AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಜು ಮತ್ತು ನಾನು ಒಟ್ಟಿಗೆ ಬೆಳೆದವರು’: ದೇವರಕೊಂಡ ಬಗ್ಗೆ ರಶ್ಮಿಕಾ ಓಪನ್​ ಮಾತು

‘ಗೀತ ಗೋವಿಂದಂ’ ಮತ್ತು ‘ಡಿಯರ್​ ಕಾಮ್ರೇಡ್​’ ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ರಿಯಲ್​ ಲೈಫ್​ನಲ್ಲಿಯೂ ಬಹಳ ಆಪ್ತವಾಗಿದ್ದಾರೆ. ಆ ಕುರಿತು ರಶ್ಮಿಕಾ ಮಾತನಾಡಿದ್ದಾರೆ. ‘ನನ್ನ ಬದುಕಿನಲ್ಲಿ ವಿಜಯ್​ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

‘ವಿಜು ಮತ್ತು ನಾನು ಒಟ್ಟಿಗೆ ಬೆಳೆದವರು’: ದೇವರಕೊಂಡ ಬಗ್ಗೆ ರಶ್ಮಿಕಾ ಓಪನ್​ ಮಾತು
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Feb 01, 2024 | 11:46 AM

Share

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್​ ದೇವರಕೊಂಡ (Vijay Deverakonda) ಅವರು ಚಿತ್ರರಂಗದಲ್ಲಿ ಬೆಸ್ಟ್​ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಅವರಿಬ್ಬರನ್ನು ತೆರೆಮೇಲೆ ಜೊತೆಯಾಗಿ ನೋಡಲು ಫ್ಯಾನ್ಸ್​ ಇಷ್ಟಪಡುತ್ತಾರೆ. ಅಲ್ಲದೇ ರಿಯಲ್​ ಲೈಫ್​ನಲ್ಲಿ ಕೂಡ ಅವರು ಮದುವೆ ಆಗಲಿ ಎಂಬುದು ಅಭಿಮಾನಿಗಳ ಆಸೆ. ತಾವಿಬ್ಬರು ಪರಸ್ಪರ ಪ್ರೀತಿಸುತ್ತಿದ್ದೇವೆ ಎಂದು ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಿದ್ದರೂ ಕೂಡ ತಮ್ಮ ಬದುಕಿನಲ್ಲಿ ವಿಜಯ್​ ದೇವರಕೊಂಡ ಓರ್ವ ಸ್ಪೆಷಲ್​ ವ್ಯಕ್ತಿ ಎಂದು ರಶ್ಮಿಕಾ ಹೇಳಿದ್ದಾರೆ. ಅಲ್ಲದೇ, ಅವರನ್ನು ವಿಜು ಎಂದು ಕೂಡ ಪ್ರೀತಿಯಿಂದ ಕರೆದಿದ್ದಾರೆ.

‘ವಿ ಆರ್​ ಯುವ’ ನಡೆಸಿದ ಸಂದರ್ಶನದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿದ್ದಾರೆ. ‘ನಾನು ಮತ್ತು ವಿಜು ಒಂದು ರೀತಿಯಲ್ಲಿ ಒಟ್ಟಿಗೆ ಬೆಳೆದವರು. ಈಗ ನಾನು ಮಾಡುತ್ತಿರುವ ಎಲ್ಲದರಲ್ಲೂ ಅವರ ಕೊಡುಗೆ ಇದೆ. ಎಲ್ಲ ಕೆಲಸದಲ್ಲೂ ನಾನು ಅವರ ಸಲಹೆ ಪಡೆಯುತ್ತೇನೆ. ಅವರ ಅಭಿಪ್ರಾಯ ನನಗೆ ಬೇಕು. ಎಲ್ಲದಕ್ಕೂ ಯೆಸ್​ ಎನ್ನುವ ವ್ಯಕ್ತಿ ಅವರಲ್ಲ. ಇದು ಒಳ್ಳೆಯದು, ಇದು ಕೆಟ್ಟದು, ಇದರ ಬಗ್ಗೆ ನನಗೆ ಹೀಗೆ ಅನಿಸುತ್ತಿದೆ ಅಂತ ಅವರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಡೀಪ್​ಫೇಕ್ ವಿಡಿಯೋ ಬಗ್ಗೆ ರಶ್ಮಿಕಾ ಮಂದಣ್ಣ ಧ್ವನಿ ಎತ್ತಿದ್ದೇಕೆ? ನಟಿಯೇ ಕೊಟ್ಟರು ಉತ್ತರ

‘ನನ್ನ ಬದುಕಿನಲ್ಲಿ ವಿಜಯ್​ ದೇವರಕೊಂಡ ಅವರು ಎಲ್ಲರಿಗಿಂತ ಹೆಚ್ಚಾಗಿ ಬೆಂಬಲ ನೀಡಿದ್ದಾರೆ. ಹಾಗಾಗಿ ನಾನು ಅವರನ್ನು ನಿಜವಾಗಿಯೂ ಗೌರವಿಸುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ‘ಗೀತ ಗೋವಿಂದಂ’, ‘ಡಿಯರ್​ ಕಾಮ್ರೇಡ್​’ ಸಿನಿಮಾದಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೊತೆಯಾಗಿ ನಟಿಸಿದರು. ಅಲ್ಲಿಂದ ಅವರಿಬ್ಬರ ನಡುವೆ ಉತ್ತಮ ಬಾಂಧವ್ಯ ಬೆಳೆಯಿತು. ಇಬ್ಬರೂ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: ಡೀಪ್​ಫೇಕ್​ ಆರೋಪಿ ಅರೆಸ್ಟ್​; ಪೊಲೀಸರಿಗೆ ರಶ್ಮಿಕಾ ಧನ್ಯವಾದ

ಈ ವರ್ಷ ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ಎಂಗೇಜ್​ಮೆಂಟ್​ ಮಾಡಿಕೊಳ್ಳಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಅದನ್ನು ಅವರು ತಳ್ಳಿಹಾಕಿದ್ದಾರೆ. ‘ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ಎರಡು ವರ್ಷಕ್ಕೊಮ್ಮೆ ನಾನು ಮದುವೆ ಆಗಬೇಕು ಅಂತ ಮಾಧ್ಯಮದವರು ಬಯಸಿರಬಹುದು. ಪ್ರತಿ ವರ್ಷ ನನಗೆ ಇಂಥ ಗಾಸಿಪ್​ ಕೇಳಿಸುತ್ತದೆ’ ಎನ್ನುವ ಮೂಲಕ ವಿಜಯ್​ ದೇವರಕೊಂಡ ಅವರು ಎಂಗೇಜ್​ಮೆಂಟ್​ ಕುರಿತ ಗಾಳಿಸುದ್ದಿಗೆ ಫುಲ್​ಸ್ಟಾಪ್​ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ