ವೆಬ್​ ಸೀರಿಸ್​ ನಿರ್ಮಾಣ ಮಾಡಲಿದ್ದಾರೆ ವಿಜಯ್​ ದೇವರಕೊಂಡ; ಹೊಸ ವಿಚಾರ ಬಿಚ್ಚಿಟ್ಟ ನಟ

ತಮ್ಮನಿಗೆ ಬೆಂಬಲ ನೀಡುವ ಸಲುವಾಗಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸುವಾಗ ಅವರು ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ‘

ವೆಬ್​ ಸೀರಿಸ್​ ನಿರ್ಮಾಣ ಮಾಡಲಿದ್ದಾರೆ ವಿಜಯ್​ ದೇವರಕೊಂಡ; ಹೊಸ ವಿಚಾರ ಬಿಚ್ಚಿಟ್ಟ ನಟ
ವಿಜಯ್ ದೇವರಕೊಂಡ
Follow us
| Updated By: ರಾಜೇಶ್ ದುಗ್ಗುಮನೆ

Updated on: Nov 07, 2021 | 6:07 PM

ವಿಜಯ್​ ದೇವರಕೊಂಡ ನಟನೆಯ ಜತೆಗೆ ಉದ್ಯಮದತ್ತಲೂ ಗಮನ ಹರಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಲ್ಟಿಪ್ಲೆಕ್ಸ್​ ಒಂದನ್ನು ಆರಂಭಿಸಿದ್ದರು. ಇದರ ಜತೆಗೆ ‘ಕಿಂಗ್​ ಆಫ್​ ದಿ ಹಿಲ್​’ ಬ್ಯಾನರ್​ ಆರಂಭಿಸಿ ಸಿನಿಮಾ ನಿರ್ಮಾಣ ಕಾರ್ಯದಲ್ಲೂ ಅವರು ಬ್ಯುಸಿ ಆಗಿದ್ದಾರೆ. ವಿಜಯ್​ ಸಹೋದರ ಆನಂದ್​ ದೇವರಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಚಿತ್ರ ನ.12ರಂದು ಬಿಡುಗಡೆ ಆಗುತ್ತಿದೆ. ಆ ಸಿನಿಮಾವನ್ನು ವಿಜಯ್​ ದೇವರಕೊಂಡ ಅರ್ಪಿಸುತ್ತಿದ್ದಾರೆ. ಈ ಮೂಲಕ ತಮ್ಮನ ಸಿನಿಮಾಗೆ ಬೆಂಬಲ ನೀಡುತ್ತಿದ್ದಾರೆ. ಈಗ ಅವರು ವೆಬ್​ ಸೀರಿಸ್​ ನಿರ್ಮಾಣ ಮಾಡೋಕೆ ಮುಂದಾಗಿದ್ದಾರೆ.

ತಮ್ಮನಿಗೆ ಬೆಂಬಲ ನೀಡುವ ಸಲುವಾಗಿ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸುವಾಗ ಅವರು ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ‘ಪುಷ್ಪಕ ವಿಮಾನಂ’ ಸಿನಿಮಾವನ್ನು ದಾಮೋದರ ಅವರು ಡೈರೆಕ್ಷನ್​ ಮಾಡಿದ್ದಾರೆ. ಈ ನಿರ್ದೇಶಕರು ವಿಜಯ್​ ದೇವರಕೊಂಡಗೆ ಕಥೆ ಒಂದನ್ನು ಹೇಳಿದ್ದಾರೆ. ಇದು ವಿಜಯ್​ಗೆ ಇಷ್ಟವಾಗಿದೆ. ಹೀಗಾಗಿ, ತಮ್ಮ ಬ್ಯಾನರ್​ ಮೂಲಕ ವೆಬ್​ ಸೀರಿಸ್ ನಿರ್ಮಾಣ ಮಾಡೋಕೆ ವಿಜಯ್​ ಮುಂದಾಗಿದ್ದಾರೆ.

ಇತ್ತೀಚೆಗೆ ವಿಜಯ್​ ಅವರು ಮದುವೆ ಬಗ್ಗೆ ಮಾತನಾಡಿದರು. ವಿಜಯ್​ ದೇವರಕೊಂಡ ಅವರಿಗೆ 32 ವರ್ಷ ವಯಸ್ಸಾಗಿದೆ. ಆನಂದ್​ಗೆ​ ಈಗಿನ್ನೂ 25ರ ಪ್ರಾಯ. ವಾಡಿಕೆಯಂತೆ ಅಣ್ಣನ ಮದುವೆ ಮೊದಲು ಆಗುತ್ತದೆ. ಆದರೆ ಈ ನಿಯಮವನ್ನು ಆನಂದ್​ ಮುರಿಯುತ್ತಾರೆ ಎಂಬ ಅರ್ಥದಲ್ಲಿ ವಿಜಯ್​ ಮಾತನಾಡಿದ್ದಾರೆ. ಆದರೆ ಅವರ ಮಾತಿಗೆ ಆನಂದ್​ ಸಮ್ಮತಿ ಸೂಚಿಸಿಲ್ಲ. ಅದೆಲ್ಲ ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಅವರು ತಲೆ ಅಲ್ಲಾಡಿಸಿದ್ದಾರೆ. ಸಂದರ್ಶನದ ಪ್ರೋಮೋದಲ್ಲಿ ಈ ವಿಚಾರ ಹೈಲೈಟ್​ ಆಗಿತ್ತು.

ವಿಜಯ್​ ದೇವರಕೊಂಡ ನಟಿಸುತ್ತಿರುವ ‘ಲೈಗರ್​’ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಬಾಕ್ಸರ್​ ಮೈಕ್ ಟೈಸನ್​ ಕೂಡ ನಟಿಸುತ್ತಿದ್ದಾರೆ. ಇತ್ತೀಚೆಗೆ ಮೈಕ್​ ಟೈಸನ್​ ಲುಕ್​ಅನ್ನು ಚಿತ್ರತಂಡ ರಿಲೀಸ್​ ಮಾಡಿತ್ತು. ಇದಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Annatthe: ಅದ್ದೂರಿಯಾಗಿ ಬಿಡುಗಡೆಯಾದ ಅಣ್ಣಾತೆ; ರಜಿನಿ ಫ್ಯಾನ್ಸ್​​ಗೆ ಡಬಲ್ ಸಂಭ್ರಮ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ