ಪುಂಡಾಟ ಮೆರೆದ ವಿಜಯ್ ಅಭಿಮಾನಿಗಳು, ‘ಲಿಯೋ’ ಟ್ರೈಲರ್ ಬಿಡುಗಡೆ ವೇಳೆ ಚಿತ್ರಮಂದಿರದಲ್ಲಿ ದಾಂಧಲೆ

Vijay Fans: ವಿಜಯ್ ನಟನೆಯ 'ಲಿಯೋ' ಸಿನಿಮಾದ ಟ್ರೈಲರ್ ಇಂದು (ಅಕ್ಟೋಬರ್ 05) ಬಿಡುಗಡೆ ಆಗಿದ್ದು, ಟ್ರೈಲರ್ ಸ್ಕ್ರೀನಿಂಗ್ ವೇಳೆ ವಿಜಯ್ ಅಭಿಮಾನಿಗಳು ಪುಂಡಾಟ ನಡೆಸಿ ಚಿತ್ರಮಂದಿರದ ಸೀಟುಗಳನ್ನು ಧ್ವಂಸ ಮಾಡಿದ್ದಾರೆ.

ಪುಂಡಾಟ ಮೆರೆದ ವಿಜಯ್ ಅಭಿಮಾನಿಗಳು, 'ಲಿಯೋ' ಟ್ರೈಲರ್ ಬಿಡುಗಡೆ ವೇಳೆ ಚಿತ್ರಮಂದಿರದಲ್ಲಿ ದಾಂಧಲೆ
ಲಿಯೋ
Follow us
|

Updated on:Oct 06, 2023 | 2:39 PM

ತಮಿಳಿನ ಸ್ಟಾರ್ ನಟ ವಿಜಯ್​ಗೆ (Vijay) ಭಾರಿ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅದರಲ್ಲಿಯೂ ವಿಜಯ್​ರ ಅಭಿಮಾನಿಗಳು ತುಸು ವೈಯಲೆಂಟ್ ಪ್ರವೃತ್ತಿಯವರು ಎಂದು ಅಪಖ್ಯಾತಿಗೆ ಸಹ ಒಳಗಾಗಿದ್ದಾರೆ. ಅವರ ಅಪಖ್ಯಾತಿಯಂತೆಯೇ ಇದೀಗ ವಿಜಯ್​ ಅಭಿಮಾನಿಗಳು ನಡೆದುಕೊಂಡಿದ್ದು, ತಮ್ಮ ನೆಚ್ಚಿನ ನಟನ ಸಿನಿಮಾದ ಟ್ರೈಲರ್ ಬಿಡುಗಡೆ ವೇಳೆ ಚಿತ್ರಮಂದಿರದಲ್ಲಿ ದಾಂಧಲೆ ನಡೆಸಿ ಸೀಟುಗಳನ್ನೆಲ್ಲ ಒಡೆದುಹಾಕಿ ಚಿತ್ರಮಂದಿರಕ್ಕೆ ಹಾನಿ ಮಾಡಿದ್ದಾರೆ.

ಇಂದು (ಅಕ್ಟೋಬರ್ 05) ಸಂಜೆ ವಿಜಯ್ ನಟನೆಯ ಹೊಸ ಸಿನಿಮಾ ‘ಲಿಯೋ’ನ ಟ್ರೈಲರ್ ಬಿಡುಗಡೆ ಆಯ್ತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಮಾಡಲು ಚೆನ್ನೈ ಪೊಲೀಸರು ಅವಕಾಶ ನೀಡದ ಕಾರಣ ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾದ ಟ್ರೈಲರ್ ಅನ್ನು ತೋರಿಸಲಾಯ್ತು. ಈ ವೇಳೆ ಚಿತ್ರಮಂದಿರದಲ್ಲಿ ವಿಜಯ್ ಅಭಿಮಾನಿಗಳು ದಾಂಧಲೆ ನಡೆಸಿರುವ ಬಗ್ಗೆ ಅಲ್ಲಲ್ಲಿ ವರದಿಗಳಾಗಿವೆ.

ಚೆನ್ನೈನ ರೋಹಿಣಿ ಹೆಸರಿನ ಚಿತ್ರಮಂದಿರದಲ್ಲಿ ‘ಲಿಯೋ’ ಸಿನಿಮಾದ ಟ್ರೈಲರ್ ಅನ್ನು ಪ್ರದರ್ಶಿಸಲಾಯ್ತು. ಟ್ರೈಲರ್ ಅನ್ನು ನೋಡಿ ಎಂಜಾಯ್ ಮಾಡಿದ ವಿಜಯ್ ಅಭಿಮಾನಿಗಳು ಒಮ್ಮೆಲೆ ಕೂಗಾಟ-ಕಿರುಚಾಟ ಆರಂಭಿಸಿದ್ದಲ್ಲದೆ, ರೊಚ್ಚಿಗೆದ್ದು ಚಿತ್ರಮಂದಿರದ ಕುರ್ಚಿಗಳನ್ನು ಮುರಿದು ಹಾಕಿದ್ದಾರೆ. ವಿಜಯ್​ ಅಭಿಮಾನಿಗಳ ಹುಚ್ಚಾಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿಜಯ್ ಅಭಿಮಾನಿಗಳಿಗೆ ತಪರಾಕಿ ಹಾಕುತ್ತಿದ್ದಾರೆ.

ಇದನ್ನೂ ಓದಿ:Leo Trailer: ಐದೇ ನಿಮಿಷದಲ್ಲಿ ಮಿಲಿಯನ್​ ಬಾರಿ ವೀಕ್ಷಣೆ ಕಂಡ ‘ಲಿಯೋ’ ಟ್ರೇಲರ್​

‘ಲಿಯೋ’ ಸಿನಿಮಾದ ಟ್ರೈಲರ್ ಇಂದಷ್ಟೆ ಬಿಡುಗಡೆ ಆಗಿದ್ದು, ಸಿನಿಮಾವನ್ನು ಬಹುತೇಕ ಕಾಶ್ಮೀರದಲ್ಲಿಯೇ ಚಿತ್ರೀಕರಿಸಲಾಗಿದೆ. ಸಿನಿಮಾದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳಿದ್ದು, ವಿಜಯ್ ಅಭಿಮಾನಿಗಳು ಹುಚ್ಚೆದ್ದು ಕುಣಿಯಲು ಬೇಕಾದ ಅಂಶಗಳನ್ನೆಲ್ಲ ನಿರ್ದೇಶಕ ಲೋಕೇಶ್ ಕನಗರಾಜ್ ‘ಲಿಯೋ’ ಮೂಲಕ ಕೊಡುತ್ತಿದ್ದಾರೆಂಬುದನ್ನು ಟ್ರೈಲರ್ ಸಾರಿ ಹೇಳುತ್ತಿದೆ. ‘ಲಿಯೋ’ ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆಯೇ ಎಂಬ ಅನುಮಾನವನ್ನೂ ಸಹ ಟ್ರೈಲರ್ ಹುಟ್ಟಿಸುತ್ತಿದೆ.

‘ಲಿಯೋ’ ಸಿನಿಮಾದಲ್ಲಿ ವಿಜಯ್ ಜೊತೆಗೆ ತ್ರಿಷಾ ಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ದಶಕದ ಬಳಿಕ ಈ ಜೋಡಿ ಮತ್ತೆ ಬೆಳ್ಳಿ ತೆರೆ ಮೇಲೆ ಒಂದಾಗಿದೆ. ಬಾಲಿವುಡ್​ ನಟ ಸಂಜಯ್ ದತ್, ಅರ್ಜುನ್ ಸರ್ಜಾ ಸಹ ಸಿನಿಮಾದಲ್ಲಿದ್ದಾರೆ. ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್​ ರವಿಚಂದ್ರನ್ ಸಂಗೀತ ಒದಗಿಸಿದ್ದಾರೆ. ಸಿನಿಮಾವು ಅಕ್ಟೋಬರ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Thu, 5 October 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ