Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಸ್ಪೆನ್ಸ್ ಥ್ರಿಲ್ಲರ್​​ನೊಂದಿಗೆ ಬಂದ ವಿಜಯ್ ರಾಘವೇಂದ್ರ; 136 ಜನರ ಮಿಸ್ಸಿಂಗ್ ಕಥೆ ಹೇಳಲಿದೆ ‘ಜೋಗ್ 101’

‘ಜೋಗ್ 101’ ಟ್ರೇಲರ್ ನೋಡಿದವರಿಗೆ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಅನ್ನೋದು ಗೊತ್ತಾಗುತ್ತದೆ. ಈ ಸಿನಿಮಾ ‘ಸೆವೆನ್ ಸ್ಟಾರ್ ಪಿಕ್ಚರ್ಸ್’ ಮೂಲಕ ರಾಘು ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.  

ಸಸ್ಪೆನ್ಸ್ ಥ್ರಿಲ್ಲರ್​​ನೊಂದಿಗೆ ಬಂದ ವಿಜಯ್ ರಾಘವೇಂದ್ರ; 136 ಜನರ ಮಿಸ್ಸಿಂಗ್ ಕಥೆ ಹೇಳಲಿದೆ ‘ಜೋಗ್ 101’
ವಿಜಯ್ ರಾಘವೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on: Mar 04, 2024 | 8:59 AM

ವಿಜಯ್ ರಾಘವೇಂದ್ರ (Vijay Raghavendra) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈ ಪೈಕಿ ಹಲವು ಸಸ್ಪೆನ್ಸ್ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಅವರ ನಟನೆಯ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಜೋಗ್ 101’ ರಿಲೀಸ್​ಗೆ ರೆಡಿ ಇದೆ. ಮಾರ್ಚ್ 7ರಂದು ಬಿಡುಗಡೆ ಆಗಲಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ವಿಶ್ವ ವಿಖ್ಯಾತ ಜಲಪಾತ ಇರುವ ಜೋಗ್​ನಲ್ಲಿ ನಡೆಯುವ ಕಥೆ ಇದಾಗಿದೆ.

‘ಜೋಗ್ 101’ ಚಿತ್ರವನ್ನು ‘ಸೆವೆನ್ ಸ್ಟಾರ್ ಪಿಕ್ಚರ್ಸ್’ ಮೂಲಕ ರಾಘು ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಮಾರ್ಚ್ 7ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಟ್ರೇಲರ್ ರಿಲೀಸ್ ಮಾಡಲಾಗಿದೆ.

‘ಜೋಗ್ 101’ ಟ್ರೇಲರ್ ನೋಡಿದವರಿಗೆ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಅನ್ನೋದು ಗೊತ್ತಾಗುತ್ತದೆ. ವಿಕ್ರಮ್ (ವಿಜಯ್ ರಾಘವೇಂದ್ರ) ಹವ್ಯಾಸಿ ಫೋಟೋಗ್ರಾಫರ್. ಅವರು ಜೋಗ್​ಗೆ ಬರುತ್ತಾರೆ. ‘ಈ ಪೋಲಿಸ್​ ಸ್ಟೇಷನ್​ ಲಿಮಿಟ್​ನಲ್ಲಿ 131 ಜನ ಮಿಸ್ಸಿಂಗ್. ಆತ್ಮಹತ್ಯೆ ಮಾಡಿಕೊಂಡ 31 ಜನರ ಬಾಡಿ ಸಿಕ್ಕಿದೆ. ಉಳಿದವರು ಇನ್ನೂ ಮಿಸ್ಸಿಂಗ್’ ಎಂದು ವಿಕ್ರಮ್ ಹೇಳುತ್ತಾರೆ. ಜೊತೆಗೆ ಅವರು ಜೋಗ್​ ಬೆಂದ ಉದ್ದೇಶವ್ನೂ ರಿವೀಲ್ ಮಾಡುತ್ತಾರೆ. ಇದಿಷ್ಟು ವಿಚಾರ ಟ್ರೇಲರ್​ನಲ್ಲಿದೆ.

ಈ ಸಿನಿಮಾದಲ್ಲು ಸಸ್ಪೆನ್ಸ್, ಲವ್, ಕಾಮಿಡಿ ಸೇರಿ ಎಲ್ಲಾ ಅಂಶಗಳು ಇವೆಯಂತೆ. ಟ್ರೇಲರ್​ನಲ್ಲಿ ಅವಿನಾಶ್ ಆರ್ ಬಾಸೂತ್ಕರ್ ಸಂಗೀತ ಗಮನ ಸೆಳೆಯುತ್ತಿದೆ. ‘ನಿರ್ಮಾಪಕರ ಹೆಸರು ರಾಘವೇಂದ್ರ, ನಿರ್ದೇಶಕರ ಹೆಸರು ವಿಜಯ್. ಇವರ ಹೆಸರು ಸೇರಿಸಿದಾಗ ನನ್ನ ಹೆಸರು’ ಎಂದರು ನಟ ವಿಜಯ್ ರಾಘವೇಂದ್ರ.

ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ವಿಜಯ್ ರಾಘವೇಂದ್ರ ಸಿನಿಮಾ ‘ಕೇಸ್‌ ಆಫ್ ಕೊಂಡಾಣ’ ರಿಲೀಸ್; ವಿಶೇಷತೆ ಏನು?

ಈ ಚಿತ್ರಕ್ಕೆ ತೇಜಸ್ವಿನಿ ನಾಯಕಿ. ಸುನೀತ್ ಹಲಗೇರಿ ಛಾಯಾಗ್ರಾಹಣ, ಕಲೈ ನೃತ್ಯ ನಿರ್ದೇಶನ ಸಿನಿಮಾಗೆ ಇದೆ. ಮೋಹನ್ ರಂಗಕಹಳೆ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ಈ ಚಿತ್ರಕ್ಕಿದೆ. ಕಡ್ಡಿಪುಡಿ ಚಂದ್ರು, ಗೋವಿಂದೇ ಗೌಡ, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಪ್ರಸನ್ನ, ಶಶಿಧರ್, ಸುಂದರಶ್ರೀ, ಹರ್ಷಿತಾ ಗೌಡ ‘ಜೋಗ್ 101’ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್