AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಂಗ್ಡಮ್’ ಟ್ರೇಲರ್ ಮೂಲಕ ಹೊಸ ಸಿನಿಮಾದ ಆ್ಯಕ್ಷನ್ ಝಲಕ್ ತೋರಿಸಿದ ವಿಜಯ್ ದೇವರಕೊಂಡ

ಅದ್ದೂರಿಯಾಗಿ ಮೂಡಿಬಂದಿರುವ ‘ಕಿಂಗ್ಡಮ್’ ಸಿನಿಮಾದ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡ, ನಟಿ ಭಾಗ್ಯಶ್ರೀ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಜುಲೈ 31ರಂದು ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ‘ಕಿಂಗ್ಡಮ್’ ತೆರೆಕಾಣಲಿದ್ದು, ಈಗಾಗಲೇ ಬುಕಿಂಗ್ ಶುರುವಾಗಿದೆ.

‘ಕಿಂಗ್ಡಮ್’ ಟ್ರೇಲರ್ ಮೂಲಕ ಹೊಸ ಸಿನಿಮಾದ ಆ್ಯಕ್ಷನ್ ಝಲಕ್ ತೋರಿಸಿದ ವಿಜಯ್ ದೇವರಕೊಂಡ
Vijay Deverakonda
ಮದನ್​ ಕುಮಾರ್​
| Edited By: |

Updated on:Jul 29, 2025 | 10:22 AM

Share

ನಟ ವಿಜಯ್ ದೇವರಕೊಂಡ (Vijay Deverakonda) ಅವರು ‘ಕಿಂಗ್ಡಮ್’ ಸಿನಿಮಾ ಮೇಲೆ ಸಖತ್ ಭರವಸೆ ಇಟ್ಟುಕೊಂಡಿದ್ದಾರೆ. ಅದೇ ರೀತಿ ಅವರ ಅಭಿಮಾನಿಗಳಿಗೆ ಈ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗ ಸಿನಿಮಾ ಮೇಲಿನ ಹೈಪ್ ಹೆಚ್ಚಿಸಲು ಟ್ರೇಲರ್ ಬಿಡುಗಡೆ ಆಗಿದೆ. ‘ಕಿಂಗ್ಡಮ್’ ಸಿನಿಮಾದ ಟ್ರೇಲರ್ (Kingdom Movie Trailer) ನೋಡಿದ ಅಭಿಮಾನಿಗಳು ಮನಸಾರೆ ಇಷ್ಟಪಟ್ಟಿದ್ದಾರೆ. ಯೂಟ್ಯೂಬ್​​ನಲ್ಲಿ ಕಮೆಂಟ್ ಮಾಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.  ‘ಕಿಂಗ್ಡಮ್’ (Kingdom) ಸಿನಿಮಾದಲ್ಲಿ ಯಾವ ಪರಿ ಆ್ಯಕ್ಷನ್ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ.

‘ಕಿಂಗ್ಡಮ್’ ಸಿನಿಮಾಗೆ ಗೌತಮ್ ತಿನ್ನನುರಿ ಅವರು ನಿರ್ದೇಶನ ಮಾಡಿದ್ದಾರೆ. ನಾಗ ವಂಶಿ ಮತ್ತು ಸಾಯಿ ಸೌಜನ್ಯ ಅವರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್ ಸಾಕ್ಷಿಯಾಗಿದೆ. ಬಹಳ ಕಷ್ಟಪಟ್ಟು ವಿಜಯ್ ದೇವರಕೊಂಡ ಅವರು ಆ್ಯಕ್ಷನ್ ದೃಶ್ಯಗಳಲ್ಲಿ ಅಭಿನಯಿಸಿದ್ದಾರೆ. ದೊಡ್ಡ ಪರದೆಯಲ್ಲಿ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ರೆಡಿಯಾಗಿದ್ದಾರೆ.

ಜುಲೈ 31ರಂದು ‘ಕಿಂಗ್ಡಮ್’ ಸಿನಿಮಾ ಬಿಡುಗಡೆ ಆಗಲಿದೆ. ವಿಜಯ್ ದೇವರಕೊಂಡ ಅವರು ಫ್ಯಾನ್ ಇಂಡಿಯಾ ಸ್ಟಾರ್. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಹಾಗಾಗಿ ಈ ಸಿನಿಮಾವನ್ನು ತಮಿಳು ಮತ್ತು ತೆಲುಗಿನ ಜೊತೆ ಹಿಂದಿಗೂ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಹಿಂದಿಯಲ್ಲಿ ಈ ಸಿನಿಮಾಗೆ ‘ಸಾಮ್ರಾಜ್ಯ’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ
Image
ಸಿನಿಮಾ ರಿಲೀಸ್ ಸಂದರ್ಭದಲ್ಲೇ ಆಸ್ಪತ್ರೆಗೆ ದಾಖಲಾದ ವಿಜಯ್ ದೇವರಕೊಂಡ
Image
ದೊಡ್ಡ ಬಾಲಿವುಡ್ ಅವಕಾಶವನ್ನು ನಿರಾಕರಿಸಿದ ವಿಜಯ್ ದೇವರಕೊಂಡ, ಕಾರಣ?
Image
ನನಗೆ ಮಾತ್ರ ಟೀಕೆ ಬೇರೆ ನಟರಿಗಿಲ್ಲ: ವಿಜಯ್ ದೇವರಕೊಂಡ ಬೇಸರಕ್ಕೆ ಕಾರಣವೇನು?
Image
ವಿಜಯ್ ದೇವರಕೊಂಡ ಅನ್ನು ತುಳಿಯಲು ಯತ್ನಿಸಿದ್ದರೇ ಆ ಸ್ಟಾರ್ ನಟ?

‘ಕಿಂಗ್ಡಮ್’ ಸಿನಿಮಾ ಟ್ರೇಲರ್:

ಈಗಾಗಲೇ ‘ಕಿಂಗ್ಡಮ್’ ಸಿನಿಮಾದ ಬುಕಿಂಗ್ ಶುರು ಆಗಿದೆ. ಬುಕ್ ಮೈ ಶೋನಲ್ಲಿ ಬುಕಿಂಗ್ ಆರಂಭ ಆಗುತ್ತಿದ್ದಂತೆಯೇ ಟಿಕೆಟ್​ಗಳು ಸೋಲ್ಡ್ ಔಟ್ ಆಗಲು ಆರಂಭಿಸಿವೆ. ಬುಕಿಂಗ್ ಶುರುವಾದ ಕೆಲವೇ ಗಂಟೆಗಳಲ್ಲಿ ‘ಬುಕ್ ಮೈ ಶೋ’ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ‘ಕಿಂಗ್ಡಮ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಇದೇ ಸಾಕ್ಷಿ.

ಇದನ್ನೂ ಓದಿ: ಕಿಂಗ್ಡಮ್ ಟ್ರೈಲರ್: ನಮ್ಮನ್ಯಾರು ತಡೆಯೋರು ಎಂದ ವಿಜಯ್ ದೇವರಕೊಂಡ

‘ಕಿಂಗ್ಡಮ್’ ಸಿನಿಮಾದ ತೆರೆಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಸಂಗೀತ ನೀಡಿದ್ದಾರೆ. ಗಿರೀಶ್ ಗಂಗಾಧರನ್, ಜೋಮನ್ ಟಿ. ಜಾನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ನವೀನ್ ನೂಲಿ ಅವರ ಸಂಕಲನ ಈ ಸಿನಿಮಾಗಿದೆ. ವಿಜಯ್ ದೇವರಕೊಂಡ ಅವರಿಗೆ ಜೋಡಿಯಾಗಿ ಭಾಗ್ಯಶ್ರೀ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:44 pm, Sun, 27 July 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು