AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪ: ಬಿಗ್​​ಬಾಸ್ ವೇದಿಕೆ ಮೇಲೆ ಸ್ಪಷ್ಟನೆ

ಕಳೆದ ವಾರ ಬಿಗ್​​ಬಾಸ್ ವೇದಿಕೆಯ ಮೇಲೆ ವಿಜಯ್ ಸೇತುಪತಿ ಆಡಿದ್ದ ಕೆಲ ಮಾತುಗಳನ್ನು ಸಿಎಂ ವಿಜಯ್ ಅವರ ವಿರುದ್ಧ ಆಡಲಾದ ಮಾತುಗಳು ಎಂದು ಬಿಂಬಿಸಲಾಗಿತ್ತು. ‘ನಾಯಕತ್ವ ಎಂದರೇನು ಎಂದು ತಿಳಿಯದೆ, ನಾಯಕತ್ವ ಎಂದರೇನು ಎಂದು ಅರ್ಥಮಾಡಿಕೊಳ್ಳದೆ ಭರವಸೆಗಳನ್ನು ನೀಡಿ, ನಂತರ ಸಮಸ್ಯೆಗಳು ಮತ್ತು ಜವಾಬ್ದಾರಿಗಳು ಬಂದಾಗ ಎದುರಾಳಿಯನ್ನು ದೂಷಿಸಿ ಓಡಿಹೋಗುವುದು ನಾಯಕನ ಗುಣವಲ್ಲ. ಅದು ವಂಚನೆ’ ಎಂದು ಸೇತುಪತಿ ಹೇಳಿದ್ದರು. ಇದೀಗ ವಿಜಯ್ ಸೇತುಪತಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪ: ಬಿಗ್​​ಬಾಸ್ ವೇದಿಕೆ ಮೇಲೆ ಸ್ಪಷ್ಟನೆ
Cm Vijay Vijay Sethupathi
ಮಂಜುನಾಥ ಸಿ.
|

Updated on:Sep 19, 2026 | 7:00 PM

Share

ಮುಖ್ಯಾಂಶಗಳು

  • ಸಿಎಂ ವಿಜಯ್ ವಿರುದ್ಧ ವಿಜಯ್ ಸೇತುಪತಿ ಟೀಕೆ?
  • ಬಿಗ್​ಬಾಸ್ ವೇದಿಕೆ ಮೇಲೆ ಆಡಿದ್ದ ಮಾತುಗಳು ವೈರಲ್
  • ಇದೀಗ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

ವಿಜಯ್ ಸೇತುಪತಿ, ಬಿಗ್​​ಬಾಸ್ ತಮಿಳು ನಿರೂಪಣೆ ಮಾಡುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಅವರೇ ಬಿಗ್​​ಬಾಸ್​​ನ ನಿರೂಪಕರಾಗಿದ್ದು ಅವರ ನಿರೂಪಣೆ ಪ್ರೇಕ್ಷಕರಿಗೆ ಸಹ ಹಿಡಿಸಿದೆ. ತಮಿಳು ಬಿಗ್​​ಬಾಸ್​​ನ 10ನೇ ಸೀಸನ್ ಚಾಲ್ತಿಯಲ್ಲಿದ್ದು, ಈ ಬಾರಿ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಬಿಗ್​​ಬಾಸ್ ಸೀಸನ್ ಒಟ್ಟಿಗೆ ಶುರುವಾಗಿದೆ. ಕಳೆದ ವಾರ ಬಿಗ್​ಬಾಸ್ ನಿರೂಪಣೆ ಮಾಡುವಾಗ ವಿಜಯ್ ಸೇತುಪತಿ ಅವರು ಹೇಳಿದ್ದ ಮಾತುಗಳು ವಿವಾದಕ್ಕೆ ಕಾರಣವಾಗಿದ್ದವು, ಆದರೆ ಇದೀಗ ಆ ಬಗ್ಗೆ ವಿಜಯ್ ಸೇತುಪತಿ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಾರ ಮನೆಯ ಸದಸ್ಯರ ಬಗ್ಗೆ ಮಾತನಾಡಿದ್ದ ವಿಜಯ್ ಸೇತುಪತಿ, ‘ನಾಯಕತ್ವ ಎಂದರೇನು ಎಂದು ತಿಳಿಯದೆ, ನಾಯಕತ್ವ ಎಂದರೇನು ಎಂದು ಅರ್ಥಮಾಡಿಕೊಳ್ಳದೆ ಭರವಸೆಗಳನ್ನು ನೀಡಿ, ನಂತರ ಸಮಸ್ಯೆಗಳು ಮತ್ತು ಜವಾಬ್ದಾರಿಗಳು ಬಂದಾಗ ಎದುರಾಳಿಯನ್ನು ದೂಷಿಸಿ ಓಡಿಹೋಗುವುದು ನಾಯಕನ ಗುಣವಲ್ಲ. ಅದು ವಂಚನೆ’ ಎಂದು ವಿಜಯ್ ಸೇತುಪತಿ ಕಳೆದ ವಾರ ಬಿಗ್​​ಬಾಸ್ ವೇದಿಕೆ ಮೇಲೆ ಹೇಳಿದ್ದರು. ವಿಜಯ್ ಸೇತುಪತಿ ಅವರ ಈ ಹೇಳಿಕೆಯನ್ನು ಎಲ್ಲರೂ ಸಿಎಂ ವಿಜಯ್​​ಗೆ ಲಿಂಕ್ ಮಾಡಿದ್ದರು.

ಸಿಎಂ ವಿಜಯ್ ಕುರಿತಾಗಿ ವಿಜಯ್ ಸೇತುಪತಿ ಅವರು ಪರೋಕ್ಷವಾಗಿ ಈ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿತ್ತು. ವಿಜಯ್ ಸೇತುಪತಿ ಅವರ ಆ ಹೇಳಿಕೆ ಬಳಿಕ ಸಿಎಂ ವಿಜಯ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟ್ರೋಲಿಂಗ್ ನಡೆಸಿದ್ದರು, ಕೆಲ ಸಿನಿಮಾ ಸೆಲೆಬ್ರಿಟಿಗಳು ಸಹ ವಿಜಯ್ ಸೇತುಪತಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ

ಆದರೆ ಈ ವಾರ ವಿಜಯ್ ಸೇತುಪತಿ ಅವರು ತಮ್ಮ ಹಿಂದಿನ ಹೇಳಿಕೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ‘ಈ ವೇದಿಕೆಯ ಮೇಲೆ (ಬಿಗ್​​ಬಾಸ್ ವೇದಿಕೆಯ ಮೇಲೆ) ಆಡುವ ಪ್ರತಿಯೊಂದು ಮಾತು, ಮಾಡುವ ಟೀಕೆ, ವಿಮರ್ಶೆಗಳೆಲ್ಲವೂ ಕೇವಲ ಬಿಗ್​​ಬಾಸ್ ಸ್ಪರ್ಧಿಗಳ ಕುರಿತಾಗಿ ಆಗಿರುತ್ತದೆಯೇ ಹೊರತು, ಹೊರಗಿನವರ ಬಗ್ಗೆ ಆಗಿರುವುದಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಇದನ್ನು ನಾನು ಹೇಳಿಯೇ ತಿಳಿಯಬೇಕು ಎಂದಿಲ್ಲ, ಜನರೇ ಅರ್ಥ ಮಾಡಿಕೊಳ್ಳುತ್ತಾರೆ ಎಂದೆಣೆಸಿದ್ದೆ ಆದರೆ, ಹೇಳುವ ಪರಿಸ್ಥಿತಿ ಬಂದಿದೆ ಹಾಗಾಗಿ ಈಗ ಹೇಳುತ್ತಿದ್ದೇನೆ’ ಎಂದಿದ್ದಾರೆ ವಿಜಯ್ ಸೇತುಪತಿ.

ವಿಜಯ್ ಸೇತುಪತಿ ಅವರು, ಸಿಎಂ ವಿಜಯ್ ಕುರಿತಾಗಿ ಬಿಗ್​​ಬಾಸ್ ವೇದಿಕೆ ಮೇಲೆ ವಿಮರ್ಶೆ ಮಾಡಿದ್ದಾರೆ ಎಂಬ ಮಾತುಗಳು ಗಟ್ಟಿಯಾಗಿಯೇ ಕೇಳಿ ಬಂದಿದ್ದವು. ಕೆಲವರು ಈ ಬಗ್ಗೆ ವಿಜಯ್ ಸೇತುಪತಿ ಅವರನ್ನು ನಿಂದನೆ ಸಹ ಮಾಡಿದ್ದರು. ಆದರೆ ಈಗ ವಿಜಯ್ ಸೇತುಪತಿ ಸ್ಪಷ್ಟನೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Sat, 19 September 26

Follow Us
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!