AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್
ವಿಜಯ್​ ಸೇತುಪತಿ ಹಲ್ಲೆ ಮಾಡಿದ ದೃಶ್ಯ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 03, 2021 | 8:42 PM

Share

ನಟ ವಿಜಯ್​ ಸೇತುಪತಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್​ ಅವರು ಬೆಂಗಳೂರಿಗೆ ಆಗಮಿಸುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿ ಆಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿತ್ತು. ಆದರೆ, ಅವರು ಪುನೀತ್​ ಸಮಾಧಿಗೆ ನಮನ ಸಲ್ಲಿಸಲು ಬಂದಿದ್ದರು ಎಂಬುದು ತಿಳಿದು ಬಂದಿದೆ..  ತಮಿಳಿನ ‘ಮಾಸ್ಟರ್’ ಸಿನಿಮಾದ ಶೂಟಿಂಗ್​ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್​ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್​ ಸೇತುಪತಿ ಈ ಮೊದಲು ಮಾತನಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

‘ಮಗಳೆಂದು ಕಲ್ಪಿಸಿಕೊಂಡವಳ ಜೊತೆ ಅಂಥ ಕೆಲಸ ಮಾಡಲ್ಲ’; ಕೃತಿ ಶೆಟ್ಟಿ ಬಗ್ಗೆ ವಿಜಯ್​ ಸೇತುಪತಿ ಖಡಕ್​ ನಿರ್ಧಾರ

Published On - 7:42 pm, Wed, 3 November 21

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ