AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್
ವಿಜಯ್​ ಸೇತುಪತಿ ಹಲ್ಲೆ ಮಾಡಿದ ದೃಶ್ಯ
TV9 Web
| Edited By: |

Updated on:Nov 03, 2021 | 8:42 PM

Share

ನಟ ವಿಜಯ್​ ಸೇತುಪತಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಮಿಳು ಚಿತ್ರರಂಗದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್​ ಅವರು ಬೆಂಗಳೂರಿಗೆ ಆಗಮಿಸುವ ವೇಳೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಬಗ್ಗೆ ವರದಿ ಆಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿತ್ತು. ಆದರೆ, ಅವರು ಪುನೀತ್​ ಸಮಾಧಿಗೆ ನಮನ ಸಲ್ಲಿಸಲು ಬಂದಿದ್ದರು ಎಂಬುದು ತಿಳಿದು ಬಂದಿದೆ..  ತಮಿಳಿನ ‘ಮಾಸ್ಟರ್’ ಸಿನಿಮಾದ ಶೂಟಿಂಗ್​ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್​ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್​ ಸೇತುಪತಿ ಈ ಮೊದಲು ಮಾತನಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ಎಸ್​ಆರ್​ವಿ ಥಿಯೇಟರ್​ನಲ್ಲಿ ಕೊನೆಯದಾಗಿ ಅಟೆಂಡ್​ ಮಾಡಿದ್ದ ಪುನೀತ್​; ಇಲ್ಲಿದೆ ಸಿಸಿಟಿವಿ ವಿಡಿಯೋ

‘ಮಗಳೆಂದು ಕಲ್ಪಿಸಿಕೊಂಡವಳ ಜೊತೆ ಅಂಥ ಕೆಲಸ ಮಾಡಲ್ಲ’; ಕೃತಿ ಶೆಟ್ಟಿ ಬಗ್ಗೆ ವಿಜಯ್​ ಸೇತುಪತಿ ಖಡಕ್​ ನಿರ್ಧಾರ

Published On - 7:42 pm, Wed, 3 November 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ