ಬಗ್ಗೆ ವಿಜಯ್​ ದೇವಕೊಂಡ ಹೇಳಿದ್ದಾರೆ. ಇದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಈ ಸಂದರ್ಶನದ ಪ್ರೋಮೋ ವೈರಲ್​ ಆಗುತ್ತಿದೆ.

ಮದುವೆ ಪ್ಲ್ಯಾನ್​ ಬಗ್ಗೆ ಮಾತನಾಡಿದ ನಟ ವಿಜಯ್​ ದೇವರಕೊಂಡ; ಅಚ್ಚರಿ ಮೂಡಿಸಿದ ಹೇಳಿಕೆ
ವಿಜಯ್ ದೇವರಕೊಂಡ
TV9 Web
| Edited By: |

Updated on: Oct 24, 2021 | 4:31 PM

Share

ನಟ ವಿಜಯ್​ ದೇವರಕೊಂಡ ಅವರಿಗೆ ಸಖತ್​ ಬೇಡಿಕೆ ಇದೆ. ‘ಅರ್ಜುನ್​ ರೆಡ್ಡಿ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ಹೆಚ್ಚಿತು. ಈಗ ಅವರು ‘ಲೈಗರ್’ ಸಿನಿಮಾ ಮೂಲಕ ಬಾಲಿವುಡ್​ನಲ್ಲೂ ಸೌಂಡು ಮಾಡಲು ರೆಡಿಯಾಗುತ್ತಿದ್ದಾರೆ. ಸಿನಿಮಾಗಳ ಜೊತೆಗೆ ವಿಜಯ್​ ದೇವರಕೊಂಡ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ರಶ್ಮಿಕಾ ಮಂದಣ್ಣ ಜೊತೆಗಿನ ಅವರ ಆಪ್ತತೆ ಅನೇಕರ ಕಣ್ಣು ಕುಕ್ಕಿದ್ದುಂಟು. ಈಗ ವಿಜಯ್​ ದೇವರಕೊಂಡ ಅವರು ಮದುವೆ ಬಗ್ಗೆ ಒಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಜಯ್​ ದೇವರಕೊಂಡ ಅವರ ಕಿರಿಯ ಸಹೋದರ ಆನಂದ್​ ದೇವರಕೊಂಡ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ಸಿನಿಮಾ ಜರ್ನಿಗೆ ವಿಜಯ್​ ಬೆಂಬಲ ನೀಡುತ್ತಿದ್ದಾರೆ. ಅಚ್ಚರಿ ಎಂದರೆ ವಿಜಯ್​ಗಿಂತಲೂ ಮುನ್ನ ಆನಂದ್​ ಮದುವೆ ಆಗುವ ಸಾಧ್ಯತೆ ಇದೆಯಂತೆ! ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ದೇವರಕೊಂಡ ಸಹೋದರರು ಈ ಬಗ್ಗೆ ಮಾತನಾಡಿದ್ದಾರೆ.

ಆನಂದ್​ ದೇವರಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಚಿತ್ರ ನ.12ರಂದು ಬಿಡುಗಡೆ ಆಗುತ್ತಿದೆ. ಆ ಸಿನಿಮಾವನ್ನು ವಿಜಯ್​ ದೇವರಕೊಂಡ ಅರ್ಪಿಸುತ್ತಿದ್ದಾರೆ. ತಮ್ಮನಿಗೆ ಬೆಂಬಲ ನೀಡುವ ಸಲುವಾಗಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ‘ನನಗಿಂತಲೂ ಮೊದಲು ಇವನೇ ಮದುವೆ ಆಗುತ್ತಾನೆ’ ಎಂದು ಸಹೋದರನ ಮ್ಯಾರೇಜ್​ ಪ್ಲ್ಯಾನ್​ ಬಗ್ಗೆ ವಿಜಯ್​ ದೇವಕೊಂಡ ಹೇಳಿದ್ದಾರೆ. ಇದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ವಿಜಯ್​ ದೇವರಕೊಂಡ ಅವರಿಗೆ 32 ವರ್ಷ ವಯಸ್ಸಾಗಿದೆ. ಆನಂದ್​ಗೆ​ ಈಗಿನ್ನೂ 25ರ ಪ್ರಾಯ. ವಾಡಿಕೆಯಂತೆ ಅಣ್ಣನ ಮದುವೆ ಮೊದಲು ಆಗುತ್ತದೆ. ಆದರೆ ಈ ನಿಯಮವನ್ನು ಆನಂದ್​ ಮುರಿಯುತ್ತಾರೆ ಎಂಬ ಅರ್ಥದಲ್ಲಿ ವಿಜಯ್​ ಮಾತನಾಡಿದ್ದಾರೆ. ಆದರೆ ಅವರ ಮಾತಿಗೆ ಆನಂದ್​ ಸಮ್ಮತಿ ಸೂಚಿಸಿಲ್ಲ. ಅದೆಲ್ಲ ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಅವರು ತಲೆ ಅಲ್ಲಾಡಿಸಿದ್ದಾರೆ. ಸಂದರ್ಶನದ ಪ್ರೋಮೋದಲ್ಲಿ ಈ ವಿಚಾರ ಹೈಲೈಟ್​ ಆಗಿದೆ. ಅಸಲಿ ವಿಷಯ ತಿಳಿಯಲು ಪೂರ್ತಿ ಸಂದರ್ಶನ ನೋಡಬೇಕು.

ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದಾರೆ. ಅನನ್ಯಾ ಪಾಂಡೆ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ಅನನ್ಯಾ ಹೆಸರು ಡ್ರಗ್ಸ್​ ಕೇಸ್​ನಲ್ಲಿ ತಳುಕು ಹಾಕಿಕೊಂಡಿದೆ. ಇದರಿಂದ ‘ಲೈಗರ್​’ ಚಿತ್ರದ ಶೂಟಿಂಗ್​ಗೆ ತೊಂದರೆ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ವಿಜಯ್​ ದೇವರಕೊಂಡ ಜೊತೆ ಸೇರಿಕೊಂಡು ಸೈಲೆಂಟಾಗಿ ಮತ್ತೊಂದು ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ