AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿಗಳನ್ನು ದಾನ ಮಾಡಿದ್ದಾರೆ. ಈ ಹಣವನ್ನು ಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಲು ಬಳಸಲಾಗುವುದು. ಅವರ ಈ ಉದಾರತೆಯು ಅಭಿಮಾನಿಗಳಲ್ಲಿ ಸಂತೋಷವನ್ನುಂಟುಮಾಡಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.  

ಹಿಂದೆಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ ವಿಜಯ್ ಸೇತುಪತಿ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 23, 2025 | 10:53 AM

Share

ವಿಜಯ್ ಸೇತುಪತಿ ಅವರು ನಟನೆ ಮೂಲಕ ಗಮನ ಸೆಳೆದವರು. ಈಗ ಅವರು ಸ್ಟಾರ್ ಹೀರೋ ಆಗಿದ್ದಾರೆ. ವಿಲನ್ ಹಾಗೂ ಹೀರೋ ಪಾತ್ರಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದಾರೆ. ಈಗ ಅವರು ಹಿಂದೆ ಮುಂದೆ ನೋಡದೇ ಒಂದು ಕೋಟಿ ರೂಪಾಯಿ ದಾನ ಮಾಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರು ಇಷ್ಟೊಂದು ಹಣ ಕೊಟ್ಟಿದ್ದು ಯಾರಿಗೆ ಎಂಬ ಬಗ್ಗೆ ಇಲ್ಲಿದೆ ವಿವರ.

ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಒಂದು ಕೋಟಿ ರೂಪಾಯಿ ಕೊಟ್ಟಿದ್ದಾರೆ. ಇದರ ಸದಸ್ಯರಿಗೆ ಮನೆಗಳ ನಿರ್ಮಾಣಕ್ಕೆ ಈ ಹಣ ಸಹಕಾರಿ ಆಗಲಿದೆ. ಕಷ್ಟಪಟ್ಟು ದುಡಿಯುವ ಕೆಲಸಗಾರರಿಗೆ ಮನೆ ನಿರ್ಮಾಣ ಆಗಲಿದೆ ಅನ್ನೋದು ವಿಶೇಷ. ಗೌರವಾರ್ಥವಾಗಿ ವಿಜಯ್ ಹೆಸರನ್ನು ಇಡಲಾಗುತ್ತದೆ.

ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ವಿಜಯ್ ಸೇತುಪತಿ 1.30 ಕೋಟಿ ರೂಪಾಯಿ ಹಣವನ್ನು ಯೂನಿಯನ್​ಗೆ ನೀಡಿದ್ದು, ಮನೆ ನಿರ್ಮಾಣ ಆಗಲಿದೆ. ಈ ಅಪಾರ್ಟ್​ಮೆಂಟ್​ಗೆ ವಿಜಯ್ ಸೇತುಪತಿ ಅವರ ಹೆಸರು ಇಡಲಾಗುತ್ತದೆ’ ಎಂದು ರಮೇಶ್ ಬಾಲಾ ಹೇಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ವಿಜಯ್ ಸೇತುಪತಿ ಅವರು 2024ರಲ್ಲಿ ಹಲವು ಸಿನಿಮಾಗಳು ರಿಲೀಸ್ ಕಂಡವು. ‘ಮೇರಿ ಕ್ರಿಸ್​ಮಸ್​’ ಸಿನಿಮಾ ಮೆಚ್ಚುಗೆ ಪಡೆಯಿತು. ಕತ್ರಿನಾ ಕೈಫ್​ ಜೊತೆ ಅವರು ತೆರೆ ಹಂಚಿಕೊಂಡರು. ಅವರ ನಟನೆಯ ‘ಮಹರಾಜ’ ಚಿತ್ರ ಸೂಪರ್ ಹಿಟ್ ಆಯಿತು. ‘ವಿಡುದಲೈ 2’ ಸಿನಿಮಾ ಕೂಡ ತೆರೆಗೆ ಬಂದಿದೆ. ಈ ಚಿತ್ರ ಅಂದುಕೊಂಡ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.

ಇದನ್ನೂ ಓದಿ: ಚೀನಾದಲ್ಲೂ ‘ಮಹಾರಾಜ’ ಸಿನಿಮಾಗೆ ಜನರು ಫಿದಾ; ವಿಜಯ್ ಸೇತುಪತಿ ಚಿತ್ರಕ್ಕೆ ಭಾರಿ ಕಲೆಕ್ಷನ್​

2025ರಲ್ಲಿ ವಿಜಯ್ ನಟನೆಯ ಹಲವು ಸಿನಿಮಾಗಳು ರಿಲೀಸ್ ಆಗಲಿವೆ. ‘ಗಾಂಧಿ ಟಾಕ್ಸ್’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದು ಮೂಕಿ ಚಿತ್ರ ಅನ್ನೋದು ವಿಶೇಷ. ಈ ಚಿತ್ರದ ರಿಲೀಸ್ ದಿನಾಂಕ ಇನ್ನೂ ತೆರೆಗೆ ಬಂದಿಲ್ಲ. ‘ಏಸ್’, ‘ಟ್ರೇನ್’ ಚಿತ್ರಗಳು ಈ ವರ್ಷ ತೆರೆಗೆ ಬರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್