AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್-ಸಮಂತಾ ‘ಖುಷಿ’ ಟ್ರೈಲರ್ ಬಿಡುಗಡೆ: ಪ್ರೇಮ-ಸಂಸಾರದ ಕತೆ

Khushi Trailer: ವಿಜಯ್ ದೇವರಕೊಂಡ ಸಮಂತಾ ನಟನೆಯ 'ಖುಷಿ' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ವಿಜಯ್-ಸಮಂತಾ 'ಖುಷಿ' ಟ್ರೈಲರ್ ಬಿಡುಗಡೆ: ಪ್ರೇಮ-ಸಂಸಾರದ ಕತೆ
'ಖುಷಿ' ಟ್ರೈಲರ್
ಮಂಜುನಾಥ ಸಿ.
|

Updated on: Aug 09, 2023 | 9:07 PM

Share

ವಿಜಯ್ ದೇವರಕೊಂಡ (Vijay Deverakonda) ಹಾಗೂ ಸಮಂತಾ (Samantha) ಇಬ್ಬರೂ ಸಹ ಗೆಲುವಿನ ಹುಡುಕಾಟದಲ್ಲಿದ್ದಾರೆ. ಇಬ್ಬರು ಸೋಲುಂಡಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿರುವ ಈ ಜೋಡಿ ಈಗ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಿದೆ. ಸಿನಿಮಾದ ಹೆಸರು ‘ಖುಷಿ’. ಪ್ರೇಮಕತೆಯುಳ್ಳ ಈ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 09) ಬಿಡುಗಡೆ ಆಗಿದ್ದು, ವಿಜಯ್-ಸಮಂತಾಗೆ ಗೆಲುವು ತಂದುಕೊಡುವ ಭರವಸೆ ಮೂಡಿಸಿದೆ.

‘ಖುಷಿ’ ಸಿನಿಮಾವು ಪ್ರೇಮಕತೆಯನ್ನು ಒಳಗೊಂಡಿದೆ. ಟ್ರೈಲರ್​ನ ಆರಂಭದಲ್ಲಿ ಇದೇನು ಹಿಂದು-ಮುಸ್ಲಿಂ ಪ್ರೇಮಕತೆಯೇ ಎಂಬ ಅನುಮಾನ ಮೂಡುತ್ತದೆ. ‘ರೋಜಾ’ ಮಾದರಿಯಲ್ಲಿ ಹಿಮದ ನಡುವೆ ನಡೆಯುವ ಲವ್ ಸ್ಟೋರಿಯೇ ಎಂಬ ಅನುಮಾನ ಮೂಡುತ್ತದೆ, ಟ್ವಿಸ್ಟ್ ಏನೆಂದರೆ ನಟಿ ಸಮಂತಾ, ಸಿನಿಮಾದಲ್ಲಿ ಮುಸ್ಲಿಂ ವೇಷ ಧರಿಸಿರುವ ಬ್ರಾಹ್ಮಣ ಹುಡುಗಿ!

ಈ ಇಬ್ಬರು ಪೋಷಕರ ವಿರೋಧದ ನಡುವೆಯೂ ಮದುವೆಯಾಗುತ್ತಾರೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇರುತ್ತದೆ ಆ ನಂತರ ದಾಂಪತ್ಯದಲ್ಲಿ ಜಗಳ, ವಿರಸ ತಲೆದೂರುತ್ತದೆ. ತಮ್ಮ ಪ್ರೇಮವನ್ನು ಈ ಜೋಡಿ ಹೇಗೆ ನಿಭಾಯಿಸುತ್ತದೆ, ದಾಂಪತ್ಯದಲ್ಲಿ ವಿರಸ ಬಂದಾಗ ಅದನ್ನು ಹೇಗೆ ಹ್ಯಾಂಡಲ್ ಮಾಡಬೇಕು ಎಂಬಿತ್ಯಾದಿ ವಿಷಯಗಳನ್ನು ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ: ನನ್ನ ಮದುವೆ ಹೀಗಿರಬೇಕು: ಮದುವೆ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ

ಸಿನಿಮಾದಲ್ಲಿ ತೀರ ನವಿರಾದ ಪ್ರೇಮಕತೆಯಿಲ್ಲ ಅದರ ಜೊತೆಗೆ ಹಾಸ್ಯ, ಆಕ್ಷನ್, ಕೌಟುಂಬಿಕ ಸನ್ನಿವೇಶಗಳು, ಹುಸಿ ಜಗಳ, ರೊಮ್ಯಾನ್ಸ್ ಎಲ್ಲವೂ ಇದೆಯೆಂಬುದನ್ನು ಟ್ರೈಲರ್ ಸಾರಿ ಹೇಳುತ್ತಿದೆ. ಜೊತೆಗೆ ಕೆಲವು ಮಧುರವಾದ ಹಾಡುಗಳ ಝಲಕ್​ ಸಹ ಟ್ರೈಲರ್​ನಲ್ಲಿ ನೀಡಲಾಗಿದೆ. ಬಿಡುಗಡೆ ಆದ ಕೆಲವೇ ಸಮಯದಲ್ಲಿ ಲಕ್ಷಾಂತರ ಮಂದಿ ‘ಖುಷಿ’ ಸಿನಿಮಾದ ಟ್ರೈಲರ್ ಅನ್ನು ನೋಡಿ ಮೆಚ್ಚಿಕೊಂಡಿದ್ದಾರೆ.

‘ಖುಷಿ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ, ಸಮಂತಾ ಜೊತೆಗೆ ವೆನ್ನಿಲ ಕಿಶೋರ್, ಸತ್ಯರಾಜ್, ಸಚಿನ್ ಖೇಡ್ಕರ್, ಜಯರಾಂ, ರಾಹುಲ್ ರಾಮಕೃಷ್ಣ ಇನ್ನೂ ಕೆಲವು ಅತ್ಯುತ್ತಮ ನಟರು ಸಿನಿಮಾದಲ್ಲಿದ್ದಾರೆ. ಸಿನಿಮಾದ ಕತೆಯನ್ನು ಶಿವ ನಿರ್ವಾನ ಬರೆದು, ನಿರ್ದೇಶನ ಮಾಡಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ನವೀನ್ ಯೆರನೇನಿ ಹಾಗೂ ವೈ ರವಿಶಂಕರ್ ಅವರುಗಳು ಮೈತ್ರಿ ಮೂವಿ ಮೇಕರ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಿನಿಮಾಕ್ಕೆ ಸಂಗೀತವನ್ನು ಹೇಷಮ್ ಅಬ್ದುಲ್ ಹವಾದ್ ನೀಡಿದ್ದಾರೆ. ‘ಖುಷಿ’ ಸಿನಿಮಾವು ಸೆಪ್ಟೆಂಬರ್ 1 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?