AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರಾಠ ಮಂದಿರ್​’ ಮಾಲೀಕರನ್ನು ಭೇಟಿ ಆದ ವಿಜಯ್​ ದೇವರಕೊಂಡ; ತಪ್ಪು ತಿಳಿವಳಿಕೆಗೆ ಫುಲ್​ ಸ್ಟಾಪ್​

Vijay Devarakonda | Manoj Desai: ವಿಜಯ್​ ದೇವರಕೊಂಡ ಮತ್ತು ಮನೋಜ್​ ದೇಸಾಯಿ ಪರಸ್ಪರ ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

‘ಮರಾಠ ಮಂದಿರ್​’ ಮಾಲೀಕರನ್ನು ಭೇಟಿ ಆದ ವಿಜಯ್​ ದೇವರಕೊಂಡ; ತಪ್ಪು ತಿಳಿವಳಿಕೆಗೆ ಫುಲ್​ ಸ್ಟಾಪ್​
ವಿಜಯ್ ದೇವರಕೊಂಡ, ಮನೋಜ್ ದೇಸಾಯಿ
TV9 Web
| Edited By: |

Updated on:Aug 29, 2022 | 4:39 PM

Share

ಚಿತ್ರರಂಗದಲ್ಲಿ ಕೆಲವೊಮ್ಮೆ ವಿನಾ ಕಾರಣ ವಿವಾದಗಳು ಹುಟ್ಟಿಕೊಳ್ಳುತ್ತವೆ. ನಟ ವಿಜಯ್​ ದೇವರಕೊಂಡ (Vijay Devarakonda) ಅವರಿಗೆ ಹಾಗೆಯೇ ಆಗಿದೆ. ‘ಲೈಗರ್​’ (Liger) ಸಿನಿಮಾ ಪ್ರಮೋಷನ್​ ವೇಳೆ ಅವರು ನೀಡಿದ ಒಂದು ಹೇಳಿಕೆಯಿಂದ ಪರ-ವಿರೋಧದ ಚರ್ಚೆ ಶುರುವಾಯಿತು. ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಅವರು ಹೇಳಿದ್ದಕ್ಕೆ ಮುಂಬೈನ ‘ಮರಾಠ ಮಂದಿರ್​’ (Maratha Mandir) ಚಿತ್ರಮಂದಿರದ ಮಾಲಿಕರಾದ ಮನೋಜ್​ ದೇಸಾಯಿ ಗರಂ ಆಗಿ ಪ್ರತಿಕ್ರಿಯಿಸಿದರು. ‘ವಿಜಯ್​ ದೇವರಕೊಂಡ ಅವರದ್ದು ಅಹಂಕಾರದ ಸ್ವಭಾವ’ ಎಂದು ಅವರು ಹೇಳಿದರು. ಆದರೆ ಈ ವಿವಾದಕ್ಕೆ ಈಗ ತೆರೆ ಬಿದ್ದಿದೆ. ವಿಜಯ್​ ದೇವರಕೊಂಡ ಮತ್ತು ಮನೋಜ್​ ದೇಸಾಯಿ ಅವರು ಪರಸ್ಪರ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ. ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದಾರೆ.

‘ಲೈಗರ್​’ ಸಿನಿಮಾ ತೆರೆಕಾಣುವುದಕ್ಕೂ ಮುನ್ನ ಈ ಚಿತ್ರವನ್ನು ಬಹಿಷ್ಕಾರ ಮಾಡಲು ಕೆಲವರು ಹುನ್ನಾರ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ್​ ದೇವರಕೊಂಡ ಅವರು, ‘ತಾಯಿಯ ಆಶೀರ್ವಾದ ಇದೆ. ಜನರ ಪ್ರೀತಿ, ದೇವರ ಬೆಂಬಲ ಹಾಗೂ ನಮ್ಮೊಳಗೆ ಕಿಚ್ಚು ಇದೆ. ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎಂದು ಹೇಳಿಕೆ ನೀಡಿದ್ದರು. ಅದನ್ನು ನೋಡಿ ಮನೋಜ್​ ದೇಸಾಯಿ ಬೇರೆ ರೀತಿಯಲ್ಲಿ ಅರ್ಥೈಸಿಕೊಂಡಿದ್ದರು.

ಮನೋಜ್​ ದೇಸಾಯಿ ಅವರು ತಮ್ಮ ವಿರುದ್ಧ ಮಾತನಾಡಿದ್ದು ತಿಳಿಯುತ್ತಿದ್ದಂತೆಯೇ ವಿಜಯ್​ ದೇವರಕೊಂಡ ಅವರು ಮುಂಬೈಗೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರೂ ಪರಸ್ಪರ ಕುಳಿತು ಮಾತನಾಡಿದ್ದಾರೆ. ಆ ಮೂಲಕ ತಮ್ಮ ನಡುವೆ ಇದ್ದ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದಾರೆ. ನಂತರ ಮನೋಜ್​ ದೇಸಾಯಿ ಅವರ ಕಾಲಿಗೆ ನಮಸ್ಕರಿಸಿದ ವಿಜಯ್​ ದೇವರಕೊಂಡ ಅವರು ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ
Image
Liger: ‘ಲೈಗರ್ ಸಿನಿಮಾ ಬ್ಲಾಕ್​ ಬಸ್ಟರ್​’: ರಿಲೀಸ್​ಗೂ ಮುನ್ನ ಘೋಷಿಸಿದ ವಿಜಯ್​ ದೇವರಕೊಂಡ
Image
Liger: ವಡೋದರದಲ್ಲಿ ವಿಜಯ್​ ದೇವರಕೊಂಡ, ಅನನ್ಯಾ ಪಾಂಡೆಗೆ ಅದ್ದೂರಿ ಸ್ವಾಗತ
Image
Liger Movie: ಅಹಮದಾಬಾದ್​ನಲ್ಲಿ ವಿಜಯ್​ ದೇವರಕೊಂಡ ನೋಡಲು ಜನಸಾಗರ; ಜೋರಾಗಿದೆ ‘ಲೈಗರ್​’ ಹವಾ
Image
Sini Shetty: ಮಿಸ್​ ಇಂಡಿಯಾ ಸಿನಿ ಶೆಟ್ಟಿಗೂ ಇಷ್ಟ ವಿಜಯ್​ ದೇವರಕೊಂಡ; ಮನದ ಮಾತು ತೆರೆದಿಟ್ಟ ಸುಂದರಿ

‘ವಿಜಯ್​ ದೇವರಕೊಂಡ ತುಂಬ ಒಳ್ಳೆಯ ಹುಡುಗ. ವಿನಯವಂತ ವ್ಯಕ್ತಿ. ಆತನಿಗೆ ನನ್ನ ಪ್ರೀತಿ ಯಾವಾಗಲೂ ಇರಲಿದೆ. ಅವನಿಗೆ ಒಳ್ಳೆಯ ಭವಿಷ್ಯ ಇದೆ. ಆತನ ಎಲ್ಲ ಸಿನಿಮಾಗಳನ್ನು ನಾನು ತೆಗೆದುಕೊಳ್ಳುವುದಾಗಿ ಭರವಸೆ ನೀಡುತ್ತೇನೆ. ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ’ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಮನೋಜ್​ ದೇಸಾಯಿ ಅವರ ಭೇಟಿಯ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ವಿಜಯ್​ ದೇವರಕೊಂಡ ಅವರ ವಿನಯವಂತಿಕೆಯನ್ನು ಕಂಡು ಜನರು ಭೇಷ್ ಎನ್ನುತ್ತಿದ್ದಾರೆ. ಸದ್ಯ, ‘ಲೈಗರ್​’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯ್​ ದೇವರಕೊಂಡ ನಟನೆಯನ್ನು ಜನರು ಮೆಚ್ಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:18 pm, Mon, 29 August 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!