AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್
ವಿಜಯ್​ ಸೇತುಪತಿ ಹಲ್ಲೆ ಮಾಡಿದ ದೃಶ್ಯ
TV9 Web
| Edited By: |

Updated on:Nov 03, 2021 | 8:42 PM

Share

ನಟ ವಿಜಯ್​ ಸೇತುಪತಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್​ ಅವರು ಬೆಂಗಳೂರಿಗೆ ಆಗಮಿಸುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿ ಆಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿತ್ತು. ಆದರೆ, ಅವರು ಪುನೀತ್​ ಸಮಾಧಿಗೆ ನಮನ ಸಲ್ಲಿಸಲು ಬಂದಿದ್ದರು ಎಂಬುದು ತಿಳಿದು ಬಂದಿದೆ..  ತಮಿಳಿನ ‘ಮಾಸ್ಟರ್’ ಸಿನಿಮಾದ ಶೂಟಿಂಗ್​ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್​ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್​ ಸೇತುಪತಿ ಈ ಮೊದಲು ಮಾತನಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

‘ಮಗಳೆಂದು ಕಲ್ಪಿಸಿಕೊಂಡವಳ ಜೊತೆ ಅಂಥ ಕೆಲಸ ಮಾಡಲ್ಲ’; ಕೃತಿ ಶೆಟ್ಟಿ ಬಗ್ಗೆ ವಿಜಯ್​ ಸೇತುಪತಿ ಖಡಕ್​ ನಿರ್ಧಾರ

Published On - 7:42 pm, Wed, 3 November 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್