AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ‘ಅಪ್ಪು’ ನಿರ್ದೇಶಕನಿಗೆ ವಿಜಯ್ ಅವಕಾಶ ಕೊಟ್ಟಿದ್ದೇಕೆ? ವಿವರಿಸಿದ ನಟ

ವಿಜಯ್ ಸೇತುಪತಿ ಅವರು ಪುರಿ ಜಗನ್ನಾಥ್ ಅವರೊಂದಿಗೆ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. 'ಲೈಗರ್' ಚಿತ್ರದ ವೈಫಲ್ಯದ ನಂತರ ಈ ನಿರ್ಧಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ, ವಿಜಯ್ ಅವರು ಕಥೆಯನ್ನು ಇಷ್ಟಪಟ್ಟಿದ್ದರಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ತಬು ಅವರೊಂದಿಗೆ ನಟಿಸುವ ಅವಕಾಶವೂ ಅವರಿಗೆ ಸಂತೋಷ ತಂದಿದೆ.

ಸೋತು ಸುಣ್ಣವಾದ ‘ಅಪ್ಪು’ ನಿರ್ದೇಶಕನಿಗೆ ವಿಜಯ್ ಅವಕಾಶ ಕೊಟ್ಟಿದ್ದೇಕೆ? ವಿವರಿಸಿದ ನಟ
ವಿಜಯ್-ಪುರಿ
ರಾಜೇಶ್ ದುಗ್ಗುಮನೆ
|

Updated on:Apr 16, 2025 | 7:04 AM

Share

ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ (Vijay Sethupathi) ಅವರು ಸಿನಿಮಾಗಳ ಆಯ್ಕೆಯಲ್ಲಿ ಸದಾ ಭಿನ್ನ. ಅವರು ಇತ್ತೀಚೆಗೆ ಫ್ಲಾಪ್ ಡೈರೆಕ್ಟರ್ ಪುರಿ ಜಗನ್ನಾಥ್ ಅವರಿಗೆ ಸಿನಿಮಾ ನಿರ್ದೇಶನ ಮಾಡಲು ಅವಕಾಶ ಕೊಟ್ಟಿದ್ದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಯಾರೂ ಅವಕಾಶ ಕೊಡದೇ ಇದ್ದಾಗ ವಿಜಯ್ ಅವರು ಪುರಿ ಜಗನ್ನಾಥ್ ಜೊತೆ ಸಿನಿಮಾ ಮಾಡಲು ಮುಂದೆ ಬಂದಿದ್ದು ಏಕೆ ಎಂಬ ಪ್ರಶ್ನೆ ಮೂಡಿತ್ತು. ಅಭಿಮಾನಿಗಳು ಕೂಡ ಈ ಬಗ್ಗೆ ಬೇಸರಗೊಂಡಿದ್ದರು. ಇವುಗಳಿಗೆ ವಿಜಯ್ ಸೇತುಪತಿ ಸ್ಪಷ್ಟನೆ ನೀಡಿದ್ದಾರೆ.

ಪುರಿ ಜಗನ್ನಾಥ್ ನಿರ್ದೇಶನದ ‘ಲೈಗರ್’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ಇದು ದೊಡ್ಡ ಸೋಲು. ಅಲ್ಲದೆ, ‘ಡಬಲ್ ಇಸ್ಮಾರ್ಟ್’ ಕೂಡ ಹಿಟ್ ಆಗಲಿಲ್ಲ. ಇದಕ್ಕಿನ ಮೊದಲಿನ ಸಿನಿಮಾಗಳು ಅಂಥ ಸದ್ದು ಮಾಡಲಿಲ್ಲ. ಈ ಕಾರಣಕ್ಕೆ ಎಲ್ಲ ಹೀರೋಗಳು ಅವರ ಜೊತೆ ಸಿನಿಮಾ ಮಾಡಲು ಹಿಂಜರಿಯುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರ ಕೈ ಹಿಡಿದಿದ್ದು ವಿಜಯ್ ಸೇತುಪತಿ.

ಈ ಬಗ್ಗೆ ಮಾತನಾಡಿರೋ ವಿಜಯ್, ‘ನಿರ್ದೇಶಕರ ಹಿಂದಿನ ಸಿನಿಮಾಗಳ ಫಲಿತಾಂಶ ಏನಾಗಿತ್ತು ಎಂಬುದನ್ನು ನಾನು ನೋಡುವುದಿಲ್ಲ. ನನಗೆ ಸ್ಟೋರಿ ಇಷ್ಟ ಆದರೆ ನಾನು ಸಿನಿಮಾ ಮಾಡುತ್ತೇನೆ. ಪುರಿ ಹೇಳಿದ ಕಥೆ ನನಗೆ ಮೆಚ್ಚುಗೆ ಆಯಿತು. ನಾನು ಈ ಮೊದಲು ಈ ರೀತಿಯ ಸಿನಿಮಾ ಮಾಡಿರಲಿಲ್ಲ. ನನಗೆ ಮಾಡಿದ್ದೇ ಮಾಡುವ ಬದಲು ಹೊಸ ಕಥೆ ಮಾಡೋದು ಇಷ್ಟ’ ಎಂದಿದ್ದಾರೆ.

ಇದನ್ನೂ ಓದಿ
Image
ಮಗನನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗಿ ಟ್ರೋಲ್ ಆದ ನತಾಶಾ
Image
‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

ತಬು ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಜೊತೆ ತೆರೆ ಹಂಚಿಕೊಳ್ಳುವ ಬಗ್ಗೆ ವಿಜಯ್ ಖುಷಿ ಆಗಿದ್ದಾರೆ. ‘ತಬು ಒಳ್ಳೆಯ ನಟಿ. ನಾನು ಅವರ ಜೊತೆ ಈ ಮೊದಲು ಕೆಲಸ ಮಾಡಿಲ್ಲ. ನನಗೆ ಅವರ ಜೊತೆ ಕೆಲಸ ಮಾಡೋಕೆ ಖುಷಿ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಅಪ್ಪು’ ನಿರ್ದೇಶಕ ಪುರಿ ಜಗನ್ನಾಥ್ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು

‘ಡಬಲ್ ಇಸ್ಮಾರ್ಟ್’ ಡಿಸಾಸ್ಟರ್ ಆದ ಬಳಿಕ ಪುರಿ ಅವರು ಅನೇಕ ಹೀರೋಗಳಿಗೆ ಕಥೆ ಹೇಳಿದ್ದು ಇದೆ. ಆದರೆ, ಯಾರೊಬ್ಬರೂ ಅವರ ಜೊತೆ ಸಿನಿಮಾ ಮಾಡುವ ಧೈರ್ಯ ತೋರಿಲ್ಲ. ಈಗ ವಿಜಯ್ ಜೊತೆ ಮಾಡಿದ ಅವರ ಸಿನಿಮಾ ಹಿಟ್ ಆದರೆ, ಎರಡನೇ ಇನ್ನಿಂಗ್ಸ್ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Wed, 16 April 25

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್