AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಜು ಮತ್ತು ನಾನು ಒಟ್ಟಿಗೆ ಬೆಳೆದವರು’: ದೇವರಕೊಂಡ ಬಗ್ಗೆ ರಶ್ಮಿಕಾ ಓಪನ್​ ಮಾತು

‘ಗೀತ ಗೋವಿಂದಂ’ ಮತ್ತು ‘ಡಿಯರ್​ ಕಾಮ್ರೇಡ್​’ ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ರಿಯಲ್​ ಲೈಫ್​ನಲ್ಲಿಯೂ ಬಹಳ ಆಪ್ತವಾಗಿದ್ದಾರೆ. ಆ ಕುರಿತು ರಶ್ಮಿಕಾ ಮಾತನಾಡಿದ್ದಾರೆ. ‘ನನ್ನ ಬದುಕಿನಲ್ಲಿ ವಿಜಯ್​ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

‘ವಿಜು ಮತ್ತು ನಾನು ಒಟ್ಟಿಗೆ ಬೆಳೆದವರು’: ದೇವರಕೊಂಡ ಬಗ್ಗೆ ರಶ್ಮಿಕಾ ಓಪನ್​ ಮಾತು
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Feb 01, 2024 | 11:46 AM

Share

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಚಿತ್ರರಂಗದಲ್ಲಿ ಬೆಸ್ಟ್​ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಅವರಿಬ್ಬರನ್ನು ತೆರೆಮೇಲೆ ಜೊತೆಯಾಗಿ ನೋಡಲು ಫ್ಯಾನ್ಸ್​ ಇಷ್ಟಪಡುತ್ತಾರೆ. ಅಲ್ಲದೇ ರಿಯಲ್​ ಲೈಫ್​ನಲ್ಲಿ ಕೂಡ ಅವರು ಮದುವೆ ಆಗಲಿ ಎಂಬುದು ಅಭಿಮಾನಿಗಳ ಆಸೆ. ತಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದೇವೆ ಎಂದು ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಿದ್ದರೂ ಕೂಡ ತಮ್ಮ ಬದುಕಿನಲ್ಲಿ ವಿಜಯ್​ ದೇವರಕೊಂಡ ಓರ್ವ ಸ್ಪೆಷಲ್​ ವ್ಯಕ್ತಿ ಎಂದು ರಶ್ಮಿಕಾ ಹೇಳಿದ್ದಾರೆ. ಅಲ್ಲದೇ, ಅವರನ್ನು ವಿಜು ಎಂದು ಕೂಡ ಪ್ರೀತಿಯಿಂದ ಕರೆದಿದ್ದಾರೆ.

‘ವಿ ಆರ್​ ಯುವ’ ನಡೆಸಿದ ಸಂದರ್ಶನದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿದ್ದಾರೆ. ‘ನಾನು ಮತ್ತು ವಿಜು ಒಂದು ರೀತಿಯಲ್ಲಿ ಒಟ್ಟಿಗೆ ಬೆಳೆದವರು. ಈಗ ನಾನು ಮಾಡುತ್ತಿರುವ ಎಲ್ಲದರಲ್ಲೂ ಅವರ ಕೊಡುಗೆ ಇದೆ. ಎಲ್ಲ ಕೆಲಸದಲ್ಲೂ ನಾನು ಅವರ ಸಲಹೆ ಪಡೆಯುತ್ತೇನೆ. ಅವರ ಅಭಿಪ್ರಾಯ ನನಗೆ ಬೇಕು. ಎಲ್ಲದಕ್ಕೂ ಯೆಸ್​ ಎನ್ನುವ ವ್ಯಕ್ತಿ ಅವರಲ್ಲ. ಇದು ಒಳ್ಳೆಯದು, ಇದು ಕೆಟ್ಟದು, ಇದರ ಬಗ್ಗೆ ನನಗೆ ಹೀಗೆ ಅನಿಸುತ್ತಿದೆ ಅಂತ ಅವರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಡೀಪ್​ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಧ್ವನಿ ಎತ್ತಿದ್ದೇಕೆ? ನಟಿಯೇ ಕೊಟ್ಟರು ಉತ್ತರ

‘ನನ್ನ ಬದುಕಿನಲ್ಲಿ ವಿಜಯ್​ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ‘ಗೀತ ಗೋವಿಂದಂ’, ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೊತೆಯಾಗಿ ನಟಿಸಿದರು. ಅಲ್ಲಿಂದ ಅವರಿಬ್ಬರ ನಡುವೆ ಉತ್ತಮ ಬಾಂಧವ್ಯ ಬೆಳೆಯಿತು. ಇಬ್ಬರೂ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ಡೀಪ್​ಫೇಕ್​ ಆರೋಪಿ ಅರೆಸ್ಟ್​; ಪೊಲೀಸರಿಗೆ ರಶ್ಮಿಕಾ ಧನ್ಯವಾದ

ಈ ವರ್ಷ ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಎಂಗೇಜ್​ಮೆಂಟ್​ ಮಾಡಿಕೊಳ್ಳಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಅದನ್ನು ಅವರು ತಳ್ಳಿಹಾಕಿದ್ದಾರೆ. ‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ಎರಡು ವರ್ಷಕ್ಕೊಮ್ಮೆ ನಾನು ಮದುವೆ ಆಗಬೇಕು ಅಂತ ಮಾಧ್ಯಮದವರು ಬಯಸಿರಬಹುದು. ಪ್ರತಿ ವರ್ಷ ನನಗೆ ಇಂಥ ಗಾಸಿಪ್​ ಕೇಳಿಸುತ್ತದೆ’ ಎನ್ನುವ ಮೂಲಕ ವಿಜಯ್​ ದೇವರಕೊಂಡ ಅವರು ಎಂಗೇಜ್​ಮೆಂಟ್​ ಕುರಿತ ಗಾಳಿಸುದ್ದಿಗೆ ಫುಲ್​ಸ್ಟಾಪ್​ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ