‘ರೌಡಿ ಜನಾರ್ದನ’ ವಿಜಯ್ ದೇವರಕೊಂಡ ಎದೆ ಮೇಲೆ ಕಾಲಿಟ್ಟ ನಟಿ ಕೀರ್ತಿ ಸುರೇಶ್

ವಿಜಯ್ ದೇವರಕೊಂಡ ನಟನೆಯ ‘ರೌಡಿ ಜನಾರ್ದನ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ವಿಜಯ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಎದೆಯ ಮೇಲೆ ನಟಿ ಕೀರ್ತಿ ಸುರೇಶ್ ಕಾಲು ಇಟ್ಟಿರುವ ಭಂಗಿ ಕುತೂಹಲ ಮೂಡಿಸಿದೆ. ಈ ಮಾಸ್ ಆ್ಯಕ್ಷನ್ ಸಿನಿಮಾ ಡಿಸೆಂಬರ್‌ನಲ್ಲಿ ತೆರೆಕಾಣಲಿದೆ.

‘ರೌಡಿ ಜನಾರ್ದನ’ ವಿಜಯ್ ದೇವರಕೊಂಡ ಎದೆ ಮೇಲೆ ಕಾಲಿಟ್ಟ ನಟಿ ಕೀರ್ತಿ ಸುರೇಶ್
Vijay Deverakonda

Updated on: May 10, 2026 | 12:10 PM

ಸೌತ್ ಸಿನಿಮಾರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Deverakonda) ಅವರು ಮೇ 9ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ರೌಡಿ ಜನಾರ್ದನ’ (Rowdy Janardhana) ಚಿತ್ರತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಜಯ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದು, ಆ ಪೈಕಿ ‘ರೌಡಿ ಜನಾರ್ದನ’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ (Keerthy Suresh) ನಟಿಸುತ್ತಿದ್ದಾರೆ. ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ.

ರವಿ ಕಿರಣ್ ಕೋಲಾ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸುರಿಯುವ ಮಳೆಯಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ಕುಳಿತಿರುವ ವಿಜಯ್ ಅವರ ರಗಡ್ ಲುಕ್ ನೋಡಿದರೆ ಇದು ಪಕ್ಕಾ ಆ್ಯಕ್ಷನ್ ಸಿನಿಮಾ ಎಂಬುದನ್ನು ಸಾಬೀತುಪಡಿಸುತ್ತಿದೆ. ಜೊತೆಗೆ ರೊಮ್ಯಾನ್ಸ್ ಕೂಡ ಇರಲಿದೆ.

ಈಗ ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ನಟಿ ಕೀರ್ತಿ ಸುರೇಶ್ ಅವರ ಭಂಗಿ. ವಿಜಯ್ ದೇವರಕೊಂಡ ಎದೆಯ ಮೇಲೆ ಕೀರ್ತಿ ಸುರೇಶ್ ಕಾಲು ಇಟ್ಟಿರುವ ದೃಶ್ಯವು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಇವರಿಬ್ಬರ ನಡುವೆ ವಿಭಿನ್ನವಾದ ಪ್ರೇಮಕಥೆ ಅಥವಾ ಭಾವನಾತ್ಮಕ ತಿರುವು ಇರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ. ಈ ಮಾಸ್ ಆ್ಯಕ್ಷನ್ ಸಿನಿಮಾ ಇದೇ ವರ್ಷದ ಡಿಸೆಂಬರ್‌ನಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ವಿಜಯ್ ದೇವರಕೊಂಡ ಅವರ ಸರಣಿ ಸೋಲುಗಳ ನಂತರ ಈ ಸಿನಿಮಾ ಅವರಿಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಡಲಿದೆ ಎಂಬ ಭರವಸೆಯಲ್ಲಿ ಅಭಿಮಾನಿಗಳಿದ್ದಾರೆ.

ಇದನ್ನೂ ಓದಿ: ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಸದ್ಯ ಬಿಡುಗಡೆಯಾಗಿರುವ ‘ರೌಡಿ ಜನಾರ್ದನ’ ಸಿನಿಮಾದ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪೋಸ್ಟರ್ ಶೇರ್ ಮಾಡಿಕೊಂಡ ಅಭಿಮಾನಿಗಳು ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಇದರಲ್ಲದೇ ‘ರಣಬಾಲಿ’ ಸಿನಿಮಾದ ಕೆಲಸಗಳಲ್ಲೂ ವಿಜಯ್ ದೇವರಕೊಂಡ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us