‘ಖುಷಿ’ ಸಿನಿಮಾ ಹಿಟ್: ದೇವಾಲಯಕ್ಕೆ ಭೇಟಿ ಕೊಟ್ಟ ವಿಜಯ್ ದೇವರಕೊಂಡ

Vijay Deverakonda: 'ಖುಷಿ' ಸಿನಿಮಾ ಹಿಟ್ ಆದ ಬೆನ್ನಲ್ಲೆ ವಿಜಯ್ ದೇವರಕೊಂಡ ತಮ್ಮ ಕುಟುಂಬದ ಜೊತೆಗೆ ತೆಲಂಗಾಣದ ಯದಾದ್ರಿ ಭುವನಗಿರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ವಿಜಯ್ ದೇವರಕೊಂಡ ಸಹೋದರ, ನಟ ಆನಂದ್ ದೇವರಕೊಂಡ ಸಹ ಈ ಸಮಯದಲ್ಲಿ ಹಾಜರಿದ್ದರು.

'ಖುಷಿ' ಸಿನಿಮಾ ಹಿಟ್: ದೇವಾಲಯಕ್ಕೆ ಭೇಟಿ ಕೊಟ್ಟ ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ
Follow us
|

Updated on: Sep 03, 2023 | 5:42 PM

ವಿಜಯ್ ದೇವರಕೊಂಡ (Vijay Deverakonda) ಹಾಗೂ ಸಮಂತಾ (Samantha) ಒಟ್ಟಿಗೆ ನಟಿಸಿರುವ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ ಸೆಪ್ಟೆಂಬರ್ 1 ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಬಿಡುಗಡೆ ಆದ ಎರಡೇ ದಿನಕ್ಕೆ ವಿಶ್ವದಾದ್ಯಂತ 51 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಕಳೆದ ಕೆಲವು ವರ್ಷಗಳಿಂದ ಒಂದೊಳ್ಳೆ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದ ವಿಜಯ್ ದೇವರಕೊಂಡ ‘ಖುಷಿ’ ಸಿನಿಮಾ ಹಿಟ್ ಆಗಿರುವುದನ್ನು ಸಂಭ್ರಮಿಸುತ್ತಿದ್ದು, ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಜಯ್ ದೇವರಕೊಂಡ ತಮ್ಮ ಕುಟುಂಬ ಸಮೇತರಾಗಿ ತೆಲಂಗಾಣದ ಯದಾದ್ರಿ ಭುವನಗಿರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಜಯ್ ದೇವರಕೊಂಡ ಸಹೋದರ, ನಟ ಆನಂದ್ ದೇವರಕೊಂಡ, ವಿಜಯ್ ಅವರ ತಂದೆ-ತಾಯಿ ಅವರು ಸಹ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ‘ಖುಷಿ’ ಸಿನಿಮಾದ ಕೆಲವು ಸದಸ್ಯರು ಸಹ ಹಾಜರಿದ್ದರು.

ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಕುಟುಂಬ ಹಾಗೂ ‘ಖುಷಿ’ ಕುಟುಂಬ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಚಿತ್ರಗಳನ್ನು ಸಿನಿಮಾ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ‘ಬ್ಲಾಕ್ ಬಸ್ಟರ್ ನೀಡಿರುವ ವಿಜಯ್ ದೇವರಕೊಂಡ ತಮ್ಮ ಕುಟುಂಬ ಹಾಗೂ ‘ಖುಷಿ’ ಸಿನಿಮಾ ತಂಡದೊಟ್ಟಿಗೆ ಯದಾದ್ರಿ ದೇವಾಲಯದಲ್ಲಿ ಆಶೀರ್ವಾದ ಪಡೆದಿದ್ದಾರೆ. ‘ಖುಷಿ’ ಸಿನಿಮಾ ಫ್ಯಾಮಿಲಿ ಎಂಟರ್ಟೈನರ್ ಆಗಿದ್ದು, ನೋಡಲು ಮರೆಯಬೇಡಿ” ಎಂದಿದೆ, ಜೊತೆಗೆ ಕೆಲವು ಚಿತ್ರಗಳನ್ನು ಸಹ ಹಂಚಿಕೊಂಡಿದೆ.

ಇದನ್ನೂ ಓದಿ:‘ಖುಷಿ’ ಚಿತ್ರದ ಬೆಡ್​ ರೂಮ್​ ದೃಶ್ಯ ವೈರಲ್: ಸಮಂತಾ, ವಿಜಯ್ ದೇವರಕೊಂಡ ಬಗ್ಗೆ ಜನರ ಕಮೆಂಟ್​ ಏನು?

ವಿಜಯ್ ದೇವರಕೊಂಡ ಕುಟುಂಬಕ್ಕೆ ಈಗ ಡಬಲ್ ಖುಷಿ, ವಿಜಯ್ ಸಹೋದರ ಆನಂದ್ ದೇವರಕೊಂಡ ನಟಿಸಿರುವ ‘ಬೇಬಿ’ ಸಿನಿಮಾ ಸಹ ಸೂಪರ್ ಡೂಪರ್ ಹಿಟ್ ಆಗಿದೆ. ಅದರ ಬೆನ್ನಲ್ಲೆ ಈಗ ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಹಾಗಾಗಿ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಗಿದೆ. ವಿಜಯ್, ತಮ್ಮ ಕುಟುಂಬದೊಟ್ಟಿಗೆ ದೇವಾಲಯಕ್ಕೆ ಬಂದಾಗ ಅಭಿಮಾನಿಗಳು ಅವರಿಗೆ ಮುತ್ತಿಕೊಂಡಿದ್ದಾರೆ. ದೇವಾಲಯದ ಆವರಣದಲ್ಲಿ ಕೆಲ ಕಾಲ ನೂಕಾಟ-ತಳ್ಳಾಟ ಸಹ ನಡೆದಿದೆ ಎನ್ನಲಾಗಿದೆ.

ವಿಜಯ್ ದೇವರಕೊಂಡ-ಸಮಂತಾ ನಟಿಸಿರುವ ‘ಖುಷಿ’ ಸಿನಿಮಾ ಪ್ರೇಮ, ಮದುವೆ, ಆಕ್ಷನ್, ಕೌಟುಂಬಿಕ ಮೌಲ್ಯಗಳನ್ನು ಹೊಂದಿರುವ ಪಕ್ಕಾ ಫ್ಯಾಮಿಲಿ ಎಂಟರ್ಟೈನರ್ ಪ್ಯಾಕೇಜ್ ಸಿನಿಮಾ ಆಗಿದೆ. ಸಿನಿಮಾದಲ್ಲಿ ಮುಖ್ಯ ನಟರ ಹೊರತಾಗಿ ಸಚಿನ್ ಖೇಡ್​ಕರ್, ಮುರಳಿ ಶರ್ಮಾ, ವೆನ್ನಿಲ ಕಿಶೋರ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಫ್ಯಾಮಿಲಿ ಆಡಿಯೆನ್ಸ್ ಅನ್ನು ಬಹುವಾಗಿ ಸೆಳೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ