Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಸೇತುಪತಿ ಮೇಲೆ ಕಣ್ಣಿಟ್ಟ ‘ದಿ ಫ್ಯಾಮಿಲಿ ಮ್ಯಾನ್​’ ತಂಡ; 3ನೇ ಸೀಸನ್​ನಲ್ಲಿ ಬಿಗ್​ ಸರ್ಪ್ರೈಸ್​?​

The Family Man: ‘ದಿ ಫ್ಯಾಮಿಲಿ ಮ್ಯಾನ್​’ಗೆ ದೇಶಾದ್ಯಂತ ಪ್ರೇಕ್ಷಕರು ಇದ್ದಾರೆ. ದಕ್ಷಿಣ ಭಾರತದಲ್ಲಿ ಇನ್ನಷ್ಟು ಸಂಖ್ಯೆಯ ನೋಡುಗರನ್ನು ಸೆಳೆದುಕೊಳ್ಳಲು ಇಲ್ಲಿನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುವ ತಂತ್ರವನ್ನು ಬಳಸಲಾಗುತ್ತಿದೆ.

ವಿಜಯ್​ ಸೇತುಪತಿ ಮೇಲೆ ಕಣ್ಣಿಟ್ಟ ‘ದಿ ಫ್ಯಾಮಿಲಿ ಮ್ಯಾನ್​’ ತಂಡ; 3ನೇ ಸೀಸನ್​ನಲ್ಲಿ ಬಿಗ್​ ಸರ್ಪ್ರೈಸ್​?​
ವಿಜಯ್​ ಸೇತುಪತಿ
Follow us
ಮದನ್​ ಕುಮಾರ್​
|

Updated on: Jun 21, 2021 | 8:42 AM

ಭಾರತದ ವೆಬ್​ ಸಿರೀಸ್​ಗಳ ಪೈಕಿ ‘ದಿ ಫ್ಯಾಮಿಲಿ ಮ್ಯಾನ್​’ ದೊಡ್ಡ ಯಶಸ್ಸು ಕಂಡಿದೆ. ಎರಡು ಸೀಸನ್​ಗಳಲ್ಲಿ ರಿಲೀಸ್​ ಆದ ಈ ವೆಬ್​ ಸರಣಿಗೆ ಪ್ರೇಕ್ಷಕರು ಫಿದಾ ಆದರು. ಈಗ ಮೂರನೇ ಸರಣಿ ಬಗ್ಗೆ ಕುತೂಹಲ ಉಂಟಾಗಿದೆ. ನಿರ್ದೇಶಕರಾದ ರಾಜ್​ ಮತ್ತು ಡಿಕೆ ಅವರಿಗೆ ‘ದಿ ಫ್ಯಾಮಿಲಿ ಮ್ಯಾನ್​ 3’ ವಿಚಾರದಲ್ಲಿ ಸಖತ್​ ಒತ್ತಡ ಇದೆ. ಅದಕ್ಕಾಗಿ ಅವರು ಪಾತ್ರವರ್ಗದ ಆಯ್ಕೆಯನ್ನು ತುಂಬಾ ಕಾಳಜಿ ವಹಿಸಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ಖ್ಯಾತ ನಟ ವಿಜಯ್​ ಸೇತುಪತಿ ಹೆಸರು ಕೇಳಿಬರಲು ಆರಂಭಿಸಿದೆ.

ಅಮೇಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾದ ‘ದಿ ಫ್ಯಾಮಿಲಿ ಮ್ಯಾನ್​’ ಒಂದು ಮತ್ತು ಎರಡನೇ ಸೀಸನ್​ ಸೂಪರ್​ ಹಿಟ್​ ಆಗಿರುವುದರಿಂದ 3ನೇ ಸೀಸನ್​ ಅನ್ನು ಇನ್ನಷ್ಟು ರೋಚಕವಾಗಿ ಕಟ್ಟಿಕೊಡುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಘಟಾನುಘಟಿ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ನಿರ್ದೇಶಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಜಯ್​ ಸೇತುಪತಿ ಜೊತೆ ಮಾತುಕತೆ ನಡೆದಿರುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತ ಆಗಿಲ್ಲ.

ಮೂಲಗಳ ಪ್ರಕಾರ, ‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿಯೇ ವಿಜಯ್​ ಸೇತುಪತಿ ನಟಿಸಬೇಕಿತ್ತಂತೆ. ಆದರೆ ಡೇಟ್ಸ್​ ಹೊಂದಾಣಿಕೆ ಆಗದ ಕಾರಣ ಅವರು ನಟಿಸಲು ಸಾಧ್ಯವಾಗಿಲ್ಲ. ಈಗ ಹೇಗಾದರೂ ಮಾಡಿ ಮೂರನೇ ಸೀಸನ್​ನಲ್ಲಿ ಅವರಿಂದ ಒಂದು ಮುಖ್ಯ ಪಾತ್ರ ಮಾಡಿಸಬೇಕು ಎಂದು ನಿರ್ದೇಶಕರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

‘ದಿ ಫ್ಯಾಮಿಲಿ ಮ್ಯಾನ್​’ಗೆ ದೇಶಾದ್ಯಂತ ಪ್ರೇಕ್ಷಕರು ಇದ್ದಾರೆ. ದಕ್ಷಿಣ ಭಾರತದಲ್ಲಿ ಇನ್ನಷ್ಟು ಸಂಖ್ಯೆಯ ನೋಡುಗರನ್ನು ಸೆಳೆದುಕೊಳ್ಳಲು ಇಲ್ಲಿನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳುವ ತಂತ್ರವನ್ನು ಬಳಸಲಾಗುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ಸಮಂತಾ ಅಕ್ಕಿನೇನಿ ಒಂದು ಖಡಕ್​ ಪಾತ್ರ ಮಾಡಿದ್ದಾರೆ. ಅದು ಜನಪ್ರಿಯತೆಯ ಜೊತೆಗೆ ಸಾಕಷ್ಟು ವಿವಾದವನ್ನೂ ಮೈಮೇಲೆ ಎಳೆದುಕೊಂಡಿತು. ಈ ಎಲ್ಲ ತಂತ್ರಗಳ ಮೂಲಕ ‘ದಿ ಫ್ಯಾಮಿಲಿ ಮ್ಯಾನ್​ 2’ ಯಶಸ್ವಿ ಆಗಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ಕೊನೆಯಲ್ಲಿ ಒಂದು ಸುಳಿವು ನೀಡಲಾಗಿತ್ತು. 3ನೇ ಸೀಸನ್​ನಲ್ಲಿ ಕೊರೊನಾ ವೈರಸ್​ ಬಗ್ಗೆ ಕಥೆ ಹೇಳಲಾಗುತ್ತದೆ ಎಂಬ ಸಣ್ಣ ಮಾಹಿತಿಯನ್ನು ಬಿಟ್ಟುಕೊಡಲಾಗಿತ್ತು. ಆ ಮೂಲಕ ಮುಂದಿನ ಸೀಸನ್​ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ಕೌತುಕ ಇಟ್ಟುಕೊಳ್ಳುವಂತೆ ಮಾಡಲಾಗಿದೆ. ಈಗ ವಿಜಯ್​ ಸೇತುಪತಿ ಬಗ್ಗೆ ಗುಸುಗುಸು ಕೂಡ ಕೇಳಿಬರುತ್ತಿರುವುದರಿಂದ ಆ ಕೌತುಕ ದುಪ್ಪಟ್ಟಾಗಿದೆ.

ಇದನ್ನೂ ಓದಿ:

ದಿ ಫ್ಯಾಮಿಲಿ ಮ್ಯಾನ್​ 2ನಲ್ಲಿ ಸಮಂತಾ ಆ್ಯಕ್ಷನ್​ ನೋಡಿದ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಹುಟ್ಟುಹಬ್ಬದಂದು ತಲ್ವಾರ್​ನಲ್ಲಿ ಕೇಕ್​ ಕತ್ತರಿಸಿ ವಿವಾದ ಸೃಷ್ಟಿಸಿದ ನಟ ವಿಜಯ್​ ಸೇತುಪತಿ..

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ