AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ರಿಲೀಸ್​ಗೂ ಮೊದಲೇ ಸೋಲಿನ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರ ‘ಲೈಗರ್’ ಚಿತ್ರದ ವೈಫಲ್ಯದ ಬಗ್ಗೆ ಮಾತನಾಡಿದ್ದು, ಅವರು ಯಾವುದೇ ಬೇಸರ ವ್ಯಕ್ತಪಡಿಸಿಲ್ಲ. ಬದಲಾಗಿ, ಚಿತ್ರದ ಸೋಲು ಅಮೂಲ್ಯವಾದ ಪಾಠಗಳನ್ನು ಕಲಿಸಿದೆ ಎಂದು ಹೇಳಿದ್ದಾರೆ. ‘ಲೈಗರ್’ ಒಂದು ಸವಾಲಿನ ಪಾತ್ರವಾಗಿತ್ತು ಮತ್ತು ಅದನ್ನು ಮಾಡುವ ಪ್ರಕ್ರಿಯೆಯನ್ನು ಆನಂದಿಸಿದ್ದಾರೆ ಎಂದೂ ಹೇಳಿದ್ದಾರೆ.

ಸಿನಿಮಾ ರಿಲೀಸ್​ಗೂ ಮೊದಲೇ ಸೋಲಿನ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ
ವಿಜಯ್
ರಾಜೇಶ್ ದುಗ್ಗುಮನೆ
|

Updated on: May 19, 2025 | 7:06 AM

Share

ನಟ ವಿಜಯ್ ದೇವರಕೊಂಡ ಅವರು ‘ಲೈಗರ್’ ಸಿನಿಮಾ (Liger Movie) ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರ ವೃತ್ತಿ ಜೀವನದ ದೊಡ್ಡ ಡಿಸಾಸ್ಟರ್ ಸಿನಿಮಾ ಎಂದು ಇದು ಅನಿಸಿಕೊಂಡಿತು. ಈ ಚಿತ್ರವನ್ನು ಪುರಿ ಜಗನ್ನಾಥ್ ಅವರು ನಿರ್ದೇಶನ ಮಾಡಿದ್ದರು. ಇದಾದ ಬಳಿಕ ಈ ಜೋಡಿ ಒಟ್ಟಿಗೆ ಸಿನಿಮಾ ಮಾಡಬೇಕಿತ್ತು. ಆದರೆ, ಈ ಚಿತ್ರದ ಸೋಲಿನ ಬಳಿಕ ಅದು ಕೂಡ ಕ್ಯಾನ್ಸಲ್ ಆಯಿತು. ಈ ಬಗ್ಗೆ ವಿಜಯ್ ಮಾತನಾಡಿದ್ದು, ‘ಲೈಗರ್’ ಸಿನಿಮಾ ಸೋಲಿನ ಬಗ್ಗೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಅವರ ನಟನೆಯ ‘ಕಿಂಗ್​ಡಮ್’ ಸಿನಿಮಾ ಇನ್ನೇನು ರಿಲೀಸ್ ಆಗುವ ಹಂತದಲ್ಲಿ ಇದೆ. ಆ ಸಂದರ್ಭದಲ್ಲೇ ಅವರು ಸೋಲಿನ ಬಗ್ಗೆ ಮಾತನಾಡಿದ್ದಾರೆ.

ಕೆಲವು ಸಿನಿಮಾಗಳು ಹಿಟ್ ಆಗಿ ಹಣ ನೀಡುತ್ತವೆ. ಇನ್ನೂ ಕೆಲವು ಸಿನಿಮಾಗಳು ಅನುಭವ ನೀಡುತ್ತವೆ. ಸಿನಿಮಾ ಸೋತರೂ ಕಲಾವಿದರಿಗೆ ಅನುಭವದ ಭಂಡಾರ ಸಿಗುತ್ತದೆ. ವಿಜಯ್ ಅಭಿಪ್ರಾಯ ಕೂಡ ಇದರದ್ದೇ. ‘ಪಾತ್ರ ತುಂಬಾ ಸವಾಲಿನದ್ದಾಗಿತ್ತು. ಅದನ್ನು ಮಾಡುವ ಪ್ರಕ್ರಿಯೆಯನ್ನು ನಾನು ಸಂಪೂರ್ಣವಾಗಿ ಆನಂದಿಸಿದೆ’ ಎಂದು ವಿಜಯ್ ಹೇಳಿದ್ದಾರೆ.

‘ನಾವು ಉತ್ತಮ ಚಿತ್ರ ಮಾಡಲಿಲ್ಲ ಎಂಬ ಬೇಸರ ನನಗೆ ಇದೆ. ಆದರೆ, ನಾವು ಬರೆದ ಕಥೆ ಕಾಗದದ ಮೇಲೆ ಒಳ್ಳೆಯ ಐಡಿಯಾ ಆಗಿತ್ತು. ಆದರೆ ನನಗೆ ಆ ಚಿತ್ರದ ಬಗ್ಗೆ ಯಾವುದೇ ವಿಷಾದವಿಲ್ಲ’ ಎಂದು ಅವರು ಹೇಳಿದ್ದಾರೆ.  ‘ಲೈಗರ್’ ವೈಫಲ್ಯ ಅವರಿಗೆ ಅಮೂಲ್ಯವಾದ ಪಾಠಗಳನ್ನು ಕಲಿಸಿದೆಯಂತೆ. ವ್ಯಕ್ತಿಯಾಗಿ ನನ್ನನ್ನು ಬದಲಾಯಿಸಿತು ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

‘ಲೈಗರ್’ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲಾಯಿತು. ಈ ಚಿತ್ರವನ್ನು ಕರಣ್ ಜೋಹರ್ ಅವರು ನಿರ್ಮಾಣ ಮಾಡಿದ್ದರು. ಅನನ್ಯಾ ಪಾಂಡೆ ಈ ಚಿತ್ರಕ್ಕೆ ನಾಯಕಿ. ಅವರನ್ನು ಟಾಲಿವುಡ್​ಗೆ ಪರಿಚಯಿಸಲಾಯಿತು. ಮೈಕ್ ಟೈಸನ್ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿದ್ದರು. ಈ ಚಿತ್ರಕ್ಕಾಗಿ ಅವರು ಇದಲ್ಲಿಯ್ಯೇ ಹೋಗಿ ಶೂಟ್ ಮಾಡಿ ಬರಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ.

ಇದನ್ನೂ ಓದಿ: ಪತ್ನಿಯ ಗುಣ ಹೇಗಿರಬೇಕು? ಮದುವೆ ಬಗ್ಗೆ ಮೌನ ಮುರಿದ ವಿಜಯ್ ದೇವರಕೊಂಡ 

ವಿಜಯ್ ದೇವರಕೊಂಡ ಅವರು ಸದ್ಯ ‘ಕಿಂಗ್​ಡಮ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಜುಲೈ 4ರಂದು ಚಿತ್ರ ತೆರೆಗೆ ಬರಲಿದೆ. ಗೌತಮ್ ತಿನ್ನನುರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವು ನಿರೀಕ್ಷೆಯಲ್ಲಿ ಅವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು