AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖುಷಿ’ ಸಿನಿಮಾ ಹಿಟ್: ದೇವಾಲಯಕ್ಕೆ ಭೇಟಿ ಕೊಟ್ಟ ವಿಜಯ್ ದೇವರಕೊಂಡ

Vijay Deverakonda: 'ಖುಷಿ' ಸಿನಿಮಾ ಹಿಟ್ ಆದ ಬೆನ್ನಲ್ಲೆ ವಿಜಯ್ ದೇವರಕೊಂಡ ತಮ್ಮ ಕುಟುಂಬದ ಜೊತೆಗೆ ತೆಲಂಗಾಣದ ಯದಾದ್ರಿ ಭುವನಗಿರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ವಿಜಯ್ ದೇವರಕೊಂಡ ಸಹೋದರ, ನಟ ಆನಂದ್ ದೇವರಕೊಂಡ ಸಹ ಈ ಸಮಯದಲ್ಲಿ ಹಾಜರಿದ್ದರು.

'ಖುಷಿ' ಸಿನಿಮಾ ಹಿಟ್: ದೇವಾಲಯಕ್ಕೆ ಭೇಟಿ ಕೊಟ್ಟ ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ
Follow us
ಮಂಜುನಾಥ ಸಿ.
|

Updated on: Sep 03, 2023 | 5:42 PM

ವಿಜಯ್ ದೇವರಕೊಂಡ (Vijay Deverakonda) ಹಾಗೂ ಸಮಂತಾ (Samantha) ಒಟ್ಟಿಗೆ ನಟಿಸಿರುವ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ ಸೆಪ್ಟೆಂಬರ್ 1 ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಬಿಡುಗಡೆ ಆದ ಎರಡೇ ದಿನಕ್ಕೆ ವಿಶ್ವದಾದ್ಯಂತ 51 ಕೋಟಿಗೂ ಹೆಚ್ಚು ಹಣ ಗಳಿಸಿದೆ. ಕಳೆದ ಕೆಲವು ವರ್ಷಗಳಿಂದ ಒಂದೊಳ್ಳೆ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದ ವಿಜಯ್ ದೇವರಕೊಂಡ ‘ಖುಷಿ’ ಸಿನಿಮಾ ಹಿಟ್ ಆಗಿರುವುದನ್ನು ಸಂಭ್ರಮಿಸುತ್ತಿದ್ದು, ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವಿಜಯ್ ದೇವರಕೊಂಡ ತಮ್ಮ ಕುಟುಂಬ ಸಮೇತರಾಗಿ ತೆಲಂಗಾಣದ ಯದಾದ್ರಿ ಭುವನಗಿರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಜಯ್ ದೇವರಕೊಂಡ ಸಹೋದರ, ನಟ ಆನಂದ್ ದೇವರಕೊಂಡ, ವಿಜಯ್ ಅವರ ತಂದೆ-ತಾಯಿ ಅವರು ಸಹ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ‘ಖುಷಿ’ ಸಿನಿಮಾದ ಕೆಲವು ಸದಸ್ಯರು ಸಹ ಹಾಜರಿದ್ದರು.

ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಕುಟುಂಬ ಹಾಗೂ ‘ಖುಷಿ’ ಕುಟುಂಬ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಚಿತ್ರಗಳನ್ನು ಸಿನಿಮಾ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ‘ಬ್ಲಾಕ್ ಬಸ್ಟರ್ ನೀಡಿರುವ ವಿಜಯ್ ದೇವರಕೊಂಡ ತಮ್ಮ ಕುಟುಂಬ ಹಾಗೂ ‘ಖುಷಿ’ ಸಿನಿಮಾ ತಂಡದೊಟ್ಟಿಗೆ ಯದಾದ್ರಿ ದೇವಾಲಯದಲ್ಲಿ ಆಶೀರ್ವಾದ ಪಡೆದಿದ್ದಾರೆ. ‘ಖುಷಿ’ ಸಿನಿಮಾ ಫ್ಯಾಮಿಲಿ ಎಂಟರ್ಟೈನರ್ ಆಗಿದ್ದು, ನೋಡಲು ಮರೆಯಬೇಡಿ” ಎಂದಿದೆ, ಜೊತೆಗೆ ಕೆಲವು ಚಿತ್ರಗಳನ್ನು ಸಹ ಹಂಚಿಕೊಂಡಿದೆ.

ಇದನ್ನೂ ಓದಿ:‘ಖುಷಿ’ ಚಿತ್ರದ ಬೆಡ್​ ರೂಮ್​ ದೃಶ್ಯ ವೈರಲ್: ಸಮಂತಾ, ವಿಜಯ್ ದೇವರಕೊಂಡ ಬಗ್ಗೆ ಜನರ ಕಮೆಂಟ್​ ಏನು?

ವಿಜಯ್ ದೇವರಕೊಂಡ ಕುಟುಂಬಕ್ಕೆ ಈಗ ಡಬಲ್ ಖುಷಿ, ವಿಜಯ್ ಸಹೋದರ ಆನಂದ್ ದೇವರಕೊಂಡ ನಟಿಸಿರುವ ‘ಬೇಬಿ’ ಸಿನಿಮಾ ಸಹ ಸೂಪರ್ ಡೂಪರ್ ಹಿಟ್ ಆಗಿದೆ. ಅದರ ಬೆನ್ನಲ್ಲೆ ಈಗ ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಹಾಗಾಗಿ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಗಿದೆ. ವಿಜಯ್, ತಮ್ಮ ಕುಟುಂಬದೊಟ್ಟಿಗೆ ದೇವಾಲಯಕ್ಕೆ ಬಂದಾಗ ಅಭಿಮಾನಿಗಳು ಅವರಿಗೆ ಮುತ್ತಿಕೊಂಡಿದ್ದಾರೆ. ದೇವಾಲಯದ ಆವರಣದಲ್ಲಿ ಕೆಲ ಕಾಲ ನೂಕಾಟ-ತಳ್ಳಾಟ ಸಹ ನಡೆದಿದೆ ಎನ್ನಲಾಗಿದೆ.

ವಿಜಯ್ ದೇವರಕೊಂಡ-ಸಮಂತಾ ನಟಿಸಿರುವ ‘ಖುಷಿ’ ಸಿನಿಮಾ ಪ್ರೇಮ, ಮದುವೆ, ಆಕ್ಷನ್, ಕೌಟುಂಬಿಕ ಮೌಲ್ಯಗಳನ್ನು ಹೊಂದಿರುವ ಪಕ್ಕಾ ಫ್ಯಾಮಿಲಿ ಎಂಟರ್ಟೈನರ್ ಪ್ಯಾಕೇಜ್ ಸಿನಿಮಾ ಆಗಿದೆ. ಸಿನಿಮಾದಲ್ಲಿ ಮುಖ್ಯ ನಟರ ಹೊರತಾಗಿ ಸಚಿನ್ ಖೇಡ್​ಕರ್, ಮುರಳಿ ಶರ್ಮಾ, ವೆನ್ನಿಲ ಕಿಶೋರ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಫ್ಯಾಮಿಲಿ ಆಡಿಯೆನ್ಸ್ ಅನ್ನು ಬಹುವಾಗಿ ಸೆಳೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ