AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿಗಳನ್ನು ದಾನ ಮಾಡಿದ್ದಾರೆ. ಈ ಹಣವನ್ನು ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲು ಬಳಸಲಾಗುವುದು. ಅವರ ಈ ಉದಾರತೆಯು ಅಭಿಮಾನಿಗಳಲ್ಲಿ ಸಂತೋಷವನ್ನುಂಟುಮಾಡಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.  

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 23, 2025 | 10:53 AM

Share

ವಿಜಯ್ ಸೇತುಪತಿ ಅವರು ನಟನೆ ಮೂಲಕ ಗಮನ ಸೆಳೆದವರು. ಈಗ ಅವರು ಸ್ಟಾರ್ ಹೀರೋ ಆಗಿದ್ದಾರೆ. ವಿಲನ್ ಹಾಗೂ ಹೀರೋ ಪಾತ್ರಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಈಗ ಅವರು ಹಿಂದೆ ಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರು ಇಷ್ಟೊಂದು ಹಣ ಕೊಟ್ಟಿದ್ದು ಯಾರಿಗೆ ಎಂಬ ಬಗ್ಗೆ ಇಲ್ಲಿದೆ ವಿವರ.

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿ ಕೊಟ್ಟಿದ್ದಾರೆ. ಇದರ ಸದಸ್ಯರಿಗೆ ಮನೆಗಳ ನಿರ್ಮಾಣಕ್ಕೆ ಈ ಹಣ ಸಹಕಾರಿ ಆಗಲಿದೆ. ಕಷ್ಟಪಟ್ಟು ದುಡಿಯುವ ಕೆಲಸಗಾರರಿಗೆ ಮನೆ ನಿರ್ಮಾಣ ಆಗಲಿದೆ ಅನ್ನೋದು ವಿಶೇಷ. ಗೌರವಾರ್ಥವಾಗಿ ವಿಜಯ್ ಹೆಸರನ್ನು ಇಡಲಾಗುತ್ತದೆ.

ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ವಿಜಯ್ ಸೇತುಪತಿ 1.30 ಕೋಟಿ ರೂಪಾಯಿ ಹಣವನ್ನು ಯೂನಿಯನ್​ಗೆ ನೀಡಿದ್ದು, ಮನೆ ನಿರ್ಮಾಣ ಆಗಲಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ವಿಜಯ್ ಸೇತುಪತಿ ಅವರು 2024ರಲ್ಲಿ ಹಲವು ಸಿನಿಮಾಗಳು ರಿಲೀಸ್ ಕಂಡವು. ‘ಮೇರಿ ಕ್ರಿಸ್​ಮಸ್​’ ಸಿನಿಮಾ ಮೆಚ್ಚುಗೆ ಪಡೆಯಿತು. ಕತ್ರಿನಾ ಕೈಫ್​ ಜೊತೆ ಅವರು ತೆರೆ ಹಂಚಿಕೊಂಡರು. ಅವರ ನಟನೆಯ ‘ಮಹರಾಜ’ ಚಿತ್ರ ಸೂಪರ್ ಹಿಟ್ ಆಯಿತು. ‘ವಿಡುದಲೈ 2’ ಸಿನಿಮಾ ಕೂಡ ತೆರೆಗೆ ಬಂದಿದೆ. ಈ ಚಿತ್ರ ಅಂದುಕೊಂಡ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.

ಇದನ್ನೂ ಓದಿ: ಚೀನಾದಲ್ಲೂ ‘ಮಹಾರಾಜ’ ಸಿನಿಮಾಗೆ ಜನರು ಫಿದಾ; ವಿಜಯ್ ಸೇತುಪತಿ ಚಿತ್ರಕ್ಕೆ ಭಾರಿ ಕಲೆಕ್ಷನ್​

2025ರಲ್ಲಿ ವಿಜಯ್ ನಟನೆಯ ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ‘ಗಾಂಧಿ ಟಾಕ್ಸ್’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದು ಮೂಕಿ ಚಿತ್ರ ಅನ್ನೋದು ವಿಶೇಷ. ಈ ಚಿತ್ರದ ರಿಲೀಸ್ ದಿನಾಂಕ ಇನ್ನೂ ತೆರೆಗೆ ಬಂದಿಲ್ಲ. ‘ಏಸ್’, ‘ಟ್ರೇನ್’ ಚಿತ್ರಗಳು ಈ ವರ್ಷ ತೆರೆಗೆ ಬರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?