AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರಿಸ್​ ನಿರ್ಮಾಣ ಮಾಡಲಿದ್ದಾರೆ ವಿಜಯ್​ ದೇವರಕೊಂಡ; ಹೊಸ ವಿಚಾರ ಬಿಚ್ಚಿಟ್ಟ ನಟ

ತಮ್ಮನಿಗೆ ಬೆಂಬಲ ನೀಡುವ ಸಲುವಾಗಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸುವಾಗ ಅವರು ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ‘

ವೆಬ್​ ಸೀರಿಸ್​ ನಿರ್ಮಾಣ ಮಾಡಲಿದ್ದಾರೆ ವಿಜಯ್​ ದೇವರಕೊಂಡ; ಹೊಸ ವಿಚಾರ ಬಿಚ್ಚಿಟ್ಟ ನಟ
ವಿಜಯ್ ದೇವರಕೊಂಡ
TV9 Web
| Edited By: |

Updated on: Nov 07, 2021 | 6:07 PM

Share

ವಿಜಯ್​ ದೇವರಕೊಂಡ ನಟನೆಯ ಜತೆಗೆ ಉದ್ಯಮದತ್ತಲೂ ಗಮನ ಹರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಲ್ಟಿಪ್ಲೆಕ್ಸ್​ ಒಂದನ್ನು ಆರಂಭಿಸಿದ್ದರು. ಇದರ ಜತೆಗೆ ‘ಕಿಂಗ್​ ಆಫ್​ ದಿ ಹಿಲ್​’ ಬ್ಯಾನರ್​ ಆರಂಭಿಸಿ ಸಿನಿಮಾ ನಿರ್ಮಾಣ ಕಾರ್ಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ವಿಜಯ್​ ಸಹೋದರ ಆನಂದ್​ ದೇವರಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಚಿತ್ರ ನ.12ರಂದು ಬಿಡುಗಡೆ ಆಗುತ್ತಿದೆ. ಆ ಸಿನಿಮಾವನ್ನು ವಿಜಯ್​ ದೇವರಕೊಂಡ ಅರ್ಪಿಸುತ್ತಿದ್ದಾರೆ. ಈ ಮೂಲಕ ತಮ್ಮನ ಸಿನಿಮಾಗೆ ಬೆಂಬಲ ನೀಡುತ್ತಿದ್ದಾರೆ. ಈಗ ಅವರು ವೆಬ್​ ಸೀರಿಸ್​ ನಿರ್ಮಾಣ ಮಾಡೋಕೆ ಮುಂದಾಗಿದ್ದಾರೆ.

ತಮ್ಮನಿಗೆ ಬೆಂಬಲ ನೀಡುವ ಸಲುವಾಗಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸುವಾಗ ಅವರು ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ‘ಪುಷ್ಪಕ ವಿಮಾನಂ’ ಸಿನಿಮಾವನ್ನು ದಾಮೋದರ ಅವರು ಡೈರೆಕ್ಷನ್​ ಮಾಡಿದ್ದಾರೆ. ಈ ನಿರ್ದೇಶಕರು ವಿಜಯ್​ ದೇವರಕೊಂಡಗೆ ಕಥೆ ಒಂದನ್ನು ಹೇಳಿದ್ದಾರೆ. ಇದು ವಿಜಯ್​ಗೆ ಇಷ್ಟವಾಗಿದೆ. ಹೀಗಾಗಿ, ತಮ್ಮ ಬ್ಯಾನರ್​ ಮೂಲಕ ವೆಬ್​ ಸೀರಿಸ್ ನಿರ್ಮಾಣ ಮಾಡೋಕೆ ವಿಜಯ್​ ಮುಂದಾಗಿದ್ದಾರೆ.

ಇತ್ತೀಚೆಗೆ ವಿಜಯ್​ ಅವರು ಮದುವೆ ಬಗ್ಗೆ ಮಾತನಾಡಿದರು. ವಿಜಯ್​ ದೇವರಕೊಂಡ ಅವರಿಗೆ 32 ವರ್ಷ ವಯಸ್ಸಾಗಿದೆ. ಆನಂದ್​ಗೆ​ ಈಗಿನ್ನೂ 25ರ ಪ್ರಾಯ. ವಾಡಿಕೆಯಂತೆ ಅಣ್ಣನ ಮದುವೆ ಮೊದಲು ಆಗುತ್ತದೆ. ಆದರೆ ಈ ನಿಯಮವನ್ನು ಆನಂದ್​ ಮುರಿಯುತ್ತಾರೆ ಎಂಬ ಅರ್ಥದಲ್ಲಿ ವಿಜಯ್​ ಮಾತನಾಡಿದ್ದಾರೆ. ಆದರೆ ಅವರ ಮಾತಿಗೆ ಆನಂದ್​ ಸಮ್ಮತಿ ಸೂಚಿಸಿಲ್ಲ. ಅದೆಲ್ಲ ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಅವರು ತಲೆ ಅಲ್ಲಾಡಿಸಿದ್ದಾರೆ. ಸಂದರ್ಶನದ ಪ್ರೋಮೋದಲ್ಲಿ ಈ ವಿಚಾರ ಹೈಲೈಟ್​ ಆಗಿತ್ತು.

ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಬಾಕ್ಸರ್​ ಮೈಕ್ ಟೈಸನ್​ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ಮೈಕ್​ ಟೈಸನ್​ ಲುಕ್​ಅನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಇದಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!