AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಅಭಿನಯದ ‘ಕಿಂಗ್ಡಮ್’ ಸಿನಿಮಾದ ಬಿಡುಗಡೆ ಮೇ 30 ರಿಂದ ಜುಲೈ 4ಕ್ಕೆ ಮುಂದೂಡಲಾಗಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆ ಮತ್ತು ಐಪಿಎಲ್ ವೇಳಾಪಟ್ಟಿ ಬದಲಾವಣೆಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಈ ನಿರ್ಧಾರದಿಂದ ಅಭಿಮಾನಿಗಳಲ್ಲಿ ಬೇಸರ ಮೂಡಿದೆ.

ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟ ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on: May 14, 2025 | 12:52 PM

Share

ವಿಜಯ್ ದೇವರಕೊಂಡ (Vijay Devarakonda) ಅಭಿನಯದ ‘ಕಿಂಗ್​ಡಮ್’ ಸಿನಿಮಾ ಮೇ 30ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಗ್ಗೆ ವಿಜಯ್ ದೇವರಕೊಂಡ ತಂಡದವರು ಅಧಿಕೃತ ಘೋಷಣೆ ಮಾಡಿದ್ದಾರೆ. ಸದ್ಯ ಇರುವ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಂಡದವರು ಹೇಳಿಕೊಂಡಿದ್ದಾರೆ. ಸದ್ಯ ಸಿನಿಮಾ ತಂಡದವರು ತೆಗೆದುಕೊಂಡ ಈ ನಿರ್ಧಾರ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ.

ವಿಜಯ್ ದೇವರಕೊಂಡ ಅವರ ನಟನೆಯ ಕೊನೆಯ ಸಿನಿಮಾ ‘ಫ್ಯಾಮಿಲಿ ಸ್ಟಾರ್’. ಈ ಚಿತ್ರ ಅಂದುಕೊಂಡ ಮಟ್ಟದಲ್ಲಿ ಗೆಲುವು ಕಂಡಿಲ್ಲ. ಈ ಕಾರಣಕ್ಕೆ ಬಹಳ ಎಚ್ಚರಿಕೆಯಿಂದ ಅವರು ಹೊಸ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಕಿಂಗ್​​ಡಮ್’ ಹೆಸರಿನ ಟೈಟಲ್ ಇಡಲಾಗಿದೆ. ಈ ಚಿತ್ರವು ಮೇ 30ರಂದು ರಿಲೀಸ್ ಆಗಬೇಕಿತ್ತು. ಆದರೆ, ಭಾರತ ಹಾಗೂ ಪಾಕ್ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಕಾರಣಕ್ಕೆ ಸಿನಿಮಾ ರಿಲೀಸ್ ಮುಂದಕ್ಕೆ ತಳ್ಳಲ್ಪಟ್ಟಿದೆ.

ಇದನ್ನೂ ಓದಿ
Image
ಅನುಷ್ಕಾ-ವಿರಾಟ್ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ; ವಿಶೇಷತೆ ಏನು?
Image
ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್
Image
ಪವನ್ ಕಲ್ಯಾಣ್ ಹಳೆಯ ಚಿತ್ರಕ್ಕೆ ಕೊನೆಗೂ ಬಂತು ರಿಲೀಸ್ ಭಾಗ್ಯ
Image
ರಶ್ಮಿಕಾ ಮಂದಣ್ಣ ಹೀರೋ ಜೊತೆ ತೆಲುಗು ಸಿನಿಮಾ ಘೋಷಿಸಿದ ಸಪ್ತಮಿ ಗೌಡ

‘ಮೇ 30ರಂದು ರಿಲೀಸ್ ಆಗಬೇಕಿದ್ದ ಕಿಂಗ್​ಡಮ್ ಸಿನಿಮಾ ಜುಲೈ 4ಕ್ಕೆ ಮರು ನಿಗದಿ ಆಗಿದೆ. ನಾವು ಅಂದುಕೊಂಡ ದಿನಾಂಕಕ್ಕೆ ಸಿನಿಮಾ ರಿಲೀಸ್ ಮಾಡಲು ಪ್ರಯತ್ನಿಸಿದೆವು. ಆದರೆ, ದೇಶದಲ್ಲಿ ಉಂಟಾದ ಸದ್ಯದ ಪರಿಸ್ಥಿತಿಯಿಂದಾಗಿ ಸಿನಿಮಾ ಪ್ರಚಾರ ಮಾಡಲು ಹಾಗೂ ಸಂಭ್ರಮಿಸಲು ಅವಕಾಶ ಇಲ್ಲ. ಈ ಕಾರಣಕ್ಕೆ ರಿಲೀಸ್​ನ ಮುಂದಕ್ಕೆ ಹಾಕಿಕೊಳ್ಳಬೇಕಿದೆ’ ಎಂದು ತಂಡದವರು ತಿಳಿಸಿದ್ದಾರೆ.

‘ಈ ನಿರ್ಧಾರದಿಂದ ನಾವು ಒಳ್ಳೆಯ ರೀತಿಯಲ್ಲಿ ಕಿಂಗ್​ಡಮ್ ಚಿತ್ರವನ್ನು ಜನರ ಮುಂದೆ ಇಡಬಹುದಾಗಿದೆ. ನಾವು ನಿಮ್ಮ ಬೆಂಬಲ ಹಾಗೂ ಪ್ರೀತಿಯನ್ನು ಗೌರವಿಸುತ್ತೇವೆ. ಈ ಬದಲಾವಣೆ ತರಲು ಸಾಧ್ಯವಾದ ನಿರ್ಮಾಪಕರಾದ ದಿಲ್ ರಾಜ್ ಹಾಗೂ ನಿತೀನ್ ಅವರಿಗೆ ಧನ್ಯವಾದ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಬ್ರ್ಯಾಂಡ್ ಮಾರಾಟಾದಿಂದ ಬರುವ ಹಣದ ಒಂದು ಭಾಗ ಭಾರತೀಯ ಸೇನೆಗೆ; ವಿಜಯ್ ದೇವರಕೊಂಡ ಘೋಷಣೆ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮೇ 25ರಂದು ಐಪಿಎಲ್ ಫಿನಾಲೆ ನಡೆಯುತ್ತಿತ್ತು. ಆದರೆ, ಈ ದಿನಾಂಕ ಈಗ ಮುಂದಕ್ಕೆ ಹೋಗಿದೆ. ಪಾಕ್ ಹಾಗೂ ಭಾರತದ ಮಧ್ಯೆ ಇರುವ ಯುದ್ಧಭೀತಿಯಿಂದ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿತ್ತು. ಐಪಿಎಲ್ ವೇಳಾಪಟ್ಟಿ ಬದಲಾವಣೆ ಕೂಡ ಸಿನಿಮಾ ಮುಂದಕ್ಕೆ ಹೋಗಲು ಕಾರಣ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ