AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ನಟರಿಗಿಂತ ದೇವರಕೊಂಡ ಬಗ್ಗೆ ಫ್ಯಾನ್ಸ್​ಗೆ ಹೆಚ್ಚು ಕ್ರೇಜ್​; ‘ಲೈಗರ್’ ಇವೆಂಟ್​ನಲ್ಲಿ ನಡೆಯಿತು ಅಚ್ಚರಿಯ ಘಟನೆ

Vijay Deverakonda: ‘ಲೈಗರ್’ ಚಿತ್ರದ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ವಿಜಯ್​ ದೇವರಕೊಂಡ ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ಹೆಚ್ಚಿದೆ.

ಬೇರೆ ನಟರಿಗಿಂತ ದೇವರಕೊಂಡ ಬಗ್ಗೆ ಫ್ಯಾನ್ಸ್​ಗೆ ಹೆಚ್ಚು ಕ್ರೇಜ್​; ‘ಲೈಗರ್’ ಇವೆಂಟ್​ನಲ್ಲಿ ನಡೆಯಿತು ಅಚ್ಚರಿಯ ಘಟನೆ
ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ
TV9 Web
| Edited By: |

Updated on:Aug 01, 2022 | 1:37 PM

Share

ನಟ ವಿಜಯ್​ ದೇವರಕೊಂಡ (Vijay Devarakonda) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರು ನಟಿಸಿರುವ ‘ಲೈಗರ್​’ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರದ ಮೂಲಕ ಅವರು ನೇರವಾಗಿ ಬಾಲಿವುಡ್​ಗೆ ಎಂಟ್ರಿ ಪಡೆಯುತ್ತಿದ್ದಾರೆ. ಈಗಾಗಲೇ ‘ಲೈಗರ್​’ ಬಗ್ಗೆ ಭಾರಿ ಹೈಪ್​ ಸೃಷ್ಟಿ ಆಗಿದೆ. ಉತ್ತರ ಭಾರತದಲ್ಲೂ ವಿಜಯ್​ ದೇವರಕೊಂಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಿನಿಮಾಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟು ನೋಡುತ್ತಾರೆ. ಇತ್ತೀಚೆಗೆ ‘ಲೈಗರ್​’ ಸಿನಿಮಾ (Liger Movie) ತಂಡದವರು ಮುಂಬೈನ ಅಭಿಮಾನಿಗಳನ್ನು ಭೇಟಿಯಾದರು. ಈ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ನಿರೂಪಕ ನಿತಿನ್​ ಕಕ್ಕರ್​ ಅವರು ವಿವರಿಸಿದ್ದಾರೆ. ಟಾಲಿವುಡ್​ನ (Tollywood) ಬೇರೆ ಹೀರೋಗಳಿಗೆ ಹೋಲಿಸಿದರೆ ವಿಜಯ್​ ದೇವರಕೊಂಡ ಬಗ್ಗೆ ಕ್ರೇಜ್​ ಹೇಗಿದೆ ಎಂಬುದನ್ನು ನಿತಿನ್​ ವಿವರಿಸಿ​ದಾರೆ.

ನವಿ ಮುಂಬೈನಲ್ಲಿ ‘ಲೈಗರ್​’ ಸಿನಿಮಾದ ಫ್ಯಾನ್​ ಮೀಟ್​ ನಡೆಯಿತು. ಅದನ್ನು ನಿತಿನ್​ ಕಕ್ಕರ್​ ನಡೆಸಿಕೊಟ್ಟರು. ಆ ವೇಳೆ ಅಭಿಮಾನಿಗಳು ತೋರಿದ ಪ್ರೀತಿಯ ಬಗ್ಗೆ ನಿತಿನ್​ ಮಾಹಿತಿ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಕುರಿತು ಒಂದು ವಿಡಿಯೋ ಪೋಸ್ಟ್​ ಮಾಡಿದ್ದಾರೆ. ವಿಜಯ್​ ದೇವರಕೊಂಡ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
‘ಇದು ಕ್ರಾಸ್ ಬ್ರೀಡ್’; ಆ್ಯಕ್ಷನ್​ ಮೂಲಕ ‘ಲೈಗರ್’ ಟ್ರೇಲರ್​ನಲ್ಲಿ ಮಿಂಚಿದ ವಿಜಯ್ ದೇವರಕೊಂಡ
Image
ವಿಜಯ್ ದೇವರಕೊಂಡ ಜತೆ ಡೇಟ್ ಮಾಡಲು ಸಾರಾ-ಜಾನ್ವಿ ನಡುವೆ ಸ್ಪರ್ಧೆ
Image
‘ಅಕ್ಡಿ ಪಕ್ಡಿ’ ಸಾಂಗ್ ಮೂಲಕ ಗಮನ ಸೆಳೆದ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ
Image
Vijay Devarakonda: ಹುಡುಗಿ ಬೆನ್ನಲ್ಲಿ ವಿಜಯ್​ ದೇವರಕೊಂಡ ಟ್ಯಾಟೂ; ನೆಚ್ಚಿನ ಹೀರೋ ಮುಂದೆ ಯುವತಿ ಆನಂದಭಾಷ್ಪ

‘ನಾನು ಈಗತಾನೇ ನವಿ ಮುಂಬೈನಲ್ಲಿ ಲೈಗರ್​ ಚಿತ್ರದ ಕಾರ್ಯಕ್ರಮ ನಡೆಸಿಕೊಟ್ಟು ಬಂದೆ. ಈ ವಿಚಾರವನ್ನು ನಾನು ನಿಮಗೆ ಹೇಳಲೇ ಬೇಕು. ವಿಜಯ್​ ದೇವರಕೊಂಡ ಅವರನ್ನು ಕಂಡು ಜನರು ಹುಚ್ಚೆದ್ದು ಕುಣಿದರು. ಈ ರೀತಿ ಆಗಿದ್ದನ್ನು ನಾನು ಈ ಮೊದಲು ನೋಡಿಯೇ ಇಲ್ಲ. ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಾಗಲೂ ಇಂಥ ಕ್ರೇಜ್​ ನೋಡಿರಲಿಲ್ಲ’ ಎಂದು ನಿತಿನ್​ ಕಕ್ಕರ್​ ಹೇಳಿದ್ದಾರೆ.

‘ಪ್ರಭಾಸ್​, ಅಲ್ಲು ಅರ್ಜುನ್​, ಜ್ಯೂ. ಎನ್​ಟಿಆರ್, ರಾಮ್​ ಚರಣ್​​ ಮುಂತಾದ ನಟರಿಗಾಗಿ ನಾನು ಕಾರ್ಯಕ್ರಮಗಳನ್ನು ನಿರೂಪಿಸಿದ್ದೇನೆ. ಆದರೆ ವಿಜಯ್​ ದೇವರಕೊಂಡ ಅವರ ಬಗ್ಗೆ ಜನರು ಇಟ್ಟುಕೊಂಡಿರುವ ಕ್ರೇಜ್​ ಬೇರೆ ಯಾವುದೇ ನಟರಿಗೂ ಇಲ್ಲ. ಎಲ್ಲ ಅಭಿಮಾನಿಗಳಿಗೂ ಈ ಕಾರ್ಯಕ್ರಮ ನೋಡುವ ಅವಕಾಶ ಸಿಕ್ಕಿತ್ತು. ಇನ್ನೇನು ವಿಜಯ್​ ದೇವರಕೊಂಡ ಅವರು ವೇದಿಕೆಯಲ್ಲಿ ಒಂದು ಪರ್ಫಾರ್ಮೆನ್ಸ್​ ನೀಡುವವರಿದ್ದರು. ಆದರೆ ಜನರು ವೇದಿಕೆಗೆ ನುಗ್ಗಲು ಶುರುಮಾಡಿದರು. ಹಾಗಾಗಿ ನಾವು ಕಾರ್ಯಕ್ರಮವನ್ನು ಅರ್ಧದಲ್ಲೇ ನಿಲ್ಲಿಸಬೇಕಾಯಿತು’ ಎಂದು ನಿತಿನ್​ ಕಕ್ಕರ್​ ಹೇಳಿದ್ದಾರೆ.

Published On - 1:28 pm, Mon, 1 August 22

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ