AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಹಿಟ್ ಕೊಟ್ಟರೂ ದೇವರಕೊಂಡಗೆ ಸಿಕ್ಕಿದ್ದು ಮಾತ್ರ ಅತೀ ಕಡಿಮೆ ಸಂಭಾವನೆ; ಒಪ್ಪಿಕೊಂಡ ನಟ

ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರದ ವೇಳೆ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ‘ಖುಷಿ’ ಸಿನಿಮಾ ರಿಲೀಸ್ ಬಳಿಕ ಅವರಿಗೆ ಮಾರುಕಟ್ಟೆಯ ಬೆಲೆಯಲ್ಲಿ ಸಂಭಾವನೆ ಸಿಗುತ್ತಿದೆಯಂತೆ.

ದೊಡ್ಡ ಹಿಟ್ ಕೊಟ್ಟರೂ ದೇವರಕೊಂಡಗೆ ಸಿಕ್ಕಿದ್ದು ಮಾತ್ರ ಅತೀ ಕಡಿಮೆ ಸಂಭಾವನೆ; ಒಪ್ಪಿಕೊಂಡ ನಟ
ವಿಜಯ್ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on: Apr 02, 2024 | 10:02 AM

Share

ವಿಜಯ್ ದೇವರಕೊಂಡ  (Vijay Devarakonda) ಅವರ ಬದುಕು ಬದಲಾಗಿದ್ದು ‘ಅರ್ಜುನ್ ರೆಡ್ಡಿ’ ಚಿತ್ರದಿಂದ. ಈ ಸಿನಿಮಾ ಬಂದಿದ್ದು 2017ರಲ್ಲಿ. ಆ ಬಳಿಕ ಅವರು ನಟಿಸಿದ ಕೆಲವು ಸಿನಿಮಾಗಳು ಹಿಟ್ ಆದವು. ಆದಾಗ್ಯೂ ಅವರಿಗೆ ಸಿಕ್ಕಿದ್ದು ಕಡಿಮೆ ಸಂಭಾವನೆಯಂತೆ. ಈ ಬಗ್ಗೆ ವಿಜಯ್ ದೇವರಕೊಂಡ ಅವರು ಮಾತನಾಡಿದ್ದಾರೆ. ಅವರ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರದ ವೇಳೆ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ‘ಖುಷಿ’ ಸಿನಿಮಾ ರಿಲೀಸ್ ಬಳಿಕ ಅವರಿಗೆ ಮಾರುಕಟ್ಟೆಯ ಬೆಲೆಯಲ್ಲಿ ಸಂಭಾವನೆ ಸಿಗುತ್ತಿದೆಯಂತೆ.

‘ನಾನು ಈಗ ಸ್ಟಾರ್. ಆದರೆ, ದೊಡ್ಡ ಸಂಭಾವನೆ ಸಿಗುತ್ತಿರುವುದು ಇತ್ತೀಚೆಗೆ ಮಾತ್ರ. ಅದೂ ಖುಷಿ ಸಿನಿಮಾ ಸಂದರ್ಭದಲ್ಲಿ. ನಾನು ಹೊರಗಿನವನಾಗಿ ಹಣದ ಬಗ್ಗೆ ಯೋಚನೆ ಮಾಡಬಾರದು. ನಾನು ನನ್ನ ಸ್ಟೈಲ್, ಕೆಲಸದ ಬಗ್ಗೆ ಗಮನ ಹರಿಸಬೇಕು. ಖುಷಿ ಸಿನಿಮಾವರೆಗೂ ನನಗೆ ಕಡಿಮೆ ಸಂಭಾವನೆ ಸಿಗುತ್ತಿತ್ತು. ಖಷಿ ಸಿನಿಮಾ ಬಳಿಕ ನಾನು ಮಾರುಕಟ್ಟೆ ದರದಲ್ಲಿ ಸಂಭಾವನೆ ಪಡೆಯೋಕೆ ಆರಂಭಿಸಿದೆ’ ಎಂದಿದ್ದಾರೆ ಅವರು.

ಹಾಗಾದರೆ ಅವರು ಪಡೆಯುತ್ತಿರೋ ಸಂಭಾವನೆ ಎಷ್ಟು? ‘ಒಂದು ಉತ್ತಮ ಮಾರುಕಟ್ಟೆ ಬೆಲೆ’ ಎಂದು ಅವರು ಹೇಳಿದ್ದಾರೆ. ‘ವಿಜಯ್ ದೇವರಕೊಂಡ ನಮ್ಮ ಜೊತೆ ಎಲ್ಲವನ್ನೂ ಚರ್ಚಿಸಿದ್ದಾರೆ. ಹೀಗಾಗಿ ನಾವು ಅವರ ಜೊತೆ ಇನ್ನೂ ಎರಡು ಸಿನಿಮಾ ಮಾಡುತ್ತಿದ್ದೇವೆ’ ಎಂದಿದ್ದಾರೆ ನಿರ್ಮಾಪಕ ದಿಲ್ ರಾಜು.

ಇದನ್ನೂ ಓದಿ: ‘ಡಾರ್ಲಿಂಗ್ಸ್​ಗೆ ನನ್ನ ವಿಶ್’; ವಿಜಯ್ ದೇವರಕೊಂಡ ಚಿತ್ರಕ್ಕೆ ರಶ್ಮಿಕಾ ಶುಭಾಶಯ

ಮದುವೆ ಆಗೋದು ಯಾವಾಗ ಎನ್ನುವ ಪ್ರಶ್ನೆಯೂ ಅವರಿಗೆ ಎದುರಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ನನಗೆ ಮದುವೆ ಆಗಿ ತಂದೆ ಆಗಬೇಕು ಎಂಬುದು ಇದೆ. ನಾನು ಲವ್ ಮ್ಯಾರೇಜ್ ಆಗುತ್ತೇನೆ’ ಎಂದಿದ್ದಾರೆ ಅವರು. ಈ ಮೂಲಕ ಅಚ್ಚರಿ ಮೂಡಿಸಿದ್ದಾರೆ. ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಏಪ್ರಿಲ್ 5ಕ್ಕೆ ರಿಲೀಸ್ ಆಗಲಿದೆ. ಮೃಣಾಲ್ ಠಾಕೂರ್ ಅವರು ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ