AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್ ಬಸ್ಟರ್ ಹಿಟ್ ಕೊಟ್ಟ ನಿರ್ದೇಶಕನಿಗೆ ಐಶಾರಾಮಿ ಕಾರು ಕೊಟ್ಟ ವಿಜಯ್ ಸೇತುಪತಿ

Vijay Sethupathi: ವಿಜಯ್ ಸೇತುಪತಿ ನಟನೆಯ 50ನೇ ಸಿನಿಮಾ ‘ಮಹಾರಾಜ’ ನಿರ್ದೇಶಕನಿಗೆ ಭಾರಿ ದುಬಾರಿ ಹಾಗೂ ಐಶಾರಾಮಿ ಕಾರೊಂದನ್ನು ವಿಜಯ್ ಸೇತುಪತಿ ಉಡುಗೊರೆಯಾಗಿ ನೀಡಿದ್ದಾರೆ.

ಬ್ಲಾಕ್ ಬಸ್ಟರ್ ಹಿಟ್ ಕೊಟ್ಟ ನಿರ್ದೇಶಕನಿಗೆ ಐಶಾರಾಮಿ ಕಾರು ಕೊಟ್ಟ ವಿಜಯ್ ಸೇತುಪತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 17, 2024 | 2:25 PM

Share

ವಿಜಯ್ ಸೇತುಪತಿ ಭಾರತದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ನಾಯಕ, ವಿಲನ್, ಪೋಷಕ ಪಾತ್ರ, ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಎಲ್ಲ ರೀತಿಯ ಸಿನಿಮಾ, ಪಾತ್ರಗಳಲ್ಲಿ ನಟಿಸುವ ವಿಜಯ್ ಸೇತುಪತಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ಇತ್ತೀಚೆಗಷ್ಟೆ ವಿಜಯ್ ಸೇತುಪತಿ ತಮ್ಮ 50ನೇ ಸಿನಿಮಾದಲ್ಲಿ ನಟಿಸಿದರು. ಸಣ್ಣ ಬಜೆಟ್​ನ ಈ ಸಿನಿಮಾ ದೊಡ್ಡ ಹಿಟ್ ಆಗಿದ್ದು ಮಾತ್ರವೇ ಅಲ್ಲದೆ ವಿಜಯ್ ಸೇತುಪತಿಗೆ ಭಾರಿ ದೊಡ್ಡ ಲಾಭವನ್ನೂ ಮಾಡಿಕೊಟ್ಟಿತು. ವಿಶೇಷ ಏನೆಂದರೆ ಈ ಸಿನಿಮಾಕ್ಕೆ ಸೇತುಪತಿ ಬಂಡವಾಳವೂ ಹಾಕಿರಲಿಲ್ಲ ಆದರೂ ಭಾರಿ ಲಾಭವನ್ನೇ ಈ ಸಿನಿಮಾದಿಂದ ಮಾಡಿಕೊಂಡರು ಅದೇ ಕಾರಣಕ್ಕೆ ಸಿನಿಮಾದ ನಿರ್ದೇಶಕನಿಗೆ ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ವಿಜಯ್ ಸೇತುಪತಿ ‘ಮಹಾರಾಜ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಸಣ್ಣ ಬಜೆಟ್​ನ ಈ ಸಿನಿಮಾದಲ್ಲಿ ನಾಯಕನ ಪಾತ್ರದಲ್ಲಿ ವಿಜಯ್ ನಟಿಸಿದ್ದರು. ಸಿನಿಮಾ ನಿರ್ದೇಶನ ಮಾಡಿದ್ದು ನಿತಿಲನ್ ಸ್ವಾಮಿನಾಥನ್, ಮಗಳ ಮೇಲೆ ಅತ್ಯಾಚಾರ ಮಾಡಿದವನನ್ನು ಹುಡುಕುವ ತಂದೆಯ ಪಾತ್ರದಲ್ಲಿ ವಿಜಯ್ ನಟಿಸಿದ್ದರು. ಸಿನಿಮಾದ ವಿಲನ್ ಪಾತ್ರದಲ್ಲಿ ಹಿಂದಿಯ ಖ್ಯಾತ ನಿರ್ದೇಶನ ಅನುರಾಗ್ ಕಶ್ಯಪ್ ನಟಿಸಿದ್ದರು. ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು.

ಸಣ್ಣ ಬಜೆಟ್​ನ ಸಿನಿಮಾ ಆಗಿದ್ದರೂ ಸಹ ಚಿತ್ರಮಂದಿರದಲ್ಲಿಯೇ 100 ಕೋಟಿಗೂ ಹೆಚ್ಚು ಹಣ ಗಳಿಸಿತು. ನೆಟ್​ಫ್ಲಿಕ್ಸ್​, ಭಾರಿ ದೊಡ್ಡ ಮೊತ್ತ ನೀಡಿ ಸಿನಿಮಾವನ್ನು ಖರೀದಿ ಮಾಡಿತು. ನೆಟ್​ಫ್ಲಿಕ್ಸ್​ನಲ್ಲಿ ಅಂತೂ ಕೆಲವು ವಾರಗಳ ವರೆಗೆ ಈ ಸಿನಿಮಾ ಟಾಪ್​ನಲ್ಲಿತ್ತು. ಉತ್ತರ ಭಾರತದ ಜನರಂತೂ ಸಿನಿಮಾ ನೋಡಿ ದಂಗಾಗಿ ಹೋದರು. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಪ್ರಶಂಸೆಗಳ ಸುರಿಮಳೆಯೇ ಸುರಿಯಿತು.

ಇದನ್ನೂ ಓದಿ:ಕರಣ್ ಜೋಹರ್​ಗೆ ಶುರು ಆಗಿದೆಯಾ ಗಂಭೀರ ಕಾಯಿಲೆ? ಕಳವಳ ವ್ಯಕ್ತಪಡಿಸಿದ ನೆಟ್ಟಿಗರು

ಸಿನಿಮಾದ ನಿರ್ದೇಶಕ ನಿತಿಲನ್ ಸ್ವಾಮಿನಾಥನ್​ಗೆ ವಿಜಯ್ ಸೇತುಪತಿ ಹಾಗೂ ಸಿನಿಮಾದ ನಿರ್ಮಾಪಕರಾದ ಸುಧಾನ್ ಸುಂದರಮ್ ಹಾಗೂ ಜಗದೀಶ್ ಪಳನಿಸ್ವಾಮಿ ಅವರುಗಳು ಒಟ್ಟಾಗಿ ಬಿಎಂಡಬ್ಲು ಕಾರು ನೀಡಿದ್ದಾರೆ. ಈ ಐಶಾರಾಮಿ ಕಾರಿನ ಬೆಲೆ ಸುಮಾರು 1 ಕೋಟಿ ರೂಪಾಯಿಗಳು ಎನ್ನಲಾಗುತ್ತಿದೆ. ಅಂದಹಾಗೆ ‘ಮಹಾರಾಜ’ ನಿತಿಲನ್ ಅವರ ಎರಡನೇ ಸಿನಿಮಾ ಈ ಮೊದಲು 2017 ರಲ್ಲಿ ‘ಕೊರಂಗು ಬೊಮ್ಮೈ’ ಹೆಸರಿನ ಸಿನಿಮಾ ಮಾಡಿದ್ದರು. ಆ ಸಿನಿಮಾ ಸಹ ಹಿಟ್ ಆಗಿತ್ತು. ಅದೇ ಸಿನಿಮಾವನ್ನು ಕನ್ನಡದಲ್ಲಿ ‘ಒಂಬತ್ತನೇ ದಿಕ್ಕು’ ಹೆಸರಿನಲ್ಲಿ ರೀಮೇಕ್ ಆಗಿ, ಲೂಸ್ ಮಾದ ನಾಯಕನಾಗಿ ನಟಿಸಿದ್ದರು.

ಅಂದಹಾಗೆ ಈ ಸಿನಿಮಾಕ್ಕೆ ವಿಜಯ್ ಸೇತುಪತಿ ಬಂಡವಾಳ ಹಾಕಿರಲಿಲ್ಲ, ಬಜೆಟ್ ಕಡಿಮೆ ಇದ್ದು ಸಿನಿಮಾದ ಕತೆ ಇಷ್ಟವಾದ ಕಾರಣ ಲಾಭದಲ್ಲಿ ಇಂತಿಷ್ಟು ಪಾಲು ಪಡೆದುಕೊಳ್ಳುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. ಇದೀಗ ಅದೇ ವಿಜಯ್ ಸೇತುಪತಿ ಪಾಲಿಗೆ ದೊಡ್ಡ ಲಾಭವಾಗಿ ಪರಿಣಿಮಿಸಿದ್ದು, ಸುಮಾರು 50 ಕೋಟಿ ರೂಪಾಯಿ ಹಣ ವಿಜಯ್ ಸೇತುಪತಿಗೆ ಈ ಸಿನಿಮಾದಿಂದ ಸಿಕ್ಕಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Tue, 8 October 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ