ಕೌಟುಂಬಿಕ ಚಿತ್ರದಲ್ಲೂ ಕೆಟ್ಟ ಬೈಗುಳ? ‘ಫ್ಯಾಮಿಲಿ ಸ್ಟಾರ್​’ಗೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ

‘ಫ್ಯಾಮಿಲಿ ಸ್ಟಾರ್​’ ಸಿನಿಮಾ ಏ.5ರಂದು ಬಿಡುಗಡೆ ಆಗಲಿದೆ. ತೆಲುಗು ಮತ್ತು ತಮಿಳು ವರ್ಷನ್​ನಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ. ನಟ ವಿಜಯ್​ ದೇವರಕೊಂಡ ನಿಭಾಯಿಸಿದ ಪಾತ್ರಕ್ಕೆ ಈ ಸಿನಿಮಾದಲ್ಲಿ 2 ಶೇಡ್​ ಇದೆ. ಆ್ಯಕ್ಷನ್​ ಬಯಸುವ ಸಿನಿಪ್ರಿಯರಿಗೂ ಮನರಂಜನೆ ಸಿಗಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

ಕೌಟುಂಬಿಕ ಚಿತ್ರದಲ್ಲೂ ಕೆಟ್ಟ ಬೈಗುಳ? ‘ಫ್ಯಾಮಿಲಿ ಸ್ಟಾರ್​’ಗೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ
ಮೃಣಾಲ್​ ಠಾಕೂರ್​, ವಿಜಯ್​ ದೇವರಕೊಂಡ
Follow us
|

Updated on: Apr 03, 2024 | 4:49 PM

ನಟ ವಿಜಯ್ ದೇವರಕೊಂಡ (Vijay Deverakonda) ಅವರು ‘ಫ್ಯಾಮಿಲಿ ಸ್ಟಾರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ನಿರ್ದೇಶಕ ಪರಶುರಾಮ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಮೊದಲು ವಿಜಯ್​ ದೇವರಕೊಂಡ ಮತ್ತು ಪರಶುರಾಮ್​ ಅವರ ಕಾಂಬಿನೇಷನ್​ನಲ್ಲಿ ‘ಗೀತ ಗೋವಿಂದಂ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಅವರು ಕೌಟುಂಬಿಕ ಪ್ರೇಕ್ಷಕರನ್ನು ರಂಜಿಸಲು ‘ಫ್ಯಾಮಿಲಿ ಸ್ಟಾರ್​’ (Family Star) ಸಿನಿಮಾ ಮಾಡಿದ್ದಾರೆ. ಇದು ಕೌಟುಂಬಿಕ ಕಥಾಹಂದರದ ಸಿನಿಮಾ ಆಗಿದ್ದರೂ ಕೂಡ ಸೆನ್ಸಾರ್​ ಮಂಡಳಿ (Censor Board) ಕತ್ತರಿ ಪ್ರಯೋಗ ಮಾಡಿದೆ. ಯಾಕೆಂದರೆ, ಸಿನಿಮಾದಲ್ಲಿ ಕೆಟ್ಟು ಬೈಗುಳಗಳು ಇವೆ ಎನ್ನಲಾಗಿದೆ.

ಯಾವುದೇ ಅಡೆತಡೆ ಇಲ್ಲದೇ ಎಲ್ಲರೂ ನೋಡಬಹುದಾದ ಸಿನಿಮಾ ಆಗಿದ್ದರೆ ಸೆನ್ಸಾರ್​ ಮಂಡಳಿಯವರು ‘ಯು’ ಪ್ರಮಾಣಪತ್ರ ನೀಡುತ್ತಾರೆ. ಆದರೆ ‘ಫ್ಯಾಮಿಲಿ ಸ್ಟಾರ್​’ ಸಿನಿಮಾದಲ್ಲಿ ಬೈಗುಳುಗಳು ಇರುವುದರಿಂದ ಚಿಕ್ಕ ಮಕ್ಕಳ ವೀಕ್ಷಣೆಗೆ ಪೋಷಕರ ಮಾರ್ಗದರ್ಶನ ಬೇಕು ಎಂಬ ಕಾರಣಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಲಾಗಿದೆ. ಒಂದಷ್ಟು ಬೈಗುಳಗಳಿಗೆ ಕತ್ತರಿ ಹಾಕಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಫಿಲ್ಮ್​ಫೇರ್​ ಪ್ರಶಸ್ತಿ ಹರಾಜು ಹಾಕಿದ್ದು ಯಾಕೆ? ಮೌನ ಮುರಿದ ವಿಜಯ್​ ದೇವರಕೊಂಡ

ದಿಲ್​ ರಾಜು ಅವರು ‘ಫ್ಯಾಮಿಲಿ ಸ್ಟಾರ್​’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ನಟಿ ಮೃಣಾಲ್​ ಠಾಕೂರ್​ ಅವರಿಗೆ ಇದು ತೆಲುಗಿನಲ್ಲಿ ಮೂರನೇ ಸಿನಿಮಾ. ಈ ಮೊದಲು ಅವರು ನಟಿಸಿದ ‘ಸೀತಾ ರಾಮಂ’ ಹಾಗೂ ‘ಹಾಯ್​ ನಾನ್ನ’ ಸಿನಿಮಾಗಳು ಸೂಪರ್​ ಹಿಟ್​ ಆದವು. ಈಗ ಅವರ ಮೂರನೇ ಸಿನಿಮಾ ಯಾವ ರೀತಿ ಪ್ರತಿಕ್ರಿಯೆ ಪಡೆದುಕೊಳ್ಳಲಿದೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗಿದೆ.

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ ಗಂಡ ವಿಜಯ್​ ದೇವರಕೊಂಡ ರೀತಿ ಇರಬೇಕು’: ನಿಜ ಎಂದ ನಟಿ

‘ಫ್ಯಾಮಿಲಿ ಸ್ಟಾರ್​’ ಸಿನಿಮಾ ಏಪ್ರಿಲ್​ 5ರಂದು ಬಿಡುಗಡೆ ಆಗಲಿದೆ. ತೆಲುಗು ಮತ್ತು ತಮಿಳು ವರ್ಷನ್​ನಲ್ಲಿ ಈ ಸಿನಿಮಾ ತೆರೆಕಾಣಲಿದೆ. ವಿಜಯ್​ ದೇವರಕೊಂಡ ಅವರ ಪಾತ್ರಕ್ಕೆ ಈ ಸಿನಿಮಾದಲ್ಲಿ ಎರಡು ಶೇಡ್​ ಇದೆ. ಆ್ಯಕ್ಷನ್​ ಬಯಸುವ ಪ್ರೇಕ್ಷಕರಿಗೂ ಮನರಂಜನೆ ಸಿಗಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ‘ಫ್ಯಾಮಿಲಿ ಸ್ಟಾರ್​’ ಚಿತ್ರದ ಒಟ್ಟು ಅವಧಿ 2 ಗಂಟೆ 43 ನಿಮಿಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್