AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್-ಅಟ್ಲಿ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ

Allu Arjun-Atlee: ‘ಪುಷ್ಪ 2’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಸೂಪರ್ ಹೀರೋ ಸಿನಿಮಾಕ್ಕೆ ಕೈ ಹಾಕಿದ್ದು ಹಾಲಿವುಡ್ ಲೆವೆಲ್​ ನಲ್ಲಿ ಹೆಸರು ಮಾಡುವ ಪ್ರಯತ್ನದಲ್ಲಿದ್ದಾರೆ. ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಸೈ-ಫೈ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿ. ಇದೀಗ ಈ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ ಕೊಟ್ಟಿದ್ದಾರೆ.

ಅಲ್ಲು ಅರ್ಜುನ್-ಅಟ್ಲಿ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ
Allu Arjun Atlee
ಮಂಜುನಾಥ ಸಿ.
|

Updated on: Aug 22, 2025 | 11:35 AM

Share

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಬಳಿಕ ಅಲ್ಲು ಅರ್ಜುನ್ ವಿಶ್ವಮಟ್ಟದಲ್ಲಿ ಗಮನ ಸೆಳೆಯುವ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ತಮಿಳು ನಿರ್ದೇಶಕ ಅಟ್ಲಿ ಜೊತೆಗೆ ಕೈ ಜೋಡಿಸಿದ್ದು, ಹಾಲಿವುಡ್ ಮಾದರಿಯ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’ ಮಾದರಿಯ ಯಾವುದೋ ಲೋಕದಲ್ಲಿ ನಡೆಯುವ ಸಾಹಸಮಯ ಕತೆಯನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಅಲ್ಲು ಅರ್ಜುನ್ ನಾಯಕ, ದೀಪಿಕಾ ಪಡುಕೋಣೆ ನಾಯಕಿ. ಇದೀಗ ಈ ಸಿನಿಮಾಕ್ಕೆ ಮತ್ತೊಬ್ಬ ಸ್ಟಾರ್ ನಟನ ಎಂಟ್ರಿ ಆಗಿದೆ.

ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ವಿಜಯ್ ಸೇತುಪತಿ ಸಹ ನಟಿಸಲಿದ್ದಾರೆ. ವಿಜಯ್ ಸೇತುಪತಿ ಅವರದ್ದು ಸಣ್ಣ ಪಾತ್ರವಾದರೂ ಕತೆಯ ಮೇಲೆ ಬಹಳ ಪ್ರಭಾವ ಬೀರಲಿರುವ ಪಾತ್ರವಂತೆ. ಈ ಹಿಂದೆ ಅಟ್ಲಿ ನಿರ್ದೇಶನ ಮಾಡಿದ್ದ ಬಾಲಿವುಡ್ ಸಿನಿಮಾ ‘ಜವಾನ್’ನಲ್ಲಿ ವಿಜಯ್ ಸೇತುಪತಿ ವಿಲನ್ ಪಾತ್ರದಲ್ಲಿ ನಟಿಸಿದ್ದರು. ಈಗಲೂ ಸಹ ವಿಲನ್ ಮಾದರಿಯ ಪಾತ್ರದಲ್ಲೇ ವಿಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾಕ್ಕಾಗಿ ಬರೋಬ್ಬರಿ 100 ದಿನಗಳ ಕಾಲ್ ಶೀಟ್ ಅನ್ನು ದೀಪಿಕಾ ಪಡುಕೋಣೆ ನೀಡಿದ್ದಾರೆ. ಇಷ್ಟು ಸುದೀರ್ಘ ಕಾಲ್ ಶೀಟ್ ಅನ್ನು ಅವರು ಸಂಜಯ್ ಲೀಲಾ ಬನ್ಸಾಲಿ ಸಿನಿಮಾಕ್ಕೂ ನೀಡಿರಲಿಲ್ಲ. ಈ ಸಿನಿಮಾದ ಮೇಲೆ ದೀಪಿಕಾಗೆ ಭಾರಿ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಇದು ದೀಪಿಕಾ ನಟಿಸುತ್ತಿರುವ ಮೊದಲ ಸೈ-ಫೈ ಸಿನಿಮಾ ಆಗಿದೆ.

ಇದನ್ನೂ ಓದಿ:ಅಲ್ಲು ಅರ್ಜುನ್-ಅಟ್ಲಿ ಸಿನಿಮಾಕ್ಕೆ 100 ದಿನ ಮೀಸಲಿಟ್ಟ ದೀಪಿಕಾ ಪಡುಕೋಣೆ

ಅಲ್ಲು ಅರ್ಜುನ್-ಅಟ್ಲಿ ಸಿನಿಮಾನಲ್ಲಿ ಕೇವಲ ದೀಪಿಕಾ ಪಡುಕೋಣೆ ಮಾತ್ರವೇ ಅಲ್ಲದೆ ರಶ್ಮಿಕಾ ಮಂದಣ್ಣ ಮತ್ತು ಮೃಣಾಲ್ ಠಾಕೂರ್ ಅವರುಗಳು ಸಹ ನಟಿಸುತ್ತಿದ್ದಾರೆ. ಆದರೆ ಅವರ ಪಾತ್ರಗಳು ಅತಿಥಿ ಪಾತ್ರಗಳಷ್ಟೆ ಆಗಿರಲಿವೆ. ಸಿನಿಮಾನಲ್ಲಿ ಚಿತ್ರ-ವಿಚಿತ್ರ ಜೀವಿಗಳು, ಅತ್ಯಾಧುನಿಕ ವಾಹನಗಳು, ಆಯುಧಗಳು ಇರಲಿವೆ. ಮಾನವರು ಮತ್ತು ಏಲಿಯನ್ ಮಾದರಿಯ ಜೀವಿಗಳ ನಡುವೆ ನಡೆಯುವ ಯುದ್ಧದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ಸಿನಿಮಾಕ್ಕೆಸನ್ ಪಿಕ್ಚರ್ಸ್​​ನ ಕಲಾನಿಧಿ ಮಾರನ್ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಬಂಡವಾಳ ತೊಡಗಿಸಿದ್ದಾರೆ. ಹಾಲಿವುಡ್ ನ ಕೆಲ ದೊಡ್ಡ ವಿಎಫ್​ಎಕ್ಸ್ ಸಂಸ್ಥೆಗಳು ಈ ಸಿನಿಮಾಕ್ಕಾಗಿ ಕೆಲಸ ಮಾಡಲಿವೆ.

‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್, ತ್ರಿವಿಕ್ರಮ್ ನಿರ್ದೇಶನದ ಸಿನಿಮಾನಲ್ಲಿ ನಟಿಸಬೇಕಿತ್ತು. ಆದರೆ ಅಲ್ಲು ಅರ್ಜುನ್, ಸೂಪರ್ ಹೀರೋ ಸಿನಿಮಾವನ್ನು ಆಯ್ಕೆ ಮಾಡಿಕೊಂಡು ತ್ರಿವಿಕ್ರಮ್​ಗೆ ನೋ ಹೇಳಿದ್ದಾರೆ. ಅಟ್ಲಿ ಜೊತೆಗಿನ ಸಿನಿಮಾದ ಬಳಿಕ ಅಲ್ಲು ಅರ್ಜುನ್, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?